<p><strong>ಬಂಗಾರಪೇಟೆ: </strong>ಪಟ್ಟಣದಲ್ಲಿ ಎಲ್ಲೆಂದರಲ್ಲಿ ಮಾಂಸದ ಅಂಗಡಿಗಳು ತೆರೆದಿದ್ದು, ಸ್ವಚ್ಛತೆ ನಿರ್ವಹಣೆ ಕಷ್ಟಸಾಧ್ಯವಾಗಿದೆ. ಹಾಗಾಗಿ ದೇಶಿಹಳ್ಳಿ ಸರ್ವೆ ನಂಬರ್ 15ರಲ್ಲಿ ಮಾಂಸ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ತಿಳಿಸಿದರು.</p>.<p>ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಗಂಗಮ್ಮ ರಂಗರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯ ಬಳಿಕ ಮಾತನಾಡಿದರು.</p>.<p>ಬೇಸಿಗೆ ಆರಂಭವಾಗಿದೆ. ಪಟ್ಟಣದಲ್ಲಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಚ್ಚರವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.</p>.<p>ಪಂಪ್, ಮೋಟಾರ್ ಸಮಸ್ಯೆ ಇದ್ದರೆ ಕೂಡಲೆ ದುರಸ್ತಿ ಮಾಡಿ ಸಮರ್ಪಕ ನೀರು ಪೂರೈಕೆಗೆ ಅಗತ್ಯ ಕ್ರಮಕೈಗೊಳ್ಳಬೇಕು. ಎಲ್ಲಾ ಬಡಾವಣೆಗಳಿಗೆ ಸಮ ಪ್ರಮಾಣದಲ್ಲಿ ನೀರು ಹಂಚಿಕೆಯಾಗಬೇಕು. ತಾರತಮ್ಯ ಆಗಬಾರದು ಎಂದು ಸೂಚಿಸಿದರು.</p>.<p>15 ಹಣಕಾಸು ಮತ್ತು ಸಿಎಫ್ಎಸ್ ಯೋಜನೆಯಡಿ ₹ 1.90 ಕೋಟಿ ಮಂಜೂರಾಗಿದೆ. ಕ್ರಿಯಾ ಯೋಜನೆಗೆ ಅನುಮೋದಿಸಲಾಯಿತು. ಎಸ್ಸಿ ಮತ್ತು ಎಸ್ಟಿ ಕಾಲೊನಿಗಳಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಹಾಗೂ ಸಕ್ಕಿಂಗ್ ಯಂತ್ರ ಖರೀದಿಗೆ ಅನುಮತಿ ಪಡೆಯಲಾಗಿದೆ ಎಂದು ತಿಳಿಸಿದರು.</p>.<p>ಬಜೆಟ್: ಪುರಸಭೆಯ ₹ 36.27 ಲಕ್ಷ ಉಳಿತಾಯ ಬಜೆಟ್ ಅನ್ನು ಸ್ಥಾಯಿಸಮಿತಿ ಅಧ್ಯಕ್ಷ ಪ್ರಭಾಕರ್ ಮಂಡಿಸಿದರು.</p>.<p>ಎರಡನೇ ಹಂತದಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುವ ಸಾಧ್ಯತೆ ಕಂಡುಬಂದಿದೆ. ಎಲ್ಲೆಡೆ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು. ನಿರ್ಲಕ್ಷಿಸಿದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಕೊರೊನಾ ಕಾರ್ಯಪಡೆಗೆ ಸೂಚಿಸಲಾಗಿದೆ. ನಾಗರಿಕರು ಸ್ಥಳೀಯ ಆಡಳಿತಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.</p>.<p>ಉಪಾಧ್ಯಕ್ಷೆ ಪೊನ್ನಿರಮೇಶ್, ಮುಖ್ಯಾಧಿಕಾರಿ ಶ್ರೀಧರ್ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ: </strong>ಪಟ್ಟಣದಲ್ಲಿ ಎಲ್ಲೆಂದರಲ್ಲಿ ಮಾಂಸದ ಅಂಗಡಿಗಳು ತೆರೆದಿದ್ದು, ಸ್ವಚ್ಛತೆ ನಿರ್ವಹಣೆ ಕಷ್ಟಸಾಧ್ಯವಾಗಿದೆ. ಹಾಗಾಗಿ ದೇಶಿಹಳ್ಳಿ ಸರ್ವೆ ನಂಬರ್ 15ರಲ್ಲಿ ಮಾಂಸ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ತಿಳಿಸಿದರು.</p>.<p>ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷೆ ಗಂಗಮ್ಮ ರಂಗರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯ ಬಳಿಕ ಮಾತನಾಡಿದರು.</p>.<p>ಬೇಸಿಗೆ ಆರಂಭವಾಗಿದೆ. ಪಟ್ಟಣದಲ್ಲಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಚ್ಚರವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.</p>.<p>ಪಂಪ್, ಮೋಟಾರ್ ಸಮಸ್ಯೆ ಇದ್ದರೆ ಕೂಡಲೆ ದುರಸ್ತಿ ಮಾಡಿ ಸಮರ್ಪಕ ನೀರು ಪೂರೈಕೆಗೆ ಅಗತ್ಯ ಕ್ರಮಕೈಗೊಳ್ಳಬೇಕು. ಎಲ್ಲಾ ಬಡಾವಣೆಗಳಿಗೆ ಸಮ ಪ್ರಮಾಣದಲ್ಲಿ ನೀರು ಹಂಚಿಕೆಯಾಗಬೇಕು. ತಾರತಮ್ಯ ಆಗಬಾರದು ಎಂದು ಸೂಚಿಸಿದರು.</p>.<p>15 ಹಣಕಾಸು ಮತ್ತು ಸಿಎಫ್ಎಸ್ ಯೋಜನೆಯಡಿ ₹ 1.90 ಕೋಟಿ ಮಂಜೂರಾಗಿದೆ. ಕ್ರಿಯಾ ಯೋಜನೆಗೆ ಅನುಮೋದಿಸಲಾಯಿತು. ಎಸ್ಸಿ ಮತ್ತು ಎಸ್ಟಿ ಕಾಲೊನಿಗಳಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಹಾಗೂ ಸಕ್ಕಿಂಗ್ ಯಂತ್ರ ಖರೀದಿಗೆ ಅನುಮತಿ ಪಡೆಯಲಾಗಿದೆ ಎಂದು ತಿಳಿಸಿದರು.</p>.<p>ಬಜೆಟ್: ಪುರಸಭೆಯ ₹ 36.27 ಲಕ್ಷ ಉಳಿತಾಯ ಬಜೆಟ್ ಅನ್ನು ಸ್ಥಾಯಿಸಮಿತಿ ಅಧ್ಯಕ್ಷ ಪ್ರಭಾಕರ್ ಮಂಡಿಸಿದರು.</p>.<p>ಎರಡನೇ ಹಂತದಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುವ ಸಾಧ್ಯತೆ ಕಂಡುಬಂದಿದೆ. ಎಲ್ಲೆಡೆ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು. ನಿರ್ಲಕ್ಷಿಸಿದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಕೊರೊನಾ ಕಾರ್ಯಪಡೆಗೆ ಸೂಚಿಸಲಾಗಿದೆ. ನಾಗರಿಕರು ಸ್ಥಳೀಯ ಆಡಳಿತಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.</p>.<p>ಉಪಾಧ್ಯಕ್ಷೆ ಪೊನ್ನಿರಮೇಶ್, ಮುಖ್ಯಾಧಿಕಾರಿ ಶ್ರೀಧರ್ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>