ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡಿನ ದಾಳಿ

Last Updated 28 ಏಪ್ರಿಲ್ 2018, 18:59 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ಪೊನ್ನಂಪೇಟೆ ಬಳಿ ಚೀನಿವಾಡ ಗ್ರಾಮದ ಕಾಫಿ ಬೆಳೆಗಾರ, ವಿರಾಜಪೇಟೆ ತಾಲ್ಲೂಕು ಬಿಜೆಪಿ ರೈತ ಮೋರ್ಚಾ ಜಂಟಿ ಕಾರ್ಯದರ್ಶಿ ಬೊಳ್ಳಿಯಂಗಡ ದಾದು ಪೂವಯ್ಯ ಮನೆಯ ಮೇಲೆ ಶುಕ್ರವಾರ ಮಧ್ಯರಾತ್ರಿ ಗುಂಡಿನ ದಾಳಿ ನಡೆದಿದೆ.

ಗುಂಡಿನ ಶಬ್ದ ಕೇಳಿ ಪೂವಯ್ಯ, ಏನೊ ಬಿದ್ದಿರಬಹುದು ಎಂದು ಮತ್ತೆ ನಿದ್ರೆಗೆ ಜಾರಿದ್ದಾರೆ. ಬೆಳಿಗ್ಗೆ ಎದ್ದು ನೋಡಿದಾಗ ಮನೆಯ ಕಿಟಕಿ ಗಾಜು ಒಡೆದಿರುವುದು ಗೊತ್ತಾಗಿದೆ. ಹೆಚ್ಚಿನ ಹಾನಿ ಸಂಭವಿಸಿಲ್ಲ. ನಾಡ ಬಂದೂಕಿನಿಂದ ಗುಂಡು ಹಾರಿಸಿರಬಹುದು ಎಂದು ಶಂಕಿಸಲಾಗಿದೆ.

ಪೊನ್ನಂಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತಮಗೆ ಯಾರೂ ಶತ್ರುಗಳಿಲ್ಲ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT