‘ಮಲೇರಿಯಾ ರೋಗ ಸಾಮಾನ್ಯವಾಗಿ ಮುಂಗಾರು ಮಳೆಗಾಲದಲ್ಲಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಪ್ಲಾಸ್ಮೋಡಿಯಾ ಎಂಬ ರೋಗಾಣು ಹೊಂದಿದೆ. ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಸಿಹಿ ನೀರಿನಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಿರುತ್ತದೆ. ಬಾವಿ, ಕೆರೆ, ಹೊಂಡ, ಮನೆಗಳ ಡ್ರಮ್, ತೊಟ್ಟಿ, ಕಟ್ಟಣ ನಿರ್ಮಾಣದ ಟ್ಯಾಂಕ್ಗಳಲ್ಲಿ ಸೊಳ್ಳೆಯು ಮೊಟ್ಟೆಯಿಟ್ಟು ವಂಶಾಭಿವೃದ್ಧಿ ಮಾಡುತ್ತದೆ’ ಎಂದು ಆರೋಗ್ಯ ಇಲಾಖೆ ಕೀಟಶಾಸ್ತ್ರ ತಜ್ಞ ವೇಣುಗೋಪಾಲ್ ಮಾಹಿತಿ ನೀಡಿದರು.