<p><strong>ಕೋಲಾರ</strong>: ‘ದೇಶದಲ್ಲಿ ಎಲ್ಲಿಯೂ ಅಹಿಂಸೆ ನಡೆಯಬಾರದು ಮತ್ತು ಅಹಿಂಸೆಗೆ ಅವಕಾಶ ಕೊಡಬಾರದು. ರಾಜಕಾರಣ ಬೇರೆ ಬೇರೆಯಾದರೂ ಕಾನೂನು ಎಲ್ಲರಿಗೂ ಒಂದೇ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಹೇಳಿದರು.</p>.<p>ಇಲ್ಲಿ ಶುಕ್ರವಾರ ಇಫ್ಕೋ ಟೊಕಿಯೋ ಸಂಸ್ಥೆ ವತಿಯಿಂದ ಮಕ್ಕಳ ಶಿಕ್ಷಣಕ್ಕೆ ಹಣಕಾಸು ನೆರವಿನ ಚೆಕ್ ವಿತರಿಸಿ ಮಾತನಾಡಿ, ‘ದೇಶದಲ್ಲಿ ಮಹಾತ್ಮ ಗಾಂಧೀಜಿಯ ಶಾಂತಿ, ಅಹಿಂಸೆ ತತ್ವದಡಿ ಹೋರಾಟ ನಡೆಸಿ ಸ್ವಾತಂತ್ರ್ಯ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ. ಹೀಗಾಗಿ ಎಲ್ಲರೂ ಗಾಂಧೀಜಿ ತತ್ವಾದರ್ಶ ಪಾಲಿಸಬೇಕು’ ಎಂದರು.</p>.<p>‘ಬೆಂಗಳೂರಿನ ದೇವರಜೀವನಹಳ್ಳಿ ಮತ್ತು ಕಾಡುಗೊಂಡನಹಳ್ಳಿ ಗಲಭೆಯು ಜಾತಿ ಆಧಾರದಲ್ಲಿ ನಡೆಯಲಿಲ್ಲ. ರಾಜಕೀಯ ದುರುದ್ದೇಶಕ್ಕೆ ಈ ಗಲಭೆಯಾಗಿದ್ದು, ಇದನ್ನು ದೊಡ್ಡದು ಮಾಡಲಾಗುತ್ತಿದೆ. ಇದು ಅಮಾನವೀಯ ಘಟನೆಯಾಗಿದ್ದು, ಎಲ್ಲರೂ ಖಂಡಿಸಬೇಕು’ ಎಂದು ತಿಳಿಸಿದರು.</p>.<p>‘ಯಾರೇ ತಪ್ಪು ಮಾಡಿದರೂ ಕಾನೂನಾತ್ಮಕವಾಗಿ ಶಿಕ್ಷೆಯಾಗಬೇಕು. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷ ನಿಷೇಧಿಸಲು ಆಗುವುದಿಲ್ಲ. ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆ ನಿಷೇಧಿಸಲು ಸರ್ಕಾರಕ್ಕೆ ಅಧಿಕಾರವಿದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಯರಗೋಳ್ ಯೋಜನೆ ಕಾಮಗಾರಿ ಜನವರಿ ವೇಳೆಗೆ ಪೂರ್ಣಗೊಳಿಸುವುದಾಗಿ ಗುತ್ತಿಗೆದಾರರು ಭರವಸೆ ನೀಡಿದ್ದಾರೆ. ಮಾರ್ಕಂಡೇಯ ಕೆರೆ ತುಂಬಿ ಕೋಡಿ ಹರಿದರೆ ಆ ನೀರು ಯರಗೋಳ್ ಮಾರ್ಗವಾಗಿ ತಮಿಳುನಾಡಿಗೆ ಹರಿದು ಹೋಗುತ್ತಿತ್ತು. ನೀರು ಸಂಗ್ರಹಣೆಗೆ ಜಿಲ್ಲೆಯಲ್ಲಿ ಡ್ಯಾಮ್ ಇರಲಿಲ್ಲಿ. ಈಗ ಡ್ಯಾಮ್ ಭರ್ತಿಯಾದರೆ ಮಾತ್ರ ನೀರು ತಮಿಳುನಾಡಿಗೆ ಹೋಗಲು ಸಾಧ್ಯ’ ಎಂದು ವಿವರಿಸಿದರು.</p>.<p><strong>ಮಳೆ ಕಡಿಮೆ:</strong> ‘ಯರಗೋಳ್ ಡ್ಯಾಮ್ಗೆ ನೀರು ಬಂದರೂ ಸಹ ಮಳೆ ನೀರು ಮಿಶ್ರವಾಗದಂತೆ ಜಾಕ್ವೆಲ್ ಮೂಲಕ ನಿಯಂತ್ರಿಸಬಹುದು. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗುತ್ತಿದೆ. ಹೆಚ್ಚು ಮಳೆಯಾದರೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುತ್ತದೆ. ಕೆ.ಸಿ ವ್ಯಾಲಿ ನೀರಿನಿಂದ ಅಂತರ್ಜಲ ವೃದ್ಧಿಯಾಗಲಿದ್ದು, ಕೊಳವೆ ಬಾವಿಗಳು ಮರುಪೂರಣವಾಗುತ್ತವೆ’ ಎಂದರು.</p>.<p>ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮಣ್ಣ, ಕೋಲಾರ ಎಪಿಎಂಸಿ ಅಧ್ಯಕ್ಷ ಮಂಜುನಾಥ್, ನರಸಾಪುರ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಮುನಿರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ದೇಶದಲ್ಲಿ ಎಲ್ಲಿಯೂ ಅಹಿಂಸೆ ನಡೆಯಬಾರದು ಮತ್ತು ಅಹಿಂಸೆಗೆ ಅವಕಾಶ ಕೊಡಬಾರದು. ರಾಜಕಾರಣ ಬೇರೆ ಬೇರೆಯಾದರೂ ಕಾನೂನು ಎಲ್ಲರಿಗೂ ಒಂದೇ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಹೇಳಿದರು.</p>.<p>ಇಲ್ಲಿ ಶುಕ್ರವಾರ ಇಫ್ಕೋ ಟೊಕಿಯೋ ಸಂಸ್ಥೆ ವತಿಯಿಂದ ಮಕ್ಕಳ ಶಿಕ್ಷಣಕ್ಕೆ ಹಣಕಾಸು ನೆರವಿನ ಚೆಕ್ ವಿತರಿಸಿ ಮಾತನಾಡಿ, ‘ದೇಶದಲ್ಲಿ ಮಹಾತ್ಮ ಗಾಂಧೀಜಿಯ ಶಾಂತಿ, ಅಹಿಂಸೆ ತತ್ವದಡಿ ಹೋರಾಟ ನಡೆಸಿ ಸ್ವಾತಂತ್ರ್ಯ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ. ಹೀಗಾಗಿ ಎಲ್ಲರೂ ಗಾಂಧೀಜಿ ತತ್ವಾದರ್ಶ ಪಾಲಿಸಬೇಕು’ ಎಂದರು.</p>.<p>‘ಬೆಂಗಳೂರಿನ ದೇವರಜೀವನಹಳ್ಳಿ ಮತ್ತು ಕಾಡುಗೊಂಡನಹಳ್ಳಿ ಗಲಭೆಯು ಜಾತಿ ಆಧಾರದಲ್ಲಿ ನಡೆಯಲಿಲ್ಲ. ರಾಜಕೀಯ ದುರುದ್ದೇಶಕ್ಕೆ ಈ ಗಲಭೆಯಾಗಿದ್ದು, ಇದನ್ನು ದೊಡ್ಡದು ಮಾಡಲಾಗುತ್ತಿದೆ. ಇದು ಅಮಾನವೀಯ ಘಟನೆಯಾಗಿದ್ದು, ಎಲ್ಲರೂ ಖಂಡಿಸಬೇಕು’ ಎಂದು ತಿಳಿಸಿದರು.</p>.<p>‘ಯಾರೇ ತಪ್ಪು ಮಾಡಿದರೂ ಕಾನೂನಾತ್ಮಕವಾಗಿ ಶಿಕ್ಷೆಯಾಗಬೇಕು. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷ ನಿಷೇಧಿಸಲು ಆಗುವುದಿಲ್ಲ. ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆ ನಿಷೇಧಿಸಲು ಸರ್ಕಾರಕ್ಕೆ ಅಧಿಕಾರವಿದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಯರಗೋಳ್ ಯೋಜನೆ ಕಾಮಗಾರಿ ಜನವರಿ ವೇಳೆಗೆ ಪೂರ್ಣಗೊಳಿಸುವುದಾಗಿ ಗುತ್ತಿಗೆದಾರರು ಭರವಸೆ ನೀಡಿದ್ದಾರೆ. ಮಾರ್ಕಂಡೇಯ ಕೆರೆ ತುಂಬಿ ಕೋಡಿ ಹರಿದರೆ ಆ ನೀರು ಯರಗೋಳ್ ಮಾರ್ಗವಾಗಿ ತಮಿಳುನಾಡಿಗೆ ಹರಿದು ಹೋಗುತ್ತಿತ್ತು. ನೀರು ಸಂಗ್ರಹಣೆಗೆ ಜಿಲ್ಲೆಯಲ್ಲಿ ಡ್ಯಾಮ್ ಇರಲಿಲ್ಲಿ. ಈಗ ಡ್ಯಾಮ್ ಭರ್ತಿಯಾದರೆ ಮಾತ್ರ ನೀರು ತಮಿಳುನಾಡಿಗೆ ಹೋಗಲು ಸಾಧ್ಯ’ ಎಂದು ವಿವರಿಸಿದರು.</p>.<p><strong>ಮಳೆ ಕಡಿಮೆ:</strong> ‘ಯರಗೋಳ್ ಡ್ಯಾಮ್ಗೆ ನೀರು ಬಂದರೂ ಸಹ ಮಳೆ ನೀರು ಮಿಶ್ರವಾಗದಂತೆ ಜಾಕ್ವೆಲ್ ಮೂಲಕ ನಿಯಂತ್ರಿಸಬಹುದು. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗುತ್ತಿದೆ. ಹೆಚ್ಚು ಮಳೆಯಾದರೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುತ್ತದೆ. ಕೆ.ಸಿ ವ್ಯಾಲಿ ನೀರಿನಿಂದ ಅಂತರ್ಜಲ ವೃದ್ಧಿಯಾಗಲಿದ್ದು, ಕೊಳವೆ ಬಾವಿಗಳು ಮರುಪೂರಣವಾಗುತ್ತವೆ’ ಎಂದರು.</p>.<p>ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮಣ್ಣ, ಕೋಲಾರ ಎಪಿಎಂಸಿ ಅಧ್ಯಕ್ಷ ಮಂಜುನಾಥ್, ನರಸಾಪುರ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಮುನಿರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>