ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಐ ನಿರ್ಲಕ್ಷ್ಯ: ₹ 10 ಸಾವಿರ ದಂಡ

Last Updated 14 ಜನವರಿ 2021, 3:05 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ತಾಲ್ಲೂಕಿನ ದಳಸನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿ ಸಂತೋಷ್ ಅವರಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ ₹ 10 ಸಾವಿರ ದಂಡ ವಿಧಿಸಿದೆ.

ಮಾಹಿತಿ ಹಕ್ಕು ಕಾರ್ಯಕರ್ತ ಶಬ್ಬೀರ್ ಅಹಮದ್ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ 14ನೇ ಹಣಕಾಸು ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನದ ಮಾಹಿತಿ ನೀಡುವಂತೆ 2017ರಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ್ದರು. ಆದರೆ ಪಿಡಿಒ ಮಾಹಿತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನಿರ್ಲಕ್ಷಿಸಿದ್ದರು. ಈ ಕುರಿತು ಶಬ್ಬೀರ್ ಅಹಮದ್ ಮೇಲ್ಮನವಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು.

ಮೇಲ್ಮನವಿ ಪ್ರಾಧಿಕಾರದ ಆದೇಶವನ್ನೂ ಪಿಡಿಒ ಪಾಲಿಸಿರಲಿಲ್ಲ. ಆಯೋಗ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿತ್ತು. ಪ್ರತಿವಾದಿ ಸೂಕ್ತ ಕಾರಣವಿಲ್ಲದೆ ಆಯೋಗದ ವಿಚಾರಣೆಗೆ ಗೈರುಹಾಜರಾಗಿದ್ದರು. ಕಾರಣ ಕೇಳಿ ನೀಡಿದ್ದ ನೋಟಿಸ್‌ಗೆ ಲಿಖಿತ ಸಮಜಾಯಿಷಿ ನೀಡಿರಲಿಲ್ಲ. ಹಾಗಾಗಿ ದಂಡ ವಿಧಿಸಲಾಗಿದೆ ಎಂದು ರಾಜ್ಯ ಮಾಹಿತಿ ಆಯುಕ್ತ ಎನ್.ಪಿ. ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ.

ದಂಡದ ಮೊತ್ತವನ್ನು 2021ರ ಫೆಬ್ರುವರಿ ತಿಂಗಳ ವೇತನದಲ್ಲಿ ಕಡಿತಗೊಳಿಸಿ ಸರ್ಕಾರದ ಲೆಕ್ಕ ಶೀರ್ಷಿಕೆ ಖಾತೆಗೆ ಜಮೆ ಮಾಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಆಯೋಗ ನಿರ್ದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT