<p><strong>ಕೋಲಾರ</strong>: ‘18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ತಂಬಾಕು ಮಾರಾಟ ಮಾಡುವುದು ಮತ್ತು ಮಕ್ಕಳಿಗೆ ತಂಬಾಕು ಮಾರುವುದು ಅಪರಾಧ’ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಂ.ಎ.ಚಾರಿಣಿ ತಿಳಿಸಿದರು.</p>.<p>ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ (ಕೋಟ್ಪಾ) ಅನುಷ್ಠಾನ ಕುರಿತು ಇಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯ ಸೆಕ್ಷನ್ 7ರ ಅನ್ವಯ ಬಿಡಿ- ಬಿಡಿಯಾಗಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ’ ಎಂದರು.</p>.<p>‘ಮಾರುಕಟ್ಟೆಯಲ್ಲಿ ಬಿಡಿ ಬಿಡಿಯಾಗಿ ಕಡ್ಡಿಪುಡಿ ಮಾರಾಟ, ದಾಸ್ತಾನು ಮತ್ತು ಆರೋಗ್ಯ ಸುರಕ್ಷತೆ ಎಚ್ಚರಿಕೆ ಸಂದೇಶವಿಲ್ಲದೆ ತಂಬಾಕು ಉತ್ಪನ್ನ ಮಾರಾಟ ಮಾಡುವವರ ವಿರುದ್ಧ ಶಿಸ್ತುಕ್ರಮ ಜರುಗಿಸುತ್ತೇವೆ. ಧೂಮಪಾನ ನಿಷೇಧಿತ ಪ್ರದೇಶದಲ್ಲಿ ಧೂಮಪಾನ ಮಾಡಿದವರಿಗೆ ದಂಡ ವಿಧಿಸಲಾಗುತ್ತಿದೆ’ ಎಂದು ವಿವರಿಸಿದರು.</p>.<p>‘ನಿಷೇಧಿತ ಸ್ಥಳದಲ್ಲಿ ಧೂಮಪಾನ ಮಾಡಿದ ಸಂಬಂಧ ಕೋಲಾರದಲ್ಲಿ 115 ಪ್ರಕರಣ ದಾಖಲಿಸಿ ₹ 10,560 ದಂಡ ವಿಧಿಸಲಾಗಿದೆ. ಅದೇ ರೀತಿ ಮಾಲೂರಿನಲ್ಲಿ 149 ಪ್ರಕರಣಗಳಿಗೆ ₹ 12,130, ಬಂಗಾರಪೇಟೆಯಲ್ಲಿ 110 ಪ್ರಕರಣಗಳಿಗೆ ₹ 9,230, ಮುಳಬಾಗಿಲಿನಲ್ಲಿ 130 ಪ್ರಕರಣಕ್ಕೆ ₹ 10,280, ಶ್ರೀನಿವಾಸಪುರದಲ್ಲಿ 31 ಪ್ರಕರಣಗಳಿಗೆ ₹ 1,700 ದಂಡ ಹಾಕಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ 535 ಪ್ರಕರಣ ದಾಖಲಿಸಿ ₹ 43,900 ದಂಡ ವಸೂಲಿ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಗುಲಾಬಿ ಆಂದೋಲನ: ‘ಧೂಮಪಾನಿಗಳಿಗೆ ವಿದ್ಯಾರ್ಥಿಗಳಿಂದ ಗುಲಾಬಿ ಹೂವು ಮತ್ತು ಕರಪತ್ರ ಕೊಡಿಸುವುದರೊಂದಿಗೆ ಧೂಮಪಾನ ಮಾಡದಂತೆ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಗುಲಾಬಿ ಆಂದೋಲನ ನಡೆಸಲಾಗುತ್ತಿದೆ’ ಎಂದು ಹೇಳಿದರು.</p>.<p>‘ತಂಬಾಕು ವ್ಯಸನದಿಂದ ಹೊರಬರಲು ವ್ಯಸನಿಗಳನ್ನು ಪ್ರೇರೇಪಿಸಿ ಶ್ರೀ ನರಸಿಂಹರಾಜ (ಎಸ್ಎನ್ಆರ್) ಜಿಲ್ಲಾ ಆಸ್ಪತ್ರೆಯ ವ್ಯಸನ ಮುಕ್ತ ಕೇಂದ್ರಕ್ಕೆ ದಾಖಲಿಸಲಾಗುತ್ತಿದೆ. ಈ ಕೇಂದ್ರದಲ್ಲಿ ತಂಬಾಕು ವ್ಯಸನಿಗಳಿಗೆ ಮಾರ್ಗದರ್ಶನ ನೀಡಿ ತಂಬಾಕು ಸೇವನೆಯಿಂದ ಹೊರಬರಲು ಪ್ರೇರೇಪಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>‘ಶಾಲಾ ಕಾಲೇಜುಗಳಿಂದ 100 ಮೀಟರ್ ಅಂತರದಲ್ಲಿ ಯಾವುದೇ ತಂಬಾಕು ಉತ್ಪನ್ನ ಮಾರಾಟ ಕೇಂದ್ರ ಇರಬಾರದು. ಮಕ್ಕಳಿಗೆ ಸರಿಯಾದ ಮಾಹಿತಿ ನೀಡುವ ಮೂಲಕ ಶಾಲಾ ಕಾಲೇಜುಗಳನ್ನು ತಂಬಾಕು ಮುಕ್ತವಾಗಿ ಮಾಡಬೇಕು’ ಎಂದು ಸೂಚಿಸಿದರು.</p>.<p>ಮಾಲೂರು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಸನ್ನ, ಆರೋಗ್ಯ ಇಲಾಖೆ ಅಧಿಕಾರಿಗಳು, ಪುರಸಭೆ ಮುಖ್ಯಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ತಂಬಾಕು ಮಾರಾಟ ಮಾಡುವುದು ಮತ್ತು ಮಕ್ಕಳಿಗೆ ತಂಬಾಕು ಮಾರುವುದು ಅಪರಾಧ’ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಂ.ಎ.ಚಾರಿಣಿ ತಿಳಿಸಿದರು.</p>.<p>ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ (ಕೋಟ್ಪಾ) ಅನುಷ್ಠಾನ ಕುರಿತು ಇಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯ ಸೆಕ್ಷನ್ 7ರ ಅನ್ವಯ ಬಿಡಿ- ಬಿಡಿಯಾಗಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ’ ಎಂದರು.</p>.<p>‘ಮಾರುಕಟ್ಟೆಯಲ್ಲಿ ಬಿಡಿ ಬಿಡಿಯಾಗಿ ಕಡ್ಡಿಪುಡಿ ಮಾರಾಟ, ದಾಸ್ತಾನು ಮತ್ತು ಆರೋಗ್ಯ ಸುರಕ್ಷತೆ ಎಚ್ಚರಿಕೆ ಸಂದೇಶವಿಲ್ಲದೆ ತಂಬಾಕು ಉತ್ಪನ್ನ ಮಾರಾಟ ಮಾಡುವವರ ವಿರುದ್ಧ ಶಿಸ್ತುಕ್ರಮ ಜರುಗಿಸುತ್ತೇವೆ. ಧೂಮಪಾನ ನಿಷೇಧಿತ ಪ್ರದೇಶದಲ್ಲಿ ಧೂಮಪಾನ ಮಾಡಿದವರಿಗೆ ದಂಡ ವಿಧಿಸಲಾಗುತ್ತಿದೆ’ ಎಂದು ವಿವರಿಸಿದರು.</p>.<p>‘ನಿಷೇಧಿತ ಸ್ಥಳದಲ್ಲಿ ಧೂಮಪಾನ ಮಾಡಿದ ಸಂಬಂಧ ಕೋಲಾರದಲ್ಲಿ 115 ಪ್ರಕರಣ ದಾಖಲಿಸಿ ₹ 10,560 ದಂಡ ವಿಧಿಸಲಾಗಿದೆ. ಅದೇ ರೀತಿ ಮಾಲೂರಿನಲ್ಲಿ 149 ಪ್ರಕರಣಗಳಿಗೆ ₹ 12,130, ಬಂಗಾರಪೇಟೆಯಲ್ಲಿ 110 ಪ್ರಕರಣಗಳಿಗೆ ₹ 9,230, ಮುಳಬಾಗಿಲಿನಲ್ಲಿ 130 ಪ್ರಕರಣಕ್ಕೆ ₹ 10,280, ಶ್ರೀನಿವಾಸಪುರದಲ್ಲಿ 31 ಪ್ರಕರಣಗಳಿಗೆ ₹ 1,700 ದಂಡ ಹಾಕಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ 535 ಪ್ರಕರಣ ದಾಖಲಿಸಿ ₹ 43,900 ದಂಡ ವಸೂಲಿ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಗುಲಾಬಿ ಆಂದೋಲನ: ‘ಧೂಮಪಾನಿಗಳಿಗೆ ವಿದ್ಯಾರ್ಥಿಗಳಿಂದ ಗುಲಾಬಿ ಹೂವು ಮತ್ತು ಕರಪತ್ರ ಕೊಡಿಸುವುದರೊಂದಿಗೆ ಧೂಮಪಾನ ಮಾಡದಂತೆ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಗುಲಾಬಿ ಆಂದೋಲನ ನಡೆಸಲಾಗುತ್ತಿದೆ’ ಎಂದು ಹೇಳಿದರು.</p>.<p>‘ತಂಬಾಕು ವ್ಯಸನದಿಂದ ಹೊರಬರಲು ವ್ಯಸನಿಗಳನ್ನು ಪ್ರೇರೇಪಿಸಿ ಶ್ರೀ ನರಸಿಂಹರಾಜ (ಎಸ್ಎನ್ಆರ್) ಜಿಲ್ಲಾ ಆಸ್ಪತ್ರೆಯ ವ್ಯಸನ ಮುಕ್ತ ಕೇಂದ್ರಕ್ಕೆ ದಾಖಲಿಸಲಾಗುತ್ತಿದೆ. ಈ ಕೇಂದ್ರದಲ್ಲಿ ತಂಬಾಕು ವ್ಯಸನಿಗಳಿಗೆ ಮಾರ್ಗದರ್ಶನ ನೀಡಿ ತಂಬಾಕು ಸೇವನೆಯಿಂದ ಹೊರಬರಲು ಪ್ರೇರೇಪಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>‘ಶಾಲಾ ಕಾಲೇಜುಗಳಿಂದ 100 ಮೀಟರ್ ಅಂತರದಲ್ಲಿ ಯಾವುದೇ ತಂಬಾಕು ಉತ್ಪನ್ನ ಮಾರಾಟ ಕೇಂದ್ರ ಇರಬಾರದು. ಮಕ್ಕಳಿಗೆ ಸರಿಯಾದ ಮಾಹಿತಿ ನೀಡುವ ಮೂಲಕ ಶಾಲಾ ಕಾಲೇಜುಗಳನ್ನು ತಂಬಾಕು ಮುಕ್ತವಾಗಿ ಮಾಡಬೇಕು’ ಎಂದು ಸೂಚಿಸಿದರು.</p>.<p>ಮಾಲೂರು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಸನ್ನ, ಆರೋಗ್ಯ ಇಲಾಖೆ ಅಧಿಕಾರಿಗಳು, ಪುರಸಭೆ ಮುಖ್ಯಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>