<p><strong>ಕೋಲಾರ:</strong> ಜಿಲ್ಲೆಯಲ್ಲಿ ಕೊಲೆ ಪ್ರಕರಣಗಳ ಹಿನ್ನೆಲೆಯಲ್ಲಿ ಶಿಸ್ತುಕ್ರಮಕ್ಕೆ ಮುಂದಾಗಿರುವ ಪೊಲೀಸ್ ಇಲಾಖೆ ಕರ್ತವ್ಯ ಲೋಪದಡಿ ಸಬ್ ಇನ್ಸ್ಪೆಕ್ಟರ್, ಎಎಸ್ಐ ಸೇರಿದಂತೆ 7 ಮಂದಿಯನ್ನು ಅಮಾನತು ಮಾಡಿದೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಆದೇಶ ಹೊರಡಿಸಿರುವುದು ಗೊತ್ತಾಗಿದೆ.</p>.<p>ಅ.23 ರಂದು ಶ್ರೀನಿವಾಸಪುರದ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೌನ್ಸಿಲರ್ ಶ್ರೀನಿವಾಸ್ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಶ್ರೀನಿವಾಸಪುರ ಠಾಣೆ ಸಬ್ ಇನ್ಸ್ಪೆಕ್ಟರ್ ಈಶ್ವರಪ್ಪ, ಅದೇ ಠಾಣೆಯ ಹೆಡ್ ಕಾನ್ಸ್ಟೆಬಲ್ ದೇವರಾಜ್ ರೆಡ್ಡಿ, ಕಾನ್ಸ್ಟೆಬಲ್ ಮಂಜುನಾಥ್ ಅವರನ್ನು ಅಮಾನತು ಮಾಡಲಾಗಿದೆ.</p>.<p>ಮಾಲೂರು ತಾಲ್ಲೂಕಿನ ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ಕುಮಾರ್ ಕೊಲೆ ಪ್ರಕರಣದಲ್ಲೂ ಕರ್ತವ್ಯ ಲೋಪದ ಆರೋಪದ ಮೇರೆಗೆ ಮಾಲೂರು ಠಾಣೆಯ ಎಎಸ್ಐ ಪ್ರಕಾಶ್, ಬೀಟ್ ಕಾನಸ್ಟೆಬಲ್ಗಳಾದ ರಾಮಪ್ಪ, ಅನಂತಮೂರ್ತಿ ಅವರನ್ನು ಅಮಾನತು ಮಾಡಲಾಗಿದೆ.</p>.<p>ಉಳಿದಂತೆ ಇಲಾಖೆಯಲ್ಲಿ ಅಶಿಸ್ತು ಹಿನ್ನೆಲೆಯಲ್ಲಿ ಡಿಎಆರ್ ಕಾನ್ಸ್ಟೆಬಲ್ ಅನಿಲ್ ಕುಮಾರ್ ಅವರನ್ನೂ ಅಮಾನತುಗೊಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಜಿಲ್ಲೆಯಲ್ಲಿ ಕೊಲೆ ಪ್ರಕರಣಗಳ ಹಿನ್ನೆಲೆಯಲ್ಲಿ ಶಿಸ್ತುಕ್ರಮಕ್ಕೆ ಮುಂದಾಗಿರುವ ಪೊಲೀಸ್ ಇಲಾಖೆ ಕರ್ತವ್ಯ ಲೋಪದಡಿ ಸಬ್ ಇನ್ಸ್ಪೆಕ್ಟರ್, ಎಎಸ್ಐ ಸೇರಿದಂತೆ 7 ಮಂದಿಯನ್ನು ಅಮಾನತು ಮಾಡಿದೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಆದೇಶ ಹೊರಡಿಸಿರುವುದು ಗೊತ್ತಾಗಿದೆ.</p>.<p>ಅ.23 ರಂದು ಶ್ರೀನಿವಾಸಪುರದ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೌನ್ಸಿಲರ್ ಶ್ರೀನಿವಾಸ್ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಶ್ರೀನಿವಾಸಪುರ ಠಾಣೆ ಸಬ್ ಇನ್ಸ್ಪೆಕ್ಟರ್ ಈಶ್ವರಪ್ಪ, ಅದೇ ಠಾಣೆಯ ಹೆಡ್ ಕಾನ್ಸ್ಟೆಬಲ್ ದೇವರಾಜ್ ರೆಡ್ಡಿ, ಕಾನ್ಸ್ಟೆಬಲ್ ಮಂಜುನಾಥ್ ಅವರನ್ನು ಅಮಾನತು ಮಾಡಲಾಗಿದೆ.</p>.<p>ಮಾಲೂರು ತಾಲ್ಲೂಕಿನ ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ಕುಮಾರ್ ಕೊಲೆ ಪ್ರಕರಣದಲ್ಲೂ ಕರ್ತವ್ಯ ಲೋಪದ ಆರೋಪದ ಮೇರೆಗೆ ಮಾಲೂರು ಠಾಣೆಯ ಎಎಸ್ಐ ಪ್ರಕಾಶ್, ಬೀಟ್ ಕಾನಸ್ಟೆಬಲ್ಗಳಾದ ರಾಮಪ್ಪ, ಅನಂತಮೂರ್ತಿ ಅವರನ್ನು ಅಮಾನತು ಮಾಡಲಾಗಿದೆ.</p>.<p>ಉಳಿದಂತೆ ಇಲಾಖೆಯಲ್ಲಿ ಅಶಿಸ್ತು ಹಿನ್ನೆಲೆಯಲ್ಲಿ ಡಿಎಆರ್ ಕಾನ್ಸ್ಟೆಬಲ್ ಅನಿಲ್ ಕುಮಾರ್ ಅವರನ್ನೂ ಅಮಾನತುಗೊಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>