ಕಂಪ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎನ್.ಗಣೇಶ್ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ರಮೇಶ್ಕುಮಾರ್, ‘ಶಾಸಕನನ್ನು ಬಂಧಿಸುವಂತೆ ಆದೇಶಿಸಲು ನಾನು ಪೊಲೀಸ್ ಅಧಿಕಾರಿಯಲ್ಲ. ರಾಜಕೀಯ ಬೆಳವಣಿಗೆ ಕುರಿತು ಮಾಹಿತಿಯಿಲ್ಲ. ರಾಜ್ಯದಲ್ಲಿ ಚೆನ್ನಾಗಿ ಮಳೆ ಬೆಳೆ ಆಗಲಿ. ಜನರ ಸಮಸ್ಯೆಗೆ ಸ್ಪಂದಿಸುವ ಸಂದರ್ಭದಲ್ಲಿ ಬೇರೆ ವಿಚಾರಗಳ ಬಗ್ಗೆ ಚರ್ಚಿಸುವುದು ವ್ಯರ್ಥ’ ಎಂದರು.