<p><strong>ಟೇಕಲ್</strong>: ಕೊಂಡಶೆಟ್ಟಹಳ್ಳಿಯಲ್ಲಿ ₹4ಕೋಟಿ ವೆಚ್ಚದಲ್ಲಿ 500 ಮೀಟರ್ನಷ್ಟು ಕಾಂಕ್ರಿಟ್ ರಸ್ತೆ ಹಾಗೂ ದರ್ಗಾ ಬಳಿ ಸೇತುವೆ ನಿರ್ಮಿಸಲಾಗುವುದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.</p>.<p>ಮಾಲೂರು–ಬಂಗಾರಪೇಟೆ ರಾಜ್ಯ ಹೆದ್ದಾರಿ 95 ಕೊಂಡಶೆಟ್ಟಹಳ್ಳಿಯಲ್ಲಿ ರಸ್ತೆ ಮೇಲೆ ಸುರಿಯುವ ನೀರು ಮನೆಗಳಿಗೆ ನುಗ್ಗುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿ ಗ್ರಾಮದೊಳಗೆ ನೀರು ಬಾರದಂತೆ ದೊಡ್ಡದೊಂದು ಮೋರಿ ನಿರ್ಮಿಸಿ ಅಲ್ಲಿಂದ ನೀರು ಕಾಲುವೆಗೆ ಹರಿದು ಹೋಗುವಂತೆ ಮಾಡಲಾಗುವುದು. ಕಾಂಕ್ರಿಟ್ ರಸ್ತೆ ನಿರ್ಮಿಸಿ ಶಾಶ್ವತವಾಗಿ ಸಮಸ್ಯೆ ಬಗೆಹರಿಸಲಾಗುವುದು ಎಂದರು.</p>.<p>ಗ್ರಾಮದ ದರ್ಗಾ ಬಳಿ ಸುಮಾರು ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಸೇತುವೆಯು ಶಿಥಿಲವಾಗಿದೆ. ಅದನ್ನು ಸರಿಪಡಿಸಲಾಗುವುದು ಎಂದರು.</p>.<p>ಲೋಕೋಪಯೋಗಿ ಇಲಾಖೆ ಅಧಿಕಾರಿ ಎಂ.ಬಿ.ರಾಜು, ಸಹಾಯಕ ಎಂಜಿನಿಯರ್ ರಾಜ್ ಗೋಪಾಲ್, ಗುತ್ತಿಗೆದಾರ ಚಂಬೆ ನಾರಾಯಣಸ್ವಾಮಿ , ಕೃಷಿಕ ಸಮಾಜದ ಅಧ್ಯಕ್ಷ ಹನುಮಂತಪ್ಪ, ಎಂ.ರಮೇಶ್ ಗೌಡ , ದರಕಾಸ್ತು ಸಮಿತಿ ಸದಸ್ಯ ಸತೀಶ್ ಬಾಬು, ಪ್ರಗತಿ ಶ್ರೀನಿವಾಸ್, ಗ್ರಾಂ.ಪಂ ಅಧ್ಯಕ್ಷೆ ಅರ್ಚನಾ ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಟೇಕಲ್</strong>: ಕೊಂಡಶೆಟ್ಟಹಳ್ಳಿಯಲ್ಲಿ ₹4ಕೋಟಿ ವೆಚ್ಚದಲ್ಲಿ 500 ಮೀಟರ್ನಷ್ಟು ಕಾಂಕ್ರಿಟ್ ರಸ್ತೆ ಹಾಗೂ ದರ್ಗಾ ಬಳಿ ಸೇತುವೆ ನಿರ್ಮಿಸಲಾಗುವುದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.</p>.<p>ಮಾಲೂರು–ಬಂಗಾರಪೇಟೆ ರಾಜ್ಯ ಹೆದ್ದಾರಿ 95 ಕೊಂಡಶೆಟ್ಟಹಳ್ಳಿಯಲ್ಲಿ ರಸ್ತೆ ಮೇಲೆ ಸುರಿಯುವ ನೀರು ಮನೆಗಳಿಗೆ ನುಗ್ಗುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿ ಗ್ರಾಮದೊಳಗೆ ನೀರು ಬಾರದಂತೆ ದೊಡ್ಡದೊಂದು ಮೋರಿ ನಿರ್ಮಿಸಿ ಅಲ್ಲಿಂದ ನೀರು ಕಾಲುವೆಗೆ ಹರಿದು ಹೋಗುವಂತೆ ಮಾಡಲಾಗುವುದು. ಕಾಂಕ್ರಿಟ್ ರಸ್ತೆ ನಿರ್ಮಿಸಿ ಶಾಶ್ವತವಾಗಿ ಸಮಸ್ಯೆ ಬಗೆಹರಿಸಲಾಗುವುದು ಎಂದರು.</p>.<p>ಗ್ರಾಮದ ದರ್ಗಾ ಬಳಿ ಸುಮಾರು ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಸೇತುವೆಯು ಶಿಥಿಲವಾಗಿದೆ. ಅದನ್ನು ಸರಿಪಡಿಸಲಾಗುವುದು ಎಂದರು.</p>.<p>ಲೋಕೋಪಯೋಗಿ ಇಲಾಖೆ ಅಧಿಕಾರಿ ಎಂ.ಬಿ.ರಾಜು, ಸಹಾಯಕ ಎಂಜಿನಿಯರ್ ರಾಜ್ ಗೋಪಾಲ್, ಗುತ್ತಿಗೆದಾರ ಚಂಬೆ ನಾರಾಯಣಸ್ವಾಮಿ , ಕೃಷಿಕ ಸಮಾಜದ ಅಧ್ಯಕ್ಷ ಹನುಮಂತಪ್ಪ, ಎಂ.ರಮೇಶ್ ಗೌಡ , ದರಕಾಸ್ತು ಸಮಿತಿ ಸದಸ್ಯ ಸತೀಶ್ ಬಾಬು, ಪ್ರಗತಿ ಶ್ರೀನಿವಾಸ್, ಗ್ರಾಂ.ಪಂ ಅಧ್ಯಕ್ಷೆ ಅರ್ಚನಾ ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>