<p><strong>ಕೋಲಾರ:</strong> ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ ಕೋಲಾರ ಜಿಲ್ಲೆಗೆ ಸಂಬಂದಪಟ್ಟಂತೆ ಸುಮಾರು ₹ 20 ಕೋಟಿ ಮೊತ್ತದ ಕಾಮಗಾರಿಗಳನ್ನು ಪರಿಶಿಷ್ಟ ಜಾತಿ, ಪಂಗಡದ ಗುತ್ತಿಗೆದಾರರಿಗೆ ನೀಡದೆ ಪ್ಯಾಕೇಜ್ ಮಾಡಿ ಅನ್ಯಾಯ ಮಾಡಿದ್ದಾರೆ ಎಂದು ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಮಾರ್ಜೇನಹಳ್ಳಿ ಬಾಬು ದೂರಿದರು.</p>.<p>ನಗರದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘₹ 20 ಕೋಟಿ ಮೊತ್ತದ ಕಾಮಗಾರಿಯನ್ನು ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ನೀಡುವಂತೆ ಜಿಲ್ಲಾಧಿಕಾರಿಗೆ ಈಗಾಗಲೇ ಮನವಿ ಮಾಡಲಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೂ ಈ ವಿಚಾರ ಚರ್ಚೆ ಮಾಡಲಾಗಿದೆ’ ಎಂದರು.</p>.<p>ಮುಂದಿನ ನಿರ್ಧಾರಗಳನ್ನು ನೋಡಿಕೊಂಡು ನಂತರ ಜಿಲ್ಲಾ ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದಿಂದ ಕಚೇರಿಗೆ ಮುತ್ತಿಗೆ ಹಾಕಲು ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.</p>.<p>ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ್ ಮಾತನಾಡಿ, ‘ಎಸ್ಸಿ, ಎಸ್ಟಿ ಸಮುದಾಯದವರಿಗೆ ಮೀಸಲಾತಿ ಇದ್ದರೂ ಕೆಲ ಅಧಿಕಾರಿಗಳು ಅದಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ. ಒಂದು ಕಾಮಗಾರಿಗೆ ನಾಲ್ಕೈದು ಕಾಮಗಾರಿ ಸೇರಿಸಿ ಪ್ಯಾಕೇಜ್ ಮಾಡುವ ಮೂಲಕ ಮೀಸಲಾತಿ ತಪ್ಪಿಸುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಮಂಗಳವಾರ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಕಾರ್ಯಪಾಲಕ ಎಂಜಿನಿಯರ್ ₹ 2 ಕೋಟಿ ವರೆಗಿನ ಕಾಮಗಾರಿ ಸಂಬಂಧ ಪೂರ್ವಭಾವಿ ಸಭೆ ಕರೆದಿದ್ದಾರೆ. ಅಲ್ಲಿಗೆ ನಮ್ಮ ನಿಯೋಗ ಹೋಗಲಿದ್ದು, ನಮ್ಮ ವಾದ ಮಂಡಿಸಲಿದ್ದೇವೆ. ಈ ವರೆಗೆ ಕರೆದಿರುವ ಟೆಂಡರ್ ರದ್ದು ಮಾಡಬೇಕು, ಮೀಸಲಾತಿ ಪ್ರಕಾರ ₹ 1 ಕೋಟಿವರೆಗಿನ ಕಾಮಗಾರಿಯನ್ನು ನಮಗೆ ಕೊಡಬೇಕು ಎಂಬ ಆಗ್ರಹ ಮಂಡಿಸಲಿದ್ದೇವೆ’ ಎಂದರು.</p>.