<p>ಕೋಲಾರ: ನಗರದ ಶಂಕರ ಸೇವಾ ಸಮಿತಿಯು ಇಲ್ಲಿ ಗುರುವಾರ ಶಂಕರಾಚಾರ್ಯರ ಭವ್ಯ ರಥೋತ್ಸವ ಮತ್ತು ವೇದ ಪಾರಾಯಣ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ನಡೆಸಿತು.</p>.<p>ಶಂಕರಾಚಾರ್ಯರ ಮೂರ್ತಿಯನ್ನು ಭವ್ಯವಾಗಿ ಅಲಂಕರಿಸಿ ರಥದಲ್ಲಿ ಸಂಕೀರ್ತನೆಯೊಂದಿಗೆ ನಗರದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ತೊಟ್ಲಿ ಗ್ರಾಮದ ರಮೇಶ್ ತಂಡದ ವಾದ್ಯ ಮೇಳದೊಂದಿಗೆ ಮೆರವಣಿಗೆ ಸಾಗಿತು.</p>.<p>ಮೆರವಣಿಗೆಯು ನಗರದ ಕಾಲೇಜು ವೃತ್ತ, ಬ್ರಾಹ್ಮಣರ ಬೀದಿ, ದೊಡ್ಡಪೇಟೆ, ಕಾಳಮ್ಮ ಗುಡಿ ರಸ್ತೆ ಮೂಲಕ ಸಂಚರಿಸಿ ಶಂಕರಮಠ ಸೇರಿತು. ದಾರಿಯುದ್ದಕ್ಕೂ ಜನರು ರಥಕ್ಕೆ ಪೂಜೆ ಸಲ್ಲಿಸಿದರು. ಮಹಿಳಾ ಮಂಡಳಿ ಮತ್ತು ಸಮಿತಿ ವತಿಯಿಂದ ಸಾಮೂಹಿಕ ಶಂಕರ ಸ್ತೋತ್ರ ಗಾಯನ, ಅನ್ನದಾಸೋಹ ನಡೆಸಲಾಯಿತು.</p>.<p>ರಥೋತ್ಸವದ ನಂತರ ನಡೆದ ವೇದ ಪಾರಾಯಣದಲ್ಲಿ ಸಮಿತಿ ಮುಖಂಡರು ಮಾತನಾಡಿ, ‘ಸ್ವಾರ್ಥವಿಲ್ಲದ ಕಡೆ ಸಮೃದ್ಧಿ ಇರುತ್ತದೆ. ಶಾಲೆಯ ಪಠ್ಯದಲ್ಲಿ ಶಂಕರಾಚಾರ್ಯರ ತತ್ವ ಅಳವಡಿಸಿದರೆ ಜಾತೀಯತೆ ಹೋಗಿ ಸಮ ಸಮಾಜ ನಿರ್ಮಾಣವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಶಂಕರಾಚಾರ್ಯರು 8ನೇ ವಯಸ್ಸಿಗೆ ನಾಲ್ಕು ವೇದಗಳ ಅಧ್ಯಯನ ಪೂರೈಸಿದರು. 12ನೇ ವರ್ಷಕ್ಕೆ ನಾಲ್ಕು ವೇದಗಳ ಭಾಷ್ಯಾ ಬರೆದರು. ವೇದಗಳನ್ನು ಸರಳ ಭಾಷೆಯಲ್ಲಿ ಜನರಿಗೆ ತಲುಪಿಸಿದರು. ದೇಶ ಪರ್ಯಟನೆ ಮಾಡಿ ಅಖಂಡ ಭಾರತದ ಕಲ್ಪನೆ ಸಾಕಾರಗೊಳಿಸಿದ ಕೀರ್ತಿ ಅವರದು’ ