<p><strong>ಕೋಲಾರ</strong>: ಲಾಕ್ಡೌನ್ ಸಡಿಲಿಕೆ ನಂತರ ಜಿಲ್ಲಾ ಕೇಂದ್ರದಲ್ಲಿನ ಪರಿಸ್ಥಿತಿ ಕುರಿತು ನೋಡಲ್ ಅಧಿಕಾರಿಗಳು ತಹಶೀಲ್ದಾರ್ ಶೋಭಿತಾ ಅವರ ನೇತೃತ್ವದಲ್ಲಿ ಶನಿವಾರ ಪರಿಶೀಲನೆ ನಡೆಸಿದರು.</p>.<p>ಮಾರುಕಟ್ಟೆಗಳಲ್ಲಿ ಹಾಗೂ ಅಂಗಡಿಗಳ ಬಳಿ ಜನರು ಖರೀದಿ ವೇಳೆ ಅಂತರ ಕಾಯ್ದುಕೊಳ್ಳುತ್ತಿದ್ದಾರೆಯೇ ಮತ್ತು ಮನೆಯಿಂದ ಹೊರ ಬರುವಾಗ ಮಾಸ್ಕ್ ಧರಿಸುತ್ತಿದ್ದಾರೆಯೇ ಎಂಬ ಬಗ್ಗೆ ಅಧಿಕಾರಿಗಳು ಖುದ್ದು ಅವಲೋಕನ ನಡೆಸಿದರು.</p>.<p>ನಗರದ ಪ್ರಮುಖ ವೃತ್ತವಾದ ಅಮ್ಮವಾರಿಪೇಟೆ ವೃತ್ತದಲ್ಲಿ ಜನರು ಮತ್ತು ವ್ಯಾಪಾರಿಗಳು ಕೊರೊನಾ ಸೋಂಕು ತಡೆಗೆ ಸುರಕ್ಷತಾ ಮಾರ್ಗಸೂಚಿ ಪಾಲಿಸುತ್ತಿದ್ದಾರೆಯೇ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲನೆ ಮಾಡಿದರು.</p>.<p>ಕೆಲ ಅಂಗಡಿಗಳ ಬಳಿ ಗ್ರಾಹಕರು ಅಂತರ ಕಾಯ್ದುಕೊಳ್ಳದೆ ಖರೀದಿಗೆ ಮುಗಿಬಿದ್ದಿದ್ದನ್ನು ಕಂಡು ಅಸಮಾಧಾನಗೊಂಡ ತಹಶೀಲ್ದಾರ್, ‘ಅಂತರ ಕಾಯ್ದುಕೊಳ್ಳುವಂತೆ ಜನರಿಗೆ ಜಾಗೃತಿ ಮೂಡಿಸುವುದು ಅಂಗಡಿ ಮಾಲೀಕರ ಜವಾಬ್ದಾರಿ. ಈ ವಿಚಾರದಲ್ಲಿ ಮಾಲೀಕರು ನಿರ್ಲಕ್ಷ್ಯ ತೋರಿದರೆ ಅಂಗಡಿಯ ವಾಣಿಜ್ಯ ಪರವಾನಗಿ ರದ್ದುಪಡಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>ನೋಡಲ್ ಅಧಿಕಾರಿಗಳಾದ ಡಿಡಿಪಿಐ ಕೆ.ರತ್ನಯ್ಯ, ಕೆ.ಎನ್.ಮಂಜುನಾಥ್, ಶ್ರೀನಿವಾಸ್ ವಿವಿಧ ವಾರ್ಡ್ಗಳಲ್ಲಿ ಜನರಿಗೆ ಮತ್ತು ವರ್ತಕರಿಗೆ ಆರೋಗ್ಯ ಸುರಕ್ಷತಾ ಮಾರ್ಗಸೂಚಿ ಪಾಲನೆ ಸಂಬಂಧ ಮಾರ್ಗದರ್ಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಲಾಕ್ಡೌನ್ ಸಡಿಲಿಕೆ ನಂತರ ಜಿಲ್ಲಾ ಕೇಂದ್ರದಲ್ಲಿನ ಪರಿಸ್ಥಿತಿ ಕುರಿತು ನೋಡಲ್ ಅಧಿಕಾರಿಗಳು ತಹಶೀಲ್ದಾರ್ ಶೋಭಿತಾ ಅವರ ನೇತೃತ್ವದಲ್ಲಿ ಶನಿವಾರ ಪರಿಶೀಲನೆ ನಡೆಸಿದರು.</p>.<p>ಮಾರುಕಟ್ಟೆಗಳಲ್ಲಿ ಹಾಗೂ ಅಂಗಡಿಗಳ ಬಳಿ ಜನರು ಖರೀದಿ ವೇಳೆ ಅಂತರ ಕಾಯ್ದುಕೊಳ್ಳುತ್ತಿದ್ದಾರೆಯೇ ಮತ್ತು ಮನೆಯಿಂದ ಹೊರ ಬರುವಾಗ ಮಾಸ್ಕ್ ಧರಿಸುತ್ತಿದ್ದಾರೆಯೇ ಎಂಬ ಬಗ್ಗೆ ಅಧಿಕಾರಿಗಳು ಖುದ್ದು ಅವಲೋಕನ ನಡೆಸಿದರು.</p>.<p>ನಗರದ ಪ್ರಮುಖ ವೃತ್ತವಾದ ಅಮ್ಮವಾರಿಪೇಟೆ ವೃತ್ತದಲ್ಲಿ ಜನರು ಮತ್ತು ವ್ಯಾಪಾರಿಗಳು ಕೊರೊನಾ ಸೋಂಕು ತಡೆಗೆ ಸುರಕ್ಷತಾ ಮಾರ್ಗಸೂಚಿ ಪಾಲಿಸುತ್ತಿದ್ದಾರೆಯೇ ಎಂಬ ಬಗ್ಗೆ ಅಧಿಕಾರಿಗಳು ಪರಿಶೀಲನೆ ಮಾಡಿದರು.</p>.<p>ಕೆಲ ಅಂಗಡಿಗಳ ಬಳಿ ಗ್ರಾಹಕರು ಅಂತರ ಕಾಯ್ದುಕೊಳ್ಳದೆ ಖರೀದಿಗೆ ಮುಗಿಬಿದ್ದಿದ್ದನ್ನು ಕಂಡು ಅಸಮಾಧಾನಗೊಂಡ ತಹಶೀಲ್ದಾರ್, ‘ಅಂತರ ಕಾಯ್ದುಕೊಳ್ಳುವಂತೆ ಜನರಿಗೆ ಜಾಗೃತಿ ಮೂಡಿಸುವುದು ಅಂಗಡಿ ಮಾಲೀಕರ ಜವಾಬ್ದಾರಿ. ಈ ವಿಚಾರದಲ್ಲಿ ಮಾಲೀಕರು ನಿರ್ಲಕ್ಷ್ಯ ತೋರಿದರೆ ಅಂಗಡಿಯ ವಾಣಿಜ್ಯ ಪರವಾನಗಿ ರದ್ದುಪಡಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>ನೋಡಲ್ ಅಧಿಕಾರಿಗಳಾದ ಡಿಡಿಪಿಐ ಕೆ.ರತ್ನಯ್ಯ, ಕೆ.ಎನ್.ಮಂಜುನಾಥ್, ಶ್ರೀನಿವಾಸ್ ವಿವಿಧ ವಾರ್ಡ್ಗಳಲ್ಲಿ ಜನರಿಗೆ ಮತ್ತು ವರ್ತಕರಿಗೆ ಆರೋಗ್ಯ ಸುರಕ್ಷತಾ ಮಾರ್ಗಸೂಚಿ ಪಾಲನೆ ಸಂಬಂಧ ಮಾರ್ಗದರ್ಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>