ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಾಲಾಜಿ, ‘ಜಿಲ್ಲೆಯಲ್ಲಿ ಮಾತ್ರ ದಿನಗೂಲಿ ನೌಕರರಿಗೆ ಸಂಬಂಧಿಸಿದ ಸಮಸ್ಯೆಯಿದೆ. ಇದಕ್ಕೆ ಸಂಬಂಧಪಟ್ಟ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ನೌಕರರನ್ನು ದಿನಗೂಲಿ ಅಥವಾ ಹೊರಗುತ್ತಿಗೆ ಎಂದು ಪರಿಗಣಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕೆ ವೇತನ ಪಾವತಿಗೆ ಸಮಸ್ಯೆಯಾಗುತ್ತಿದೆ. ಖಜಾನೆ ಇಲಾಖೆ ಅಧಿಕಾರಿಗಳು ಸೂಚಿಸಿರುವ ಮಾದರಿಯಲ್ಲೇ ಮಂಗಳವಾರ ದಾಖಲೆಪತ್ರ ಸಲ್ಲಿಸಿ ಸಂಬಳ ಬಿಡುಗಡೆ ಮಾಡಿಸುತ್ತೇವೆ’ ಎಂದು ಭರವಸೆ ನೀಡಿದರು.