<p><strong>ಮುಳಬಾಗಿಲು:</strong> ತಾಲ್ಲೂಕಿನ ಬೈರಕೂರು ಹೋಬಳಿ ವ್ಯಾಪ್ತಿಯ ಕಾಡೇನಹಳ್ಳಿ, ಬಂಗವಾದಿ, ನಗವಾರ, ಪೆರಮಾಕನಹಳ್ಳಿ, ಪದ್ಮಘಟ್ಟ, ಎನ್.ವಡ್ಡಹಳ್ಳಿ, ತೊಂಡಹಳ್ಳಿ ಮತ್ತಿತರರ ಗ್ರಾಮಗಳಲ್ಲಿ ಸಿಸಿ ರಸ್ತೆ, ಹೈಮಾಸ್ಟ್ ಹಾಗೂ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಸೋಮವಾರ ಶಾಸಕ ಸಮೃದ್ಧಿ ಮಂಜುನಾಥ್ ಗುದ್ದಲಿ ಪೂಜೆ ನೆರವೇರಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, ‘ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕಾಂಗ್ರೆಸ್ ಪಕ್ಷದ ಶಾಸಕರಿಗೆ ₹100 ಕೋಟಿ ಅನುದಾನ ನೀಡಿದರೆ, ನನಗೆ ಕೇವಲ ₹10 ಕೋಟಿ ನೀಡಿದ್ದಾರೆ. ಈ ಹಣವನ್ನು ಯಾವ ಅಭಿವೃದ್ಧಿಗೆ ಬಳಸಲಿ ಎಂದು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದರು’.</p>.<p>‘ಆರ್ಎಸ್ಎಸ್, ಗ್ಯಾರಂಟಿ, ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಿನ ಮುಖ್ಯಮಂತ್ರಿ ಸ್ಥಾನದ ಖುರ್ಚಿಗಳ ಕೆಸರೆರಚಾಟಗಳಲ್ಲಿ ರಾಜ್ಯದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಹಾಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತೊಲಗಲಿ’ ಎಂದು ಶಾಪ ಹಾಕಿದರು.</p>.<p>‘ನವೆಂಬರ್ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರೀ ಕ್ರಾಂತಿಯಾಗಲಿದೆ ಎಂಬ ಚರ್ಚೆ ನಡೆಯುತ್ತಿದೆ. ಆದರೆ, ಯಾವುದೇ ಕ್ರಾಂತಿಯೂ ನಡೆಯಲ್ಲ. ಏನೂ ಆಗಲ್ಲ ಕೇವಲ ಜನರ ದಿಕ್ಕು ತಪ್ಪಿಸುತ್ತಿದ್ದಾರಷ್ಟೇ’ ಎಂದರು.</p>.<p>ಕೋಮುಲ್ ನಿರ್ದೇಶಕ ಕಾಡೇನಹಳ್ಳಿ ಕೆ.ಎನ್.ನಾಗರಾಜ್, ಶಿನಿಗೇನಹಳ್ಳಿ ಜಿ.ಆನಂದ ರೆಡ್ಡಿ, ರಘುಪತಿ ರೆಡ್ಡಿ, ಎಂ.ಆರ್.ಮುರಳಿ, ಶ್ರೀನಿವಾಸ ರೆಡ್ಡಿ, ನಗವಾರ ಸತ್ಯಣ್ಣ, ಎಂ.ಗೊಲ್ಲಹಳ್ಳಿ ಪ್ರಭಾಕರ್, ವರದಪ್ಪ, ಗೊಲ್ಲಹಳ್ಳಿ ಜಗದೀಶ್, ಲಕ್ಷ್ಮಿ ನಾರಾಯಣ, ಪ್ರಸಾದ್, ಎನ್.ಆರ್.ಎಸ್.ಮಂಜುನಾಥ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು:</strong> ತಾಲ್ಲೂಕಿನ ಬೈರಕೂರು ಹೋಬಳಿ ವ್ಯಾಪ್ತಿಯ ಕಾಡೇನಹಳ್ಳಿ, ಬಂಗವಾದಿ, ನಗವಾರ, ಪೆರಮಾಕನಹಳ್ಳಿ, ಪದ್ಮಘಟ್ಟ, ಎನ್.ವಡ್ಡಹಳ್ಳಿ, ತೊಂಡಹಳ್ಳಿ ಮತ್ತಿತರರ ಗ್ರಾಮಗಳಲ್ಲಿ ಸಿಸಿ ರಸ್ತೆ, ಹೈಮಾಸ್ಟ್ ಹಾಗೂ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಸೋಮವಾರ ಶಾಸಕ ಸಮೃದ್ಧಿ ಮಂಜುನಾಥ್ ಗುದ್ದಲಿ ಪೂಜೆ ನೆರವೇರಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, ‘ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕಾಂಗ್ರೆಸ್ ಪಕ್ಷದ ಶಾಸಕರಿಗೆ ₹100 ಕೋಟಿ ಅನುದಾನ ನೀಡಿದರೆ, ನನಗೆ ಕೇವಲ ₹10 ಕೋಟಿ ನೀಡಿದ್ದಾರೆ. ಈ ಹಣವನ್ನು ಯಾವ ಅಭಿವೃದ್ಧಿಗೆ ಬಳಸಲಿ ಎಂದು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದರು’.</p>.<p>‘ಆರ್ಎಸ್ಎಸ್, ಗ್ಯಾರಂಟಿ, ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಿನ ಮುಖ್ಯಮಂತ್ರಿ ಸ್ಥಾನದ ಖುರ್ಚಿಗಳ ಕೆಸರೆರಚಾಟಗಳಲ್ಲಿ ರಾಜ್ಯದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಹಾಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತೊಲಗಲಿ’ ಎಂದು ಶಾಪ ಹಾಕಿದರು.</p>.<p>‘ನವೆಂಬರ್ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರೀ ಕ್ರಾಂತಿಯಾಗಲಿದೆ ಎಂಬ ಚರ್ಚೆ ನಡೆಯುತ್ತಿದೆ. ಆದರೆ, ಯಾವುದೇ ಕ್ರಾಂತಿಯೂ ನಡೆಯಲ್ಲ. ಏನೂ ಆಗಲ್ಲ ಕೇವಲ ಜನರ ದಿಕ್ಕು ತಪ್ಪಿಸುತ್ತಿದ್ದಾರಷ್ಟೇ’ ಎಂದರು.</p>.<p>ಕೋಮುಲ್ ನಿರ್ದೇಶಕ ಕಾಡೇನಹಳ್ಳಿ ಕೆ.ಎನ್.ನಾಗರಾಜ್, ಶಿನಿಗೇನಹಳ್ಳಿ ಜಿ.ಆನಂದ ರೆಡ್ಡಿ, ರಘುಪತಿ ರೆಡ್ಡಿ, ಎಂ.ಆರ್.ಮುರಳಿ, ಶ್ರೀನಿವಾಸ ರೆಡ್ಡಿ, ನಗವಾರ ಸತ್ಯಣ್ಣ, ಎಂ.ಗೊಲ್ಲಹಳ್ಳಿ ಪ್ರಭಾಕರ್, ವರದಪ್ಪ, ಗೊಲ್ಲಹಳ್ಳಿ ಜಗದೀಶ್, ಲಕ್ಷ್ಮಿ ನಾರಾಯಣ, ಪ್ರಸಾದ್, ಎನ್.ಆರ್.ಎಸ್.ಮಂಜುನಾಥ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>