<p><strong>ಕೋಲಾರ:</strong> ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆಯೇ ಎಂಬ ಪ್ರಶ್ನೆಗೆ, ಇನ್ನು ಆರು ತಿಂಗಳಲ್ಲಿ ಪ್ರಧಾನಿಯ ಬದಲಾವಣೆ ಆಗಲಿದೆ ನೋಡುತ್ತಿರಿ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.</p><p>ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪಾಕಿಸ್ತಾನಕ್ಕೆ ನೀರು ಕೊಡಲ್ಲ, ಒಡನಾಟ ಬೇಡ, ಸಿನಿಮಾ ಬೇಡ ಎನ್ನುವವರು ಅವರ ಎದುರು ಕ್ರಿಕೆಟ್ ಆಡಲು ಒಪ್ಪಿರುವುದು ಏಕೆ ಎಂದು ಪ್ರಶ್ನಿಸಿದರು.</p><p>ಹಿಂದೂ, ಮುಸ್ಲಿಂ ಗಲಾಟೆ ಬಿಟ್ಟರೆ ಬಿಜೆಪಿ ಏನೂ ಮಾಡುತ್ತಿಲ್ಲ. ಪದೇಪದೇ ಹಿಂದುತ್ವ ಎನ್ನುವವರು ಮೊದಲಿಗೆ ಅಂತರ್ಜಾತಿ ವಿವಾಹ ಮಾಡಿಸಲಿ, ಬಿಜೆಪಿ ಮುಖಂಡರು ಬಡವರಿಗೆ ತಮ್ಮ ಆಸ್ತಿ ಕೊಡಲಿ ಎಂದು ತಿರುಗೇಟು ನೀಡಿದರು.</p><p>ಮದ್ದೂರಿನಲ್ಲಿ ಕಲ್ಲು ತೂರಾಟ ನಡೆಸಿದವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿ. ಆದರೆ, ಬಿಜೆಪಿ ನಾಯಕರ ಮಕ್ಕಳು ಯಾವ ಪ್ರತಿಭಟನೆಗೆ ಬಂದಿದ್ದಾರೆ? ದೇವಸ್ಥಾನಗಳನ್ನು ಕಟ್ಟಿಸಿದ್ದು ನಾವು. ಬಿಜೆಪಿಯವರು ಏನು ಮಾಡಿದ್ದಾರೆ ಎಂದು ಕೇಳಿದರು.</p><p>ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುವುದಾಗಿ ನೀಡಿರುವ ಹೇಳಿಕೆ ಕುರಿತು, 'ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದಿದ್ದರು.</p><p>ಅವರ ಬಗ್ಗೆ ನನಗೆ ಗೌರವ ಇದೆ. ನಮ್ಮ ಶಾಸಕ ಆ ರೀತಿ ಮಾತನಾಡಬಾರದೇ' ಎಂದು ಪ್ರಶ್ನಿಸಿದರು.</p><p>ದೇಶದಲ್ಲಿ ಈಗ ಇರುವುದು ಕರ್ನಾಟಕ ಮಾಡೆಲ್ ಮಾತ್ರ. ಗುಜರಾತ್ ಮಾಡೆಲ್ ಇಲ್ಲ. ಇಡೀ ದೇಶದಲ್ಲಿ ಕರ್ನಾಟಕ ರಾಜ್ಯ ಆರ್ಥಿಕವಾಗಿ ನಂಬರ್ 1 ಸ್ಥಾನದಲ್ಲಿದೆ. ಗ್ಯಾರಂಟಿಗೆ ವರ್ಷಕ್ಕೆ ₹ 60 ಸಾವಿರ ಕೋಟಿ ನೀಡಿ ಅಭಿವೃದ್ಧಿಗೆ ₹ 83 ಸಾವಿರ ಕೋಟಿ ನೀಡಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆಯೇ ಎಂಬ ಪ್ರಶ್ನೆಗೆ, ಇನ್ನು ಆರು ತಿಂಗಳಲ್ಲಿ ಪ್ರಧಾನಿಯ ಬದಲಾವಣೆ ಆಗಲಿದೆ ನೋಡುತ್ತಿರಿ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.</p><p>ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪಾಕಿಸ್ತಾನಕ್ಕೆ ನೀರು ಕೊಡಲ್ಲ, ಒಡನಾಟ ಬೇಡ, ಸಿನಿಮಾ ಬೇಡ ಎನ್ನುವವರು ಅವರ ಎದುರು ಕ್ರಿಕೆಟ್ ಆಡಲು ಒಪ್ಪಿರುವುದು ಏಕೆ ಎಂದು ಪ್ರಶ್ನಿಸಿದರು.</p><p>ಹಿಂದೂ, ಮುಸ್ಲಿಂ ಗಲಾಟೆ ಬಿಟ್ಟರೆ ಬಿಜೆಪಿ ಏನೂ ಮಾಡುತ್ತಿಲ್ಲ. ಪದೇಪದೇ ಹಿಂದುತ್ವ ಎನ್ನುವವರು ಮೊದಲಿಗೆ ಅಂತರ್ಜಾತಿ ವಿವಾಹ ಮಾಡಿಸಲಿ, ಬಿಜೆಪಿ ಮುಖಂಡರು ಬಡವರಿಗೆ ತಮ್ಮ ಆಸ್ತಿ ಕೊಡಲಿ ಎಂದು ತಿರುಗೇಟು ನೀಡಿದರು.</p><p>ಮದ್ದೂರಿನಲ್ಲಿ ಕಲ್ಲು ತೂರಾಟ ನಡೆಸಿದವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿ. ಆದರೆ, ಬಿಜೆಪಿ ನಾಯಕರ ಮಕ್ಕಳು ಯಾವ ಪ್ರತಿಭಟನೆಗೆ ಬಂದಿದ್ದಾರೆ? ದೇವಸ್ಥಾನಗಳನ್ನು ಕಟ್ಟಿಸಿದ್ದು ನಾವು. ಬಿಜೆಪಿಯವರು ಏನು ಮಾಡಿದ್ದಾರೆ ಎಂದು ಕೇಳಿದರು.</p><p>ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುವುದಾಗಿ ನೀಡಿರುವ ಹೇಳಿಕೆ ಕುರಿತು, 'ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದಿದ್ದರು.</p><p>ಅವರ ಬಗ್ಗೆ ನನಗೆ ಗೌರವ ಇದೆ. ನಮ್ಮ ಶಾಸಕ ಆ ರೀತಿ ಮಾತನಾಡಬಾರದೇ' ಎಂದು ಪ್ರಶ್ನಿಸಿದರು.</p><p>ದೇಶದಲ್ಲಿ ಈಗ ಇರುವುದು ಕರ್ನಾಟಕ ಮಾಡೆಲ್ ಮಾತ್ರ. ಗುಜರಾತ್ ಮಾಡೆಲ್ ಇಲ್ಲ. ಇಡೀ ದೇಶದಲ್ಲಿ ಕರ್ನಾಟಕ ರಾಜ್ಯ ಆರ್ಥಿಕವಾಗಿ ನಂಬರ್ 1 ಸ್ಥಾನದಲ್ಲಿದೆ. ಗ್ಯಾರಂಟಿಗೆ ವರ್ಷಕ್ಕೆ ₹ 60 ಸಾವಿರ ಕೋಟಿ ನೀಡಿ ಅಭಿವೃದ್ಧಿಗೆ ₹ 83 ಸಾವಿರ ಕೋಟಿ ನೀಡಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>