ಕೆಲ ಅಂಗಡಿಗಳ ಬಳಿ ಗ್ರಾಹಕರು ಅಂತರ ಕಾಯ್ದುಕೊಳ್ಳದೆ ಖರೀದಿಗೆ ಮುಗಿಬಿದ್ದಿದ್ದನ್ನು ಕಂಡು ಅಸಮಾಧಾನಗೊಂಡ ತಹಶೀಲ್ದಾರ್, ‘ಅಂತರ ಕಾಯ್ದುಕೊಳ್ಳುವಂತೆ ಜನರಿಗೆ ಜಾಗೃತಿ ಮೂಡಿಸುವುದು ಅಂಗಡಿ ಮಾಲೀಕರ ಜವಾಬ್ದಾರಿ. ಈ ವಿಚಾರದಲ್ಲಿ ಮಾಲೀಕರು ನಿರ್ಲಕ್ಷ್ಯ ತೋರಿದರೆ ಅಂಗಡಿಯ ವಾಣಿಜ್ಯ ಪರವಾನಗಿ ರದ್ದುಪಡಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.