ಇಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಜಿ.ಪಂ ನಿರ್ಗಮಿತ ಸಿಇಒ ಜಿ.ಜಗದೀಶ್ ಅವರನ್ನು ಅಭಿನಂದಿಸುವ ಸಂದರ್ಭದಲ್ಲಿ ಪಿಡಿಒಗಳು ಬಾಡಿಗೆಗೆ ತಂದಿದ್ದ ಬೆಳ್ಳಿ ಗದೆ, ಕಿರೀಟ ಮತ್ತು ಚಿನ್ನದ ಉಂಗುರವನ್ನು ಉಡುಗೊರೆಯಾಗಿ ಕೊಟ್ಟು ಮೆಚ್ಚುಗೆ ಸೂಚಿಸಿದ್ದರು. ನಾರಾಯಣಸ್ವಾಮಿ ಈ ವಿಚಾರವಾಗಿ ಕೋರ್ಟ್ ಮೆಟ್ಟಿಲೇರಿರುವುದು ಖಂಡನೀಯ’ ಎಂದು ಹೇಳಿದರು.