<p><strong>ಕೋಲಾರ</strong>: ಸತತ ಮಳೆಗೆ ತಾಲ್ಲೂಕಿನ ಕೂತಾಂಡಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಾಳಿಗೆ ಕಾಂಕ್ರೀಟ್ ಭಾನುವಾರ ಕಿತ್ತು ಬಂದಿದೆ. ರಜೆ ಕಾರಣ ಮಕ್ಕಳು ಶಾಲೆಗೆ ಬಾರದ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದೆ.</p>.<p>ಹಳೆಯ ವಿದ್ಯಾರ್ಥಿಯೊಬ್ಬರು ಈ ಶಾಲೆಗೆ ಭೇಟಿ ನೀಡಿ ದುಸ್ಥಿತಿಯನ್ನು ಬಯಲು ಮಾಡಿದ್ದಾರೆ.</p>.<p>‘ನಾನು ಓದಿದ ಶಾಲೆ ಇದು. ನಾವು ವಿದ್ಯಾರ್ಥಿಗಳಿಗೆ ಲೇಖನ, ಪುಸ್ತಕ ಹಾಗೂ ಇನ್ನಿತರ ಸಾಮಗ್ರಿ ತಂದುಕೊಡಬಹುದು. ಆದರೆ, ಶಾಲೆ ಕಟ್ಟಡ ಕಟ್ಟಿಸಿ ಕೊಡಲು ಸಾಧ್ಯವೇ’ ಎಂದು ಅವರು ಪ್ರಶ್ನಿಸಿದ್ದಾರೆ.</p>.<p>‘ಮಕ್ಕಳು ಶಾಲೆಯಲ್ಲಿದ್ದು, ಮಹಡಿಯ ಕಾಂಕ್ರೀಟ್ ಕುಸಿದು ಬಿದ್ದಿದ್ದರೆ ಅವರ ಗತಿ ಏನು? ಯಾರು ಹೊಣೆ? ಕ್ಷೇತ್ರ ಶಿಕ್ಷಣಾಧಿಕಾರಿಗಳು ಏನು ಮಾಡುತ್ತಿದ್ದಾರೆ? ಕೂಡಲೇ ಈ ಶಾಲೆಗೆ ಸೌಲಭ್ಯ ಕಲ್ಪಿಸಿಕೊಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>‘ಈ ರೀತಿ ದುಸ್ಥಿತಿಯಿಂದಲೇ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಸರಿಯಾದ ಕಟ್ಟಡ, ಶೌಚಾಲಯ, ಬೆಂಚು, ಕುರ್ಚಿಗಳು ಇಲ್ಲ. ಇಂಥ ಹಲವಾರು ಶಾಲೆಗಳು ಇವೆ. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಬೇಕಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಸತತ ಮಳೆಗೆ ತಾಲ್ಲೂಕಿನ ಕೂತಾಂಡಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಾಳಿಗೆ ಕಾಂಕ್ರೀಟ್ ಭಾನುವಾರ ಕಿತ್ತು ಬಂದಿದೆ. ರಜೆ ಕಾರಣ ಮಕ್ಕಳು ಶಾಲೆಗೆ ಬಾರದ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದೆ.</p>.<p>ಹಳೆಯ ವಿದ್ಯಾರ್ಥಿಯೊಬ್ಬರು ಈ ಶಾಲೆಗೆ ಭೇಟಿ ನೀಡಿ ದುಸ್ಥಿತಿಯನ್ನು ಬಯಲು ಮಾಡಿದ್ದಾರೆ.</p>.<p>‘ನಾನು ಓದಿದ ಶಾಲೆ ಇದು. ನಾವು ವಿದ್ಯಾರ್ಥಿಗಳಿಗೆ ಲೇಖನ, ಪುಸ್ತಕ ಹಾಗೂ ಇನ್ನಿತರ ಸಾಮಗ್ರಿ ತಂದುಕೊಡಬಹುದು. ಆದರೆ, ಶಾಲೆ ಕಟ್ಟಡ ಕಟ್ಟಿಸಿ ಕೊಡಲು ಸಾಧ್ಯವೇ’ ಎಂದು ಅವರು ಪ್ರಶ್ನಿಸಿದ್ದಾರೆ.</p>.<p>‘ಮಕ್ಕಳು ಶಾಲೆಯಲ್ಲಿದ್ದು, ಮಹಡಿಯ ಕಾಂಕ್ರೀಟ್ ಕುಸಿದು ಬಿದ್ದಿದ್ದರೆ ಅವರ ಗತಿ ಏನು? ಯಾರು ಹೊಣೆ? ಕ್ಷೇತ್ರ ಶಿಕ್ಷಣಾಧಿಕಾರಿಗಳು ಏನು ಮಾಡುತ್ತಿದ್ದಾರೆ? ಕೂಡಲೇ ಈ ಶಾಲೆಗೆ ಸೌಲಭ್ಯ ಕಲ್ಪಿಸಿಕೊಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>‘ಈ ರೀತಿ ದುಸ್ಥಿತಿಯಿಂದಲೇ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಸರಿಯಾದ ಕಟ್ಟಡ, ಶೌಚಾಲಯ, ಬೆಂಚು, ಕುರ್ಚಿಗಳು ಇಲ್ಲ. ಇಂಥ ಹಲವಾರು ಶಾಲೆಗಳು ಇವೆ. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಬೇಕಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>