ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಉಕ್ರೇನ್ನಲ್ಲಿರುವ ದೇಶದ ವಿದ್ಯಾರ್ಥಿಗಳು ಸುರಕ್ಷಿತವಾಗಿ ದೇಶಕ್ಕೆ ಮರಳಲಿದ್ದು, ಪೋಷಕರು ಆತಂಕಪಡುವ ಅಗತ್ಯವಿಲ್ಲ. ಉಕ್ರೇನ್ನಲ್ಲಿನ ಭಾರತದ ರಾಯಭಾರ ಕಚೇರಿಯ ಜತೆ ಕೇಂದ್ರವು ನಿರಂತರ ಸಂಪರ್ಕದಲ್ಲಿದ್ದು, ಮಕ್ಕಳನ್ನು ವಿಶೇಷ ವಿಮಾನಗಳಲ್ಲಿ ದೇಶಕ್ಕೆ ಕರೆತರುವ ಪ್ರಯತ್ನ ಆರಂಭವಾಗಿದೆ’ ಎಂದರು.