<p>ಜಿಲ್ಲಾ ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ರಮೇಶ್, ಮೋಹನ್, ವೆಂಕಟರೆಡ್ಡಿ, ಕೃಷ್ಣಪ್ಪ, ಮೋಹನ್, ಅಬ್ಬಿ ಮಂಜುನಾಥ್, ಅಮ್ಮೇರಹಳ್ಳಿ ರವಿ, ಸಾಗರ್, ಜಿಲ್ಲಾ ಓಬಿಸಿ ಗುತ್ತಿಗೆದಾರರ ಅಧ್ಯಕ್ಷ ಜಯರಾಂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ ಕೋಲಾರ ಜಿಲ್ಲೆಗೆ ಸಂಬಂದಪಟ್ಟಂತೆ ಸುಮಾರು ₹ 20 ಕೋಟಿ ಮೊತ್ತದ ಕಾಮಗಾರಿಗಳನ್ನು ಪರಿಶಿಷ್ಟ ಜಾತಿ, ಪಂಗಡದ ಗುತ್ತಿಗೆದಾರರಿಗೆ ನೀಡದೆ ಪ್ಯಾಕೇಜ್ ಮಾಡಿ ಅನ್ಯಾಯ ಮಾಡಿದ್ದಾರೆ ಎಂದು ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಮಾರ್ಜೇನಹಳ್ಳಿ ಬಾಬು ದೂರಿದರು.</p>.<p>ನಗರದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘₹ 20 ಕೋಟಿ ಮೊತ್ತದ ಕಾಮಗಾರಿಯನ್ನು ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ನೀಡುವಂತೆ ಜಿಲ್ಲಾಧಿಕಾರಿಗೆ ಈಗಾಗಲೇ ಮನವಿ ಮಾಡಲಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೂ ಈ ವಿಚಾರ ಚರ್ಚೆ ಮಾಡಲಾಗಿದೆ’ ಎಂದರು.</p>.<p>ಮುಂದಿನ ನಿರ್ಧಾರಗಳನ್ನು ನೋಡಿಕೊಂಡು ನಂತರ ಜಿಲ್ಲಾ ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದಿಂದ ಕಚೇರಿಗೆ ಮುತ್ತಿಗೆ ಹಾಕಲು ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.</p>.<p>ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ್ ಮಾತನಾಡಿ, ‘ಎಸ್ಸಿ, ಎಸ್ಟಿ ಸಮುದಾಯದವರಿಗೆ ಮೀಸಲಾತಿ ಇದ್ದರೂ ಕೆಲ ಅಧಿಕಾರಿಗಳು ಅದಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ. ಒಂದು ಕಾಮಗಾರಿಗೆ ನಾಲ್ಕೈದು ಕಾಮಗಾರಿ ಸೇರಿಸಿ ಪ್ಯಾಕೇಜ್ ಮಾಡುವ ಮೂಲಕ ಮೀಸಲಾತಿ ತಪ್ಪಿಸುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಮಂಗಳವಾರ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಕಾರ್ಯಪಾಲಕ ಎಂಜಿನಿಯರ್ ₹ 2 ಕೋಟಿ ವರೆಗಿನ ಕಾಮಗಾರಿ ಸಂಬಂಧ ಪೂರ್ವಭಾವಿ ಸಭೆ ಕರೆದಿದ್ದಾರೆ. ಅಲ್ಲಿಗೆ ನಮ್ಮ ನಿಯೋಗ ಹೋಗಲಿದ್ದು, ನಮ್ಮ ವಾದ ಮಂಡಿಸಲಿದ್ದೇವೆ. ಈ ವರೆಗೆ ಕರೆದಿರುವ ಟೆಂಡರ್ ರದ್ದು ಮಾಡಬೇಕು, ಮೀಸಲಾತಿ ಪ್ರಕಾರ ₹ 1 ಕೋಟಿವರೆಗಿನ ಕಾಮಗಾರಿಯನ್ನು ನಮಗೆ ಕೊಡಬೇಕು ಎಂಬ ಆಗ್ರಹ ಮಂಡಿಸಲಿದ್ದೇವೆ’ ಎಂದರು.</p>.<p>ಜಿಲ್ಲಾ ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ರಮೇಶ್, ಮೋಹನ್, ವೆಂಕಟರೆಡ್ಡಿ, ಕೃಷ್ಣಪ್ಪ, ಮೋಹನ್, ಅಬ್ಬಿ ಮಂಜುನಾಥ್, ಅಮ್ಮೇರಹಳ್ಳಿ ರವಿ, ಸಾಗರ್, ಜಿಲ್ಲಾ ಓಬಿಸಿ ಗುತ್ತಿಗೆದಾರರ ಅಧ್ಯಕ್ಷ ಜಯರಾಂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>