ಪ್ರತಿ ಕಾಮಗಾರಿಯಲ್ಲಿ ಸಚಿವರು, ಶಾಸಕರು, ಅಧಿಕಾರಿಗಳು ಸೇರಿದಂತೆ ಶೇ 40ರಷ್ಢು ಕಮಿಷನ್ ಪಡೆಯುತ್ತಿರುವುದಾಗಿ ಮತ್ತು ಇದರಿಂದ ಕಾಮಗಾರಿ ನಿರ್ವಹಣೆಗೆ ಸಮಸ್ಯೆ ಆಗುತ್ತಿರುವುದಾಗಿ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಆರೋಪಿಸಿದ್ದಾರೆ. ಅಲ್ಲದೇ, ಕಮಿಷನ್ ದಂಧೆಗೆ ಕಡಿವಾಣ ಹಾಕುವಂತೆ ಸಂಘವು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಈ ಹಿಂದೆಯೇ ಪತ್ರ ಬರೆದಿತ್ತು ಎಂದು ತಿಳಿಸಿದ್ದಾರೆ.