<p><strong>ಕೋಲಾರ: </strong>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಸ್ವಯಂ ಪ್ರೇರಿತಾ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.</p>.<p>ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಜಿ.ಪಂ ಉಪ ಕಾರ್ಯದರ್ಶಿ ಸಂಜೀವಪ್ಪ, ‘ಕೋವಿಡ್–19 ಆತಂಕದ ಹಿನ್ನೆಲೆಯಲ್ಲಿ ರಾಜ್ಯದ ರಕ್ತನಿಧಿ ಕೇಂದ್ರಗಳಲ್ಲಿ ರಕ್ತ ಸಂಗ್ರಹಣೆ ಪ್ರಮಾಣ ಗಣನೀಯವಾಗಿ ಕುಸಿದಿದೆ. ರಕ್ತದ ಕೊರತೆಯಿಂದಾಗಿ ಗರ್ಭಿಣಿಯರು, ಅಪಘಾತದ ಗಾಯಾಳುಗಳ ಚಿಕಿತ್ಸೆಗೆ ದೊಡ್ಡ ಸಮಸ್ಯೆಯಾಗಿದೆ’ ಎಂದರು.</p>.<p>‘ರಾಜ್ಯದಲ್ಲಿ ರಕ್ತ ಸಂಗ್ರಹಣೆ ಪ್ರಮಾಣ ಕಡಿಮೆಯಾಗಿರುವ ಸಂಬಂಧ ಸರ್ಕಾರದಿಂದ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಜಿ.ಪಂ ಸಿಬ್ಬಂದಿ ವತಿಯಿಂದ ರಕ್ತದಾನ ಮಾಡಿಸಲಾಗುತ್ತಿದೆ. ರಕ್ತ ಮಾರುಕಟ್ಟೆಯಲ್ಲಿ ಸಿಗುವುದಿಲ್ಲ. ರಕ್ತವು ಜೀವ ಉಳಿಸಲು ನೀಡುವ ಉಡುಗೊರೆ’ ಎಂದು ಹೇಳಿದರು.</p>.<p>‘ಎಸ್ಎನ್ಆರ್ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಈ ಶಿಬಿರ ನಡೆಸಲಾಗುತ್ತಿದೆ. ಶಿಬಿರದಲ್ಲಿ ಸುಮಾರು 50 ಯೂನಿಟ್ ರಕ್ತ ಸಂಗ್ರಹಿಸುವ ಗುರಿಯಿದೆ. ‘ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಆಗುವುದಿಲ್ಲ. ರಕ್ತದಾನಿಗಳು ಜೀವ ರಕ್ಷಕರು’ ಎಂದು ತಿಳಿಸಿದರು.</p>.<p>‘ಕೋವಿಡ್–19ರ ಸಂಕಷ್ಟದ ಸಂದರ್ಭದಲ್ಲಿ ರಕ್ತದ ಕೊರತೆ ಕಾರಣಕ್ಕೆ ಸಾಕಷ್ಟು ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮುಂದೂಡಲಾಗುತ್ತಿದೆ. ರಕ್ತದ ಕೊರತೆ ನೀಗಿಸಲು ರಕ್ತದಾನ ಶಿಬಿರ ನಡೆಸುತ್ತಿದ್ದೇವೆ. ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಹಾಗೂ ಪಿಡಿಒಗಳು ಶಿಬಿರದಲ್ಲಿ ರಕ್ತದಾನ ಮಾಡಿದ್ದಾರೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಸ್ವಯಂ ಪ್ರೇರಿತಾ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.</p>.<p>ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಜಿ.ಪಂ ಉಪ ಕಾರ್ಯದರ್ಶಿ ಸಂಜೀವಪ್ಪ, ‘ಕೋವಿಡ್–19 ಆತಂಕದ ಹಿನ್ನೆಲೆಯಲ್ಲಿ ರಾಜ್ಯದ ರಕ್ತನಿಧಿ ಕೇಂದ್ರಗಳಲ್ಲಿ ರಕ್ತ ಸಂಗ್ರಹಣೆ ಪ್ರಮಾಣ ಗಣನೀಯವಾಗಿ ಕುಸಿದಿದೆ. ರಕ್ತದ ಕೊರತೆಯಿಂದಾಗಿ ಗರ್ಭಿಣಿಯರು, ಅಪಘಾತದ ಗಾಯಾಳುಗಳ ಚಿಕಿತ್ಸೆಗೆ ದೊಡ್ಡ ಸಮಸ್ಯೆಯಾಗಿದೆ’ ಎಂದರು.</p>.<p>‘ರಾಜ್ಯದಲ್ಲಿ ರಕ್ತ ಸಂಗ್ರಹಣೆ ಪ್ರಮಾಣ ಕಡಿಮೆಯಾಗಿರುವ ಸಂಬಂಧ ಸರ್ಕಾರದಿಂದ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಜಿ.ಪಂ ಸಿಬ್ಬಂದಿ ವತಿಯಿಂದ ರಕ್ತದಾನ ಮಾಡಿಸಲಾಗುತ್ತಿದೆ. ರಕ್ತ ಮಾರುಕಟ್ಟೆಯಲ್ಲಿ ಸಿಗುವುದಿಲ್ಲ. ರಕ್ತವು ಜೀವ ಉಳಿಸಲು ನೀಡುವ ಉಡುಗೊರೆ’ ಎಂದು ಹೇಳಿದರು.</p>.<p>‘ಎಸ್ಎನ್ಆರ್ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಈ ಶಿಬಿರ ನಡೆಸಲಾಗುತ್ತಿದೆ. ಶಿಬಿರದಲ್ಲಿ ಸುಮಾರು 50 ಯೂನಿಟ್ ರಕ್ತ ಸಂಗ್ರಹಿಸುವ ಗುರಿಯಿದೆ. ‘ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಆಗುವುದಿಲ್ಲ. ರಕ್ತದಾನಿಗಳು ಜೀವ ರಕ್ಷಕರು’ ಎಂದು ತಿಳಿಸಿದರು.</p>.<p>‘ಕೋವಿಡ್–19ರ ಸಂಕಷ್ಟದ ಸಂದರ್ಭದಲ್ಲಿ ರಕ್ತದ ಕೊರತೆ ಕಾರಣಕ್ಕೆ ಸಾಕಷ್ಟು ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮುಂದೂಡಲಾಗುತ್ತಿದೆ. ರಕ್ತದ ಕೊರತೆ ನೀಗಿಸಲು ರಕ್ತದಾನ ಶಿಬಿರ ನಡೆಸುತ್ತಿದ್ದೇವೆ. ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಹಾಗೂ ಪಿಡಿಒಗಳು ಶಿಬಿರದಲ್ಲಿ ರಕ್ತದಾನ ಮಾಡಿದ್ದಾರೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>