ಗಡಿಭಾಗದಲ್ಲಿರುವ ವಸತಿ ಶಾಲೆಗಳಿಗೆ ಸರ್ಕಾರ ಕೂಡಲೇ ಕಾಯಂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಿಸಿ ವಸತಿ ಶಾಲೆಗಳ ಗುಣಮಟ್ಟ ಹೆಚ್ಚಿಸಬೇಕುಟಿ.ವಿ.ರಾಮಮೂರ್ತಿ ಪೋಷಕ
ಮಕ್ಕಳ ಹಿತದೃಷ್ಟಿಯಿಂದ ಪ್ರತಿಯೊಂದು ವಸತಿ ಶಾಲೆಯಲ್ಲಿಯೂ ಆಪ್ತ ಸಮಾಲೋಚಕರನ್ನು ನೇಮಿಸಿ ಮಕ್ಕಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು.ನಾರಾಯಣಪ್ಪ ಡಿ ಹೊಸಮನೆ ಪೋಷಕ
ಕಾಯಂ ಸಿಬ್ಬಂದಿ ನೇಮಕ ಮಾಡದ ಕಾರಣ ನೀರೀಕ್ಷೆ ಮಟ್ಟದಲ್ಲಿ ಶಿಕ್ಷಣ ದೊರೆಯುತ್ತಿಲ್ಲ. ಕಾಯಂ ಶಿಕ್ಷಕರ ಕೊರತೆಯಿಂದ ಮಕ್ಕಳ ಕಲಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ.ಸುಧಾಕರ ಪೋಷಕ
ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಎಂದು ವಸತಿ ಶಾಲೆಗೆ ಮಕ್ಕಳನ್ನು ದಾಖಲಿಸಿದ್ದೇವೆ. ಇಲ್ಲಿಯೂ ಸಹ ಕಾಯಂ ಸಿಬ್ಬಂದಿ ಇಲ್ಲದೆ ಗುಣಮಟ್ಟ ಕಳೆದುಕೊಳ್ಳುತ್ತಿದೆಭವ್ಯ ಪೋಷಕರು
ಅತಿಥಿ ಶಿಕ್ಷಕರು ಒಂದು ವರ್ಷ ಬಂದರೆ ಮತ್ತೊಂದು ವರ್ಷಕ್ಕೆ ಮತ್ತೊಬ್ಬರು ಬರುತ್ತಾರೆ. ಮಧ್ಯದಲ್ಲಿ ಯಾವಾಗ ಬೇಕಾದರೂ ಶಾಲೆ ಬಿಡುತ್ತಾರೋ ಗೊತ್ತಿಲ್ಲ. ಇದರಿಂದ ಉತ್ತಮ ರೀತಿಯಾಗಿ ಕಲಿಯಲು ಸಾಧ್ಯವಾಗುತ್ತಿಲ್ಲ.ವಿದ್ಯಾರ್ಥಿನಿ 10ನೇ ತರಗತಿ
ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿಯನ್ನು ಮೇಲಿನ ಅಧಿಕಾರಿಗಳಿಗೆ ನೀಡಲಾಗಿದೆ. ಕಾಯಂ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲುವುದು ಸರ್ಕಾರದ ಹಂತದಲ್ಲಿ ತಿರ್ಮಾನ ವಾಗಬೇಕು.ಎಂ ಶ್ರೀನಿವಾಸನ್ ಜಂಟಿ ನಿರ್ದೇಶಕ ಸಮಾಜ ಕಲ್ಯಾಣ ಇಲಾಖೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.