ಮಂಗಳವಾರ, ಮಾರ್ಚ್ 21, 2023
20 °C
ಅಧಿಕಾರಿಗಳ ನಡೆಗೆ ಸಾರ್ವಜನಿಕರ ಆಕ್ಷೇಪ

ತೋಟದಲ್ಲಿ ಕಂದಾಯ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆಜಿಎಫ್: ಕಂದಾಯ ದಿನಾಚರಣೆ ಅಂಗವಾಗಿ ತಾಲ್ಲೂಕು ಕಚೇರಿ ಸಿಬ್ಬಂದಿ ಗುರುವಾರ ಬೂಚೇಪಲ್ಲಿಯ ಖಾಸಗಿ ತೋಟದಲ್ಲಿ ಪಾರ್ಟಿ ಮಾಡಿರುವುದು ಟೀಕೆಗೆ ಗುರಿಯಾಗಿದೆ.

ಕೋವಿಡ್ ಸಂಕಷ್ಟದ ಸಮಯದಲ್ಲಿ ತೋಟದ ಮನೆಯಲ್ಲಿ ಮಾರ್ಗಸೂಚಿ ಉಲ್ಲಂಘನೆಯಾಗಿದೆ ಎಂದು ದೂರಲಾಗಿದೆ. ತಹಶೀಲ್ದಾರ್‌ ಕೆ.ಎನ್‌. ಸುಜಾತಾ ನೇತೃತ್ವದಲ್ಲಿ ಪುರುಷ ಮತ್ತು ಮಹಿಳಾ ಸಿಬ್ಬಂದಿ ಔತಣಕೂಟದಲ್ಲಿ ಪಾಲ್ಗೊಂಡಿದ್ದರು.

ಕಂದಾಯ ಇಲಾಖೆಯ ಬಹುತೇಕ ಎಲ್ಲಾ ಸಿಬ್ಬಂದಿಯು ತೋಟದಲ್ಲಿ ಊಟ ಮಾಡುತ್ತಿರುವುದು ಮತ್ತು ತೋಟದ ಮಾಲೀಕ ನಿರ್ಮಾಣ ಮಾಡಿರುವ ಈಜುಕೊಳದ ಬಳಿ ನಿಂತು ಫೋಟೊ ತೆಗೆಸಿಕೊಂಡಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಕಚೇರಿ ಸಮಯದಲ್ಲಿ ಸಿಬ್ಬಂದಿ ತೋಟಕ್ಕೆ ಹೋಗಿ ಊಟ ಮಾಡುತ್ತಿರುವುದರಿಂದ ಮಧ್ಯಾಹ್ನದ ವೇಳೆಯಲ್ಲಿ ಕಚೇರಿ ಕೆಲಸಕ್ಕೆ ಅಡ್ಡಿ ಉಂಟಾಗಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂದು ದೂರಲಾಗಿದೆ.

ವಿವಾದವನ್ನು ಅಲ್ಲಗೆಳೆದಿರುವ ತಹಶೀಲ್ದಾರ್ ಕೆ.ಎನ್‌. ಸುಜಾತಾ, ‘ಕಂದಾಯ ದಿನಾಚರಣೆ ಅಂಗವಾಗಿ ಸಿಬ್ಬಂದಿ ಮಧ್ಯಾಹ್ನ 1.30ಕ್ಕೆ ತೋಟಕ್ಕೆ ಊಟಕ್ಕೆ ಹೋಗಿ ಮಧ್ಯಾಹ್ನ 3 ಗಂಟೆ ವೇಳೆಗೆ ಬಂದಿದ್ದಾರೆ. ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿವೆ. ಕೋವಿಡ್ ಸಮಯದಲ್ಲಿ ಸತತವಾಗಿ ಕೆಲಸ ಮಾಡಿದ್ದ ಕಂದಾಯ ಅಧಿಕಾರಿಗಳು ಕೊಂಚ ಕಾಲ ಒಂದೆಡೆ ಸೇರಿ ಊಟ ಮಾಡಿರುವುದು ತಪ್ಪಲ್ಲ. ಈ ವಿಷಯವನ್ನು ಮೇಲಧಿಕಾರಿಗಳಿಗೆ ಕೂಡ ತಿಳಿಸಲಾಗಿದೆ’
ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.