<p><strong>ಶ್ರೀನಿವಾಸಪುರ</strong>: ಪಟ್ಟಣದ ಹೊರವಲಯದ ಕಾಲೊನಿ ಗೇಟ್ ಬಳಿ ದರೋಡೆಕೋರರು ಕಾರಿನ ಗಾಜು ಒಡೆದು ತರಕಾರಿ ಮಂಡಿ ಮಾಲೀಕನ ಮೇಲೆ ಹಲ್ಲೆ ನಡೆಸಿ ₹ 15 ಲಕ್ಷ ದೋಚಿ ಪರಾರಿಯಾಗಿದ್ದಾರೆ.</p>.<p>ತರಕಾರಿ ಮಂಡಿ ಮಾಲೀಕ ವ್ಯಕ್ತಿ ಲಿಂಗರಾಜು ಹಲ್ಲೆಗೊಳಗಾದ ಹಾಗೂ ಹಣ ಕಳೆದುಕೊಂಡ ವ್ಯಕ್ತಿ. ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಮೂತ್ರ ವಿಸರ್ಜನೆಗೆಂದು ಕಾರು ನಿಲ್ಲಿಸಿದ್ದ ವೇಳೆ ಈ ಘಟನೆ ನಡೆದಿದೆ. ದರೋಡೆಕೋರರು ತನ್ನ ಮೇಲೆ ಬಿಯರ್ ಬಾಟಲ್ನಿಂದ ಹಲ್ಲೆ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.</p>.<p>ಲಿಂಗರಾಜು ಕಲ್ಲೂರು ಗ್ರಾಮದ ಬಳಿ ಇರುವ ಎಲ್ಎಸ್ಎಂ ವೆಜಿಟೇಬಲ್ಸ್ ಮಾರ್ಕೆಟ್ ನಡೆಸುತ್ತಿದ್ದಾರೆ. ರೈತರಿಗೆ ಹಣ ನೀಡಲು ಸ್ವಗ್ರಾಮ ವಕ್ಕಲೇರಿ ಸಮೀಪದ ಮಾರ್ಕಂಡಪುರದಿಂದ ಹಣ ತರುತ್ತಿದ್ದರು ಎಂಬುದು ಗೊತ್ತಾಗಿದೆ.</p>.<p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್, ಡಿವೈಎಸ್ಪಿ ಮನಿಷಾ, ಶ್ರೀನಿವಾಸಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಂ.ಬಿ.ಗೊರವನಕೊಳ್ಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದರು. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ</strong>: ಪಟ್ಟಣದ ಹೊರವಲಯದ ಕಾಲೊನಿ ಗೇಟ್ ಬಳಿ ದರೋಡೆಕೋರರು ಕಾರಿನ ಗಾಜು ಒಡೆದು ತರಕಾರಿ ಮಂಡಿ ಮಾಲೀಕನ ಮೇಲೆ ಹಲ್ಲೆ ನಡೆಸಿ ₹ 15 ಲಕ್ಷ ದೋಚಿ ಪರಾರಿಯಾಗಿದ್ದಾರೆ.</p>.<p>ತರಕಾರಿ ಮಂಡಿ ಮಾಲೀಕ ವ್ಯಕ್ತಿ ಲಿಂಗರಾಜು ಹಲ್ಲೆಗೊಳಗಾದ ಹಾಗೂ ಹಣ ಕಳೆದುಕೊಂಡ ವ್ಯಕ್ತಿ. ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಮೂತ್ರ ವಿಸರ್ಜನೆಗೆಂದು ಕಾರು ನಿಲ್ಲಿಸಿದ್ದ ವೇಳೆ ಈ ಘಟನೆ ನಡೆದಿದೆ. ದರೋಡೆಕೋರರು ತನ್ನ ಮೇಲೆ ಬಿಯರ್ ಬಾಟಲ್ನಿಂದ ಹಲ್ಲೆ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.</p>.<p>ಲಿಂಗರಾಜು ಕಲ್ಲೂರು ಗ್ರಾಮದ ಬಳಿ ಇರುವ ಎಲ್ಎಸ್ಎಂ ವೆಜಿಟೇಬಲ್ಸ್ ಮಾರ್ಕೆಟ್ ನಡೆಸುತ್ತಿದ್ದಾರೆ. ರೈತರಿಗೆ ಹಣ ನೀಡಲು ಸ್ವಗ್ರಾಮ ವಕ್ಕಲೇರಿ ಸಮೀಪದ ಮಾರ್ಕಂಡಪುರದಿಂದ ಹಣ ತರುತ್ತಿದ್ದರು ಎಂಬುದು ಗೊತ್ತಾಗಿದೆ.</p>.<p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್, ಡಿವೈಎಸ್ಪಿ ಮನಿಷಾ, ಶ್ರೀನಿವಾಸಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಂ.ಬಿ.ಗೊರವನಕೊಳ್ಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದರು. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>