<p><strong>ಕೋಲಾರ:</strong> ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಸಿ.ಸತ್ಯಭಾಮ ಅವರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದೆ.</p>.<p>ಸದ್ಯ ತರಬೇತಿಗಾಗಿ ಉತ್ತರಖಂಡದ ಮಸ್ಸೂರಿಗೆ ತೆರಳಿರುವ ಮಂಜುನಾಥ್ ಅವರಿಗೆ ಸರ್ಕಾರ ಯಾವುದೇ ಹುದ್ದೆ ತೋರಿಸಿಲ್ಲ. 2018ರ ಆ.1ರಂದು ಜಿಲ್ಲೆಗೆ ವರ್ಗಾವಣೆಯಾಗಿ ಬಂದಿದ್ದ ಮಂಜುನಾಥ್ ಒಂದು ತಿಂಗಳ ತರಬೇತಿಗಾಗಿ ಫೆ.17ರಂದು ಮಸ್ಸೂರಿಗೆ ತೆರಳಿದ್ದರು.</p>.<p>ಇದಕ್ಕೂ ಮುನ್ನವೇ ಸರ್ಕಾರ ಫೆ.15ರಂದು ಮಂಜುನಾಥ್ರ ಸ್ಥಾನಕ್ಕೆ ಸತ್ಯಭಾಮ ಅವರನ್ನು ವರ್ಗಾವಣೆ ಮಾಡಿತ್ತು. ನಂತರ ವರ್ಗಾವಣೆ ಆದೇಶ ತಡೆಹಿಡಿದು ಮಂಜುನಾಥ್ ಅವರನ್ನೇ ಜಿಲ್ಲಾಧಿಕಾರಿ ಹುದ್ದೆಯಲ್ಲಿ ಮುಂದುವರಿಸಿ ಪರಿಷ್ಕೃತ ಆದೇಶ ಹೊರಡಿಸಿತ್ತು. ಇದೀಗ ಈ ಆದೇಶ ಪರಿಷ್ಕರಿಸಿರುವ ಸರ್ಕಾರ ಸತ್ಯಭಾಮ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನಿಯೋಜಿಸಿದೆ.</p>.<p>ಸದ್ಯ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿರುವ ಸತ್ಯಭಾಮ ಅವರು ಸೋಮವಾರ (ಮಾರ್ಚ್ 9) ಜಿಲ್ಲಾಧಿಕಾರಿಯಾಗಿ ಕಾರ್ಯಭಾರ ವಹಿಸಿಕೊಳ್ಳಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಸಿ.ಸತ್ಯಭಾಮ ಅವರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದೆ.</p>.<p>ಸದ್ಯ ತರಬೇತಿಗಾಗಿ ಉತ್ತರಖಂಡದ ಮಸ್ಸೂರಿಗೆ ತೆರಳಿರುವ ಮಂಜುನಾಥ್ ಅವರಿಗೆ ಸರ್ಕಾರ ಯಾವುದೇ ಹುದ್ದೆ ತೋರಿಸಿಲ್ಲ. 2018ರ ಆ.1ರಂದು ಜಿಲ್ಲೆಗೆ ವರ್ಗಾವಣೆಯಾಗಿ ಬಂದಿದ್ದ ಮಂಜುನಾಥ್ ಒಂದು ತಿಂಗಳ ತರಬೇತಿಗಾಗಿ ಫೆ.17ರಂದು ಮಸ್ಸೂರಿಗೆ ತೆರಳಿದ್ದರು.</p>.<p>ಇದಕ್ಕೂ ಮುನ್ನವೇ ಸರ್ಕಾರ ಫೆ.15ರಂದು ಮಂಜುನಾಥ್ರ ಸ್ಥಾನಕ್ಕೆ ಸತ್ಯಭಾಮ ಅವರನ್ನು ವರ್ಗಾವಣೆ ಮಾಡಿತ್ತು. ನಂತರ ವರ್ಗಾವಣೆ ಆದೇಶ ತಡೆಹಿಡಿದು ಮಂಜುನಾಥ್ ಅವರನ್ನೇ ಜಿಲ್ಲಾಧಿಕಾರಿ ಹುದ್ದೆಯಲ್ಲಿ ಮುಂದುವರಿಸಿ ಪರಿಷ್ಕೃತ ಆದೇಶ ಹೊರಡಿಸಿತ್ತು. ಇದೀಗ ಈ ಆದೇಶ ಪರಿಷ್ಕರಿಸಿರುವ ಸರ್ಕಾರ ಸತ್ಯಭಾಮ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನಿಯೋಜಿಸಿದೆ.</p>.<p>ಸದ್ಯ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿರುವ ಸತ್ಯಭಾಮ ಅವರು ಸೋಮವಾರ (ಮಾರ್ಚ್ 9) ಜಿಲ್ಲಾಧಿಕಾರಿಯಾಗಿ ಕಾರ್ಯಭಾರ ವಹಿಸಿಕೊಳ್ಳಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>