ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ವಸ್ಥ ಗಂಡು ಚಿರತೆ ರಕ್ಷಣೆ

Last Updated 28 ಜುಲೈ 2022, 4:41 IST
ಅಕ್ಷರ ಗಾತ್ರ

ಮಂಗಸಂದ್ರ (ಕೋಲಾರ): ಕಾಲು ನೋವಿನಿಂದ ಅಸ್ವಸ್ಥಗೊಂಡಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

ಗ್ರಾಮದ ಬಳಿ ಹುಲ್ಲಿನ ಮೆದೆಯಡಿ ಸಿಲುಕಿ ಒಂದು ವರ್ಷದ ಗಂಡು ಚಿರತೆಯು ಅಸ್ವಸ್ಥಗೊಂಡಿತ್ತು. ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಬನ್ನೇರುಘಟ್ಟದಿಂದಬಂದಿದ್ದ ಉಮಾಶಂಕರ್‌ ಹಾಗೂ ಕೋಲಾರ ಆರ್‌ಎಫ್‌ಒ ವಾಸುದೇವಮೂರ್ತಿ ಅವರನ್ನು ಒಳಗೊಂಡ ತಂಡದ ಸದಸ್ಯರು ರಕ್ಷಿಸಿದ್ದಾರೆ.

ಬಲೆಯ ನೆರವಿನಿಂದ ಬೋನಿಗೆ ಹಾಕಿಕೊಂಡು ಚಿಕಿತ್ಸೆ ನೀಡಲು ವಾಹನದಲ್ಲಿ ಬನ್ನೇರು ಘಟ್ಟಕ್ಕೆ
ಕೊಂಡೊಯ್ದರು.

‘ವಾರದಿಂದ ಗ್ರಾಮದ ಸುತ್ತಮುತ್ತ ಓಡಾಡಿಕೊಂಡಿತ್ತು. ಕಾಲು ಹಾಗೂ ಸೊಂಟದ ನೋವಿನಿಂದ ಬಳಲುತಿತ್ತು. ಕರು ತಿನ್ನಲು ಬಂದಿದ್ದು, ಸ್ಥಳೀಯರು ಓಡಿಸಿದ್ದಾರೆ. ಆಗ ಹುಲ್ಲಿನ ಮೆದೆ ಅಡಿಗೆ ತೆರಳಿತು. ಬರಲು ಸಾಧ್ಯವಾಗಲಿಲ್ಲ. ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದೆವು. ಈ ಭಾಗದಲ್ಲಿ ಇನ್ನೂ ಎರಡು ಚಿರತೆಗಳಿವೆ. ನಾಯಿ, ಕರು, ಕುರಿ, ಮೇಕೆ ಹಿಡಿಯುತ್ತಿದ್ದು ನಮಗೆ ರಾತ್ರಿ ನಿದ್ದೆ ಇಲ್ಲದಂತಾಗಿದೆ. ಈ ಬಗ್ಗೆ ಅರಣ್ಯಾಧಿಕಾರಿಗಳು ಕ್ರಮವಹಿಸಬೇಕು’ ಎಂದು ಗ್ರಾಮಸ್ಥರು
ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT