<p><strong>ಮುಳಬಾಗಿಲು</strong>: ತಾಲ್ಲೂಕಿನ ಸಾತನೂರು ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಸಮೃದ್ಧಿ ಮಂಜುನಾಥ್ ಬುಧವಾರ ಚಾಲನೆ ನೀಡಿದರು. </p>.<p>ಈ ವೇಳೆ ಮಾತನಾಡಿದ ಅವರು, ‘ತಾಲ್ಲೂಕಿನಾದ್ಯಂತ ಕೇಂದ್ರ ಸರ್ಕಾರದಿಂದ 50 ಕಿ.ಮೀ ಹಾಗೂ ರಾಜ್ಯ ಸರ್ಕಾರದಿಂದ 25 ಕಿ.ಮೀ ರಸ್ತೆ ಕಾಮಗಾರಿಗೆ ಅವಕಾಶ ಸಿಕ್ಕಿದೆ’ ಎಂದು ಹೇಳಿದರು. </p>.<p>ಸಾತನೂರು ಗ್ರಾಮದಲ್ಲಿ ಈಗಾಗಲೇ ವಾಲ್ಮೀಕಿ ಭವನ ಹಾಗೂ ಹೈಮಾಸ್ಟ್ ದೀಪ ಅಳವಡಿಸಲಾಗಿದೆ. ಸಾರ್ವಜನಿಕರ ಸುಗುಮ ಸಂಚಾರಕ್ಕಾಗಿ ರಸ್ತೆ ಕಾಮಗಾರಿ ಕೈಗೊಳ್ಳಲಾಗಿದೆ. ಗ್ರಾಮಕ್ಕೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು. </p>.<p>ಸಾತನೂರು–ಬಿಸನಹಳ್ಳಿ ಮಧ್ಯೆ ಸುಸಜ್ಜಿತವಾದ ರಸ್ತೆ ಇಲ್ಲದೆ ಜನ ಹಲವು ದಿನ ಪರದಾಡುತ್ತಿದ್ದರು. ಇದನ್ನು ಗಮನಿಸಿ ಒಂದು ಕಿ.ಮೀ ವ್ಯಾಪ್ತಿಯಲ್ಲಿ ರಸ್ತೆ ದುರಸ್ತಿಗೊಳಿಸಲಾಗುತ್ತಿದೆ ಎಂದರು. </p>.<p>ಇತ್ತೀಚೆಗೆ ಮುಳಬಾಗಿಲು ನಗರದಲ್ಲಿ ಶಿಕ್ಷಕಿ ದಿವ್ಯಶ್ರೀ ಅವರ ಕೊಲೆ ನಡೆದಿದೆ. ಈ ಹಿನ್ನೆಲೆಯಲ್ಲಿ 23ರಂದು ಎಲ್ಲ ಪ್ರಾಥಮಿಕ ಶಾಲಾ ಶಿಕ್ಷಕರು ಸೇರಿ ಬೃಹತ್ ಮಟ್ಟದ ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗುವುದು. ಈ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಲಾಗುವುದು ಎಂದು ಹೇಳಿದರು. </p>.<p>ಸಾಮೇಗೌಡ, ಚಾಮರೆಡ್ಡಿಹಳ್ಳಿ ಪ್ರಕಾಶ್, ಮುನಿಸ್ವಾಮಿ ಗೌಡ, ಗೊಲ್ಲಹಳ್ಳಿ ಜಗದೀಶ್, ತಹಶೀಲ್ದಾರ್ ಬಿ.ಸಿ. ವೆಂಕಟಾಚಲಪತಿ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಸರ್ವೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ತಾಲ್ಲೂಕಿನ ಸಾತನೂರು ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಸಮೃದ್ಧಿ ಮಂಜುನಾಥ್ ಬುಧವಾರ ಚಾಲನೆ ನೀಡಿದರು. </p>.<p>ಈ ವೇಳೆ ಮಾತನಾಡಿದ ಅವರು, ‘ತಾಲ್ಲೂಕಿನಾದ್ಯಂತ ಕೇಂದ್ರ ಸರ್ಕಾರದಿಂದ 50 ಕಿ.ಮೀ ಹಾಗೂ ರಾಜ್ಯ ಸರ್ಕಾರದಿಂದ 25 ಕಿ.ಮೀ ರಸ್ತೆ ಕಾಮಗಾರಿಗೆ ಅವಕಾಶ ಸಿಕ್ಕಿದೆ’ ಎಂದು ಹೇಳಿದರು. </p>.<p>ಸಾತನೂರು ಗ್ರಾಮದಲ್ಲಿ ಈಗಾಗಲೇ ವಾಲ್ಮೀಕಿ ಭವನ ಹಾಗೂ ಹೈಮಾಸ್ಟ್ ದೀಪ ಅಳವಡಿಸಲಾಗಿದೆ. ಸಾರ್ವಜನಿಕರ ಸುಗುಮ ಸಂಚಾರಕ್ಕಾಗಿ ರಸ್ತೆ ಕಾಮಗಾರಿ ಕೈಗೊಳ್ಳಲಾಗಿದೆ. ಗ್ರಾಮಕ್ಕೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು. </p>.<p>ಸಾತನೂರು–ಬಿಸನಹಳ್ಳಿ ಮಧ್ಯೆ ಸುಸಜ್ಜಿತವಾದ ರಸ್ತೆ ಇಲ್ಲದೆ ಜನ ಹಲವು ದಿನ ಪರದಾಡುತ್ತಿದ್ದರು. ಇದನ್ನು ಗಮನಿಸಿ ಒಂದು ಕಿ.ಮೀ ವ್ಯಾಪ್ತಿಯಲ್ಲಿ ರಸ್ತೆ ದುರಸ್ತಿಗೊಳಿಸಲಾಗುತ್ತಿದೆ ಎಂದರು. </p>.<p>ಇತ್ತೀಚೆಗೆ ಮುಳಬಾಗಿಲು ನಗರದಲ್ಲಿ ಶಿಕ್ಷಕಿ ದಿವ್ಯಶ್ರೀ ಅವರ ಕೊಲೆ ನಡೆದಿದೆ. ಈ ಹಿನ್ನೆಲೆಯಲ್ಲಿ 23ರಂದು ಎಲ್ಲ ಪ್ರಾಥಮಿಕ ಶಾಲಾ ಶಿಕ್ಷಕರು ಸೇರಿ ಬೃಹತ್ ಮಟ್ಟದ ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗುವುದು. ಈ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಲಾಗುವುದು ಎಂದು ಹೇಳಿದರು. </p>.<p>ಸಾಮೇಗೌಡ, ಚಾಮರೆಡ್ಡಿಹಳ್ಳಿ ಪ್ರಕಾಶ್, ಮುನಿಸ್ವಾಮಿ ಗೌಡ, ಗೊಲ್ಲಹಳ್ಳಿ ಜಗದೀಶ್, ತಹಶೀಲ್ದಾರ್ ಬಿ.ಸಿ. ವೆಂಕಟಾಚಲಪತಿ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಸರ್ವೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>