<p><strong>ಶ್ರೀನಿವಾಸಪುರ: </strong>ತಾಲ್ಲೂಕಿನ ದಳಸನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿ ಸಂತೋಷ್ ಅವರಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ ₹ 10 ಸಾವಿರ ದಂಡ ವಿಧಿಸಿದೆ.</p>.<p>ಮಾಹಿತಿ ಹಕ್ಕು ಕಾರ್ಯಕರ್ತ ಶಬ್ಬೀರ್ ಅಹಮದ್ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ 14ನೇ ಹಣಕಾಸು ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನದ ಮಾಹಿತಿ ನೀಡುವಂತೆ 2017ರಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ್ದರು. ಆದರೆ ಪಿಡಿಒ ಮಾಹಿತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನಿರ್ಲಕ್ಷಿಸಿದ್ದರು. ಈ ಕುರಿತು ಶಬ್ಬೀರ್ ಅಹಮದ್ ಮೇಲ್ಮನವಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು.</p>.<p>ಮೇಲ್ಮನವಿ ಪ್ರಾಧಿಕಾರದ ಆದೇಶವನ್ನೂ ಪಿಡಿಒ ಪಾಲಿಸಿರಲಿಲ್ಲ. ಆಯೋಗ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿತ್ತು. ಪ್ರತಿವಾದಿ ಸೂಕ್ತ ಕಾರಣವಿಲ್ಲದೆ ಆಯೋಗದ ವಿಚಾರಣೆಗೆ ಗೈರುಹಾಜರಾಗಿದ್ದರು. ಕಾರಣ ಕೇಳಿ ನೀಡಿದ್ದ ನೋಟಿಸ್ಗೆ ಲಿಖಿತ ಸಮಜಾಯಿಷಿ ನೀಡಿರಲಿಲ್ಲ. ಹಾಗಾಗಿ ದಂಡ ವಿಧಿಸಲಾಗಿದೆ ಎಂದು ರಾಜ್ಯ ಮಾಹಿತಿ ಆಯುಕ್ತ ಎನ್.ಪಿ. ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ.</p>.<p>ದಂಡದ ಮೊತ್ತವನ್ನು 2021ರ ಫೆಬ್ರುವರಿ ತಿಂಗಳ ವೇತನದಲ್ಲಿ ಕಡಿತಗೊಳಿಸಿ ಸರ್ಕಾರದ ಲೆಕ್ಕ ಶೀರ್ಷಿಕೆ ಖಾತೆಗೆ ಜಮೆ ಮಾಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಆಯೋಗ ನಿರ್ದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ: </strong>ತಾಲ್ಲೂಕಿನ ದಳಸನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿ ಸಂತೋಷ್ ಅವರಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ ₹ 10 ಸಾವಿರ ದಂಡ ವಿಧಿಸಿದೆ.</p>.<p>ಮಾಹಿತಿ ಹಕ್ಕು ಕಾರ್ಯಕರ್ತ ಶಬ್ಬೀರ್ ಅಹಮದ್ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ 14ನೇ ಹಣಕಾಸು ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನದ ಮಾಹಿತಿ ನೀಡುವಂತೆ 2017ರಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ್ದರು. ಆದರೆ ಪಿಡಿಒ ಮಾಹಿತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನಿರ್ಲಕ್ಷಿಸಿದ್ದರು. ಈ ಕುರಿತು ಶಬ್ಬೀರ್ ಅಹಮದ್ ಮೇಲ್ಮನವಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು.</p>.<p>ಮೇಲ್ಮನವಿ ಪ್ರಾಧಿಕಾರದ ಆದೇಶವನ್ನೂ ಪಿಡಿಒ ಪಾಲಿಸಿರಲಿಲ್ಲ. ಆಯೋಗ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿತ್ತು. ಪ್ರತಿವಾದಿ ಸೂಕ್ತ ಕಾರಣವಿಲ್ಲದೆ ಆಯೋಗದ ವಿಚಾರಣೆಗೆ ಗೈರುಹಾಜರಾಗಿದ್ದರು. ಕಾರಣ ಕೇಳಿ ನೀಡಿದ್ದ ನೋಟಿಸ್ಗೆ ಲಿಖಿತ ಸಮಜಾಯಿಷಿ ನೀಡಿರಲಿಲ್ಲ. ಹಾಗಾಗಿ ದಂಡ ವಿಧಿಸಲಾಗಿದೆ ಎಂದು ರಾಜ್ಯ ಮಾಹಿತಿ ಆಯುಕ್ತ ಎನ್.ಪಿ. ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ.</p>.<p>ದಂಡದ ಮೊತ್ತವನ್ನು 2021ರ ಫೆಬ್ರುವರಿ ತಿಂಗಳ ವೇತನದಲ್ಲಿ ಕಡಿತಗೊಳಿಸಿ ಸರ್ಕಾರದ ಲೆಕ್ಕ ಶೀರ್ಷಿಕೆ ಖಾತೆಗೆ ಜಮೆ ಮಾಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಆಯೋಗ ನಿರ್ದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>