<p>ಕೆಜಿಎಫ್: ಕಂದಾಯ ದಿನಾಚರಣೆ ಅಂಗವಾಗಿ ತಾಲ್ಲೂಕು ಕಚೇರಿ ಸಿಬ್ಬಂದಿ ಗುರುವಾರ ಬೂಚೇಪಲ್ಲಿಯ ಖಾಸಗಿ ತೋಟದಲ್ಲಿ ಪಾರ್ಟಿ ಮಾಡಿರುವುದು ಟೀಕೆಗೆ ಗುರಿಯಾಗಿದೆ.</p>.<p>ಕೋವಿಡ್ ಸಂಕಷ್ಟದ ಸಮಯದಲ್ಲಿ ತೋಟದ ಮನೆಯಲ್ಲಿ ಮಾರ್ಗಸೂಚಿ ಉಲ್ಲಂಘನೆಯಾಗಿದೆ ಎಂದು ದೂರಲಾಗಿದೆ. ತಹಶೀಲ್ದಾರ್ ಕೆ.ಎನ್. ಸುಜಾತಾನೇತೃತ್ವದಲ್ಲಿ ಪುರುಷ ಮತ್ತು ಮಹಿಳಾ ಸಿಬ್ಬಂದಿ ಔತಣಕೂಟದಲ್ಲಿ ಪಾಲ್ಗೊಂಡಿದ್ದರು.</p>.<p>ಕಂದಾಯ ಇಲಾಖೆಯ ಬಹುತೇಕ ಎಲ್ಲಾ ಸಿಬ್ಬಂದಿಯು ತೋಟದಲ್ಲಿ ಊಟ ಮಾಡುತ್ತಿರುವುದು ಮತ್ತು ತೋಟದ ಮಾಲೀಕ ನಿರ್ಮಾಣ ಮಾಡಿರುವ ಈಜುಕೊಳದ ಬಳಿ ನಿಂತು ಫೋಟೊ ತೆಗೆಸಿಕೊಂಡಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.</p>.<p>ಕಚೇರಿ ಸಮಯದಲ್ಲಿ ಸಿಬ್ಬಂದಿ ತೋಟಕ್ಕೆ ಹೋಗಿ ಊಟ ಮಾಡುತ್ತಿರುವುದರಿಂದ ಮಧ್ಯಾಹ್ನದ ವೇಳೆಯಲ್ಲಿ ಕಚೇರಿ ಕೆಲಸಕ್ಕೆ ಅಡ್ಡಿ ಉಂಟಾಗಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂದು ದೂರಲಾಗಿದೆ.</p>.<p>ವಿವಾದವನ್ನು ಅಲ್ಲಗೆಳೆದಿರುವ ತಹಶೀಲ್ದಾರ್ ಕೆ.ಎನ್. ಸುಜಾತಾ, ‘ಕಂದಾಯ ದಿನಾಚರಣೆ ಅಂಗವಾಗಿ ಸಿಬ್ಬಂದಿ ಮಧ್ಯಾಹ್ನ 1.30ಕ್ಕೆ ತೋಟಕ್ಕೆ ಊಟಕ್ಕೆ ಹೋಗಿ ಮಧ್ಯಾಹ್ನ 3 ಗಂಟೆ ವೇಳೆಗೆ ಬಂದಿದ್ದಾರೆ. ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿವೆ. ಕೋವಿಡ್ ಸಮಯದಲ್ಲಿ ಸತತವಾಗಿ ಕೆಲಸ ಮಾಡಿದ್ದ ಕಂದಾಯ ಅಧಿಕಾರಿಗಳು ಕೊಂಚ ಕಾಲ ಒಂದೆಡೆ ಸೇರಿ ಊಟ ಮಾಡಿರುವುದು ತಪ್ಪಲ್ಲ. ಈ ವಿಷಯವನ್ನು ಮೇಲಧಿಕಾರಿಗಳಿಗೆ ಕೂಡ ತಿಳಿಸಲಾಗಿದೆ’<br />ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಜಿಎಫ್: ಕಂದಾಯ ದಿನಾಚರಣೆ ಅಂಗವಾಗಿ ತಾಲ್ಲೂಕು ಕಚೇರಿ ಸಿಬ್ಬಂದಿ ಗುರುವಾರ ಬೂಚೇಪಲ್ಲಿಯ ಖಾಸಗಿ ತೋಟದಲ್ಲಿ ಪಾರ್ಟಿ ಮಾಡಿರುವುದು ಟೀಕೆಗೆ ಗುರಿಯಾಗಿದೆ.</p>.<p>ಕೋವಿಡ್ ಸಂಕಷ್ಟದ ಸಮಯದಲ್ಲಿ ತೋಟದ ಮನೆಯಲ್ಲಿ ಮಾರ್ಗಸೂಚಿ ಉಲ್ಲಂಘನೆಯಾಗಿದೆ ಎಂದು ದೂರಲಾಗಿದೆ. ತಹಶೀಲ್ದಾರ್ ಕೆ.ಎನ್. ಸುಜಾತಾನೇತೃತ್ವದಲ್ಲಿ ಪುರುಷ ಮತ್ತು ಮಹಿಳಾ ಸಿಬ್ಬಂದಿ ಔತಣಕೂಟದಲ್ಲಿ ಪಾಲ್ಗೊಂಡಿದ್ದರು.</p>.<p>ಕಂದಾಯ ಇಲಾಖೆಯ ಬಹುತೇಕ ಎಲ್ಲಾ ಸಿಬ್ಬಂದಿಯು ತೋಟದಲ್ಲಿ ಊಟ ಮಾಡುತ್ತಿರುವುದು ಮತ್ತು ತೋಟದ ಮಾಲೀಕ ನಿರ್ಮಾಣ ಮಾಡಿರುವ ಈಜುಕೊಳದ ಬಳಿ ನಿಂತು ಫೋಟೊ ತೆಗೆಸಿಕೊಂಡಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.</p>.<p>ಕಚೇರಿ ಸಮಯದಲ್ಲಿ ಸಿಬ್ಬಂದಿ ತೋಟಕ್ಕೆ ಹೋಗಿ ಊಟ ಮಾಡುತ್ತಿರುವುದರಿಂದ ಮಧ್ಯಾಹ್ನದ ವೇಳೆಯಲ್ಲಿ ಕಚೇರಿ ಕೆಲಸಕ್ಕೆ ಅಡ್ಡಿ ಉಂಟಾಗಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂದು ದೂರಲಾಗಿದೆ.</p>.<p>ವಿವಾದವನ್ನು ಅಲ್ಲಗೆಳೆದಿರುವ ತಹಶೀಲ್ದಾರ್ ಕೆ.ಎನ್. ಸುಜಾತಾ, ‘ಕಂದಾಯ ದಿನಾಚರಣೆ ಅಂಗವಾಗಿ ಸಿಬ್ಬಂದಿ ಮಧ್ಯಾಹ್ನ 1.30ಕ್ಕೆ ತೋಟಕ್ಕೆ ಊಟಕ್ಕೆ ಹೋಗಿ ಮಧ್ಯಾಹ್ನ 3 ಗಂಟೆ ವೇಳೆಗೆ ಬಂದಿದ್ದಾರೆ. ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿವೆ. ಕೋವಿಡ್ ಸಮಯದಲ್ಲಿ ಸತತವಾಗಿ ಕೆಲಸ ಮಾಡಿದ್ದ ಕಂದಾಯ ಅಧಿಕಾರಿಗಳು ಕೊಂಚ ಕಾಲ ಒಂದೆಡೆ ಸೇರಿ ಊಟ ಮಾಡಿರುವುದು ತಪ್ಪಲ್ಲ. ಈ ವಿಷಯವನ್ನು ಮೇಲಧಿಕಾರಿಗಳಿಗೆ ಕೂಡ ತಿಳಿಸಲಾಗಿದೆ’<br />ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>