ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಕುವಿನಿಂದ ತಿವಿದು ಸುಲಿಗೆ

Last Updated 23 ಜುಲೈ 2021, 3:39 IST
ಅಕ್ಷರ ಗಾತ್ರ

ಕೆಜಿಎಫ್‌: ನಗರದ ಎಂ.ಎಲ್‌. ಬ್ಲಾಕ್‌ ಬಳಿ ಸೈನೈಡ್ ಗುಡ್ಡ ವೀಕ್ಷಿಸುತ್ತಿದ್ದ ಇಬ್ಬರು ಯುವಕರ ಮೇಲೆ ಮೂವರು ಅಪರಿಚಿತರು ದಾಳಿ ನಡೆಸಿ ಅವರ ಬಳಿ ಇದ್ದ ಮೊಬೈಲ್ ಮತ್ತು ಚಿನ್ನದ ಒಡವೆಗಳನ್ನು ದೋಚಿದ್ದಾರೆ.

ಬೆಂಗಳೂರು ಮೂಲದ ದರ್ಶನ್‌ ಮತ್ತು ಕಾರ್ತಿಕ್ ಎಂಬುವರು ಸೈನೈಡ್ ಗುಡ್ಡದ ಮೇಲೆ ಏರಿ ವೀಕ್ಷಣೆ ಮಾಡುತ್ತಿದ್ದರು. ಈ ವೇಳೆ ಅಪರಿಚಿತರು ಅವರನ್ನು ಅಡ್ಡಗಟ್ಟಿದ್ದಾರೆ. ದರ್ಶನ್‌ ಅವರ ತೋರುಬೆರಳಿಗೆ ಚಾಕುವಿನಲ್ಲಿ ತಿವಿದಿದ್ದಾರೆ.

ನಂತರ ಅವರ ಬಳಿ ಇದ್ದ ಮೂರು ಮೊಬೈಲ್‌, ಚಿನ್ನ, ಬೆಳ್ಳಿಯ ಆಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

ಇವುಗಳ ಮೊತ್ತ ಸುಮಾರು ₹ 92 ಸಾವಿರ ಆಗಿದೆ. ಊರಿಗಾಂ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT