<p><strong>ಮಾಲೂರು: </strong>ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ಉದ್ದೇಶದಿಂದ ಮೊದಲ ಬಾರಿಗೆ ಪುರಸಭೆ ಸಿಬ್ಬಂದಿ ಪ್ರತಿ ಅಂಗಡಿಗೂ ತೆರಳಿ ಮಾಲೀಕರಿಂದ ಪ್ಲಾಸ್ಟಿಕ್ ಬಳಕೆ ಮಾಡುವುದಿಲ್ಲ ಎಂದು ಸಹಿ ಸಂಗ್ರಹಿಸುವ ಕಾರ್ಯಕ್ರಮಕ್ಕೆ ಮಾರಿಕಾಂಬ ವೃತ್ತದಲ್ಲಿ ಗುರುವಾರ ಪುರಸಭೆ ಅಧ್ಯಕ್ಷ ಮುರಳೀಧರ್ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ನಾವು ಪ್ರಬಲಗೊಳ್ಳಬೇಕಾದಲ್ಲಿ ಆಂತರಿಕವಾಗಿ ಪ್ರಬಲರಾಗಬೇಕು. ಪ್ಲಾಸ್ಟಿಕ್ ಬಹುದೊಡ್ಡ ಶತ್ರು. ನಮ್ಮ ಆರೋಗ್ಯ, ಪರಿಸರ, ಪಶು, ಪಕ್ಷಿಗಳಿಗೆ ಹಾನಿಕಾರಕ. ಅದರ ವಿರುದ್ಧ ಹೋರಾಡಲು ಪ್ರತಿಯೊಬ್ಬರು ವೈಯಕ್ತಿಕವಾಗಿ ಪ್ರಯತ್ನಪಡಬೇಕು. ಆಗ ಇದರ ನಿಯಂತ್ರಣ ಸಾಧ್ಯ ಎಂದರು.</p>.<p>ಮನೆಯಿಂದ ಹೊರಡುವಾಗಲೇ ಬಟ್ಟೆಚೀಲವನ್ನು ಕೈಯಲ್ಲಿ ಹಿಡಿದುಕೊಂಡು ಮಾರುಕಟ್ಟೆಗೆ ಹೋಗುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಸಾಧ್ಯವಾದಷ್ಟು ಪ್ಲಾಸ್ಟಿಕ್ ಬಳಸುವುದಿಲ್ಲ ಎನ್ನುವ ದೃಢ ನಿರ್ಧಾರ ಕೈಗೊಳ್ಳಬೇಕು. ಹೀಗೆ ಪ್ರತಿಯೊಬ್ಬರೂ ಪ್ರಯತ್ನ ಪಟ್ಟರೆ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಬೀಳಲಿದೆ ಎಂದು ಹೇಳಿದರು.</p>.<p>ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಎಸೆಯಬಾರದು. ಅದನ್ನು ಸಂಗ್ರಹಿಸಿ ಮರುಬಳಕೆ ಮಾಡುವ ಸಂಸ್ಥೆಗಳಿಗೆ ನೀಡಬೇಕು ಎಂದರು.</p>.<p>ಪುರಸಭೆ ಮುಖ್ಯಾಧಿಕಾರಿ ನಜೀರ್ ಅಹಮದ್, ಅಧಿಕಾರಿಗಳಾದ ಮಂಜುನಾಥ್, ವಿನೋದ್ ಮತ್ತು ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು: </strong>ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ಉದ್ದೇಶದಿಂದ ಮೊದಲ ಬಾರಿಗೆ ಪುರಸಭೆ ಸಿಬ್ಬಂದಿ ಪ್ರತಿ ಅಂಗಡಿಗೂ ತೆರಳಿ ಮಾಲೀಕರಿಂದ ಪ್ಲಾಸ್ಟಿಕ್ ಬಳಕೆ ಮಾಡುವುದಿಲ್ಲ ಎಂದು ಸಹಿ ಸಂಗ್ರಹಿಸುವ ಕಾರ್ಯಕ್ರಮಕ್ಕೆ ಮಾರಿಕಾಂಬ ವೃತ್ತದಲ್ಲಿ ಗುರುವಾರ ಪುರಸಭೆ ಅಧ್ಯಕ್ಷ ಮುರಳೀಧರ್ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿದ ಅವರು, ನಾವು ಪ್ರಬಲಗೊಳ್ಳಬೇಕಾದಲ್ಲಿ ಆಂತರಿಕವಾಗಿ ಪ್ರಬಲರಾಗಬೇಕು. ಪ್ಲಾಸ್ಟಿಕ್ ಬಹುದೊಡ್ಡ ಶತ್ರು. ನಮ್ಮ ಆರೋಗ್ಯ, ಪರಿಸರ, ಪಶು, ಪಕ್ಷಿಗಳಿಗೆ ಹಾನಿಕಾರಕ. ಅದರ ವಿರುದ್ಧ ಹೋರಾಡಲು ಪ್ರತಿಯೊಬ್ಬರು ವೈಯಕ್ತಿಕವಾಗಿ ಪ್ರಯತ್ನಪಡಬೇಕು. ಆಗ ಇದರ ನಿಯಂತ್ರಣ ಸಾಧ್ಯ ಎಂದರು.</p>.<p>ಮನೆಯಿಂದ ಹೊರಡುವಾಗಲೇ ಬಟ್ಟೆಚೀಲವನ್ನು ಕೈಯಲ್ಲಿ ಹಿಡಿದುಕೊಂಡು ಮಾರುಕಟ್ಟೆಗೆ ಹೋಗುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಸಾಧ್ಯವಾದಷ್ಟು ಪ್ಲಾಸ್ಟಿಕ್ ಬಳಸುವುದಿಲ್ಲ ಎನ್ನುವ ದೃಢ ನಿರ್ಧಾರ ಕೈಗೊಳ್ಳಬೇಕು. ಹೀಗೆ ಪ್ರತಿಯೊಬ್ಬರೂ ಪ್ರಯತ್ನ ಪಟ್ಟರೆ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಬೀಳಲಿದೆ ಎಂದು ಹೇಳಿದರು.</p>.<p>ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಎಸೆಯಬಾರದು. ಅದನ್ನು ಸಂಗ್ರಹಿಸಿ ಮರುಬಳಕೆ ಮಾಡುವ ಸಂಸ್ಥೆಗಳಿಗೆ ನೀಡಬೇಕು ಎಂದರು.</p>.<p>ಪುರಸಭೆ ಮುಖ್ಯಾಧಿಕಾರಿ ನಜೀರ್ ಅಹಮದ್, ಅಧಿಕಾರಿಗಳಾದ ಮಂಜುನಾಥ್, ವಿನೋದ್ ಮತ್ತು ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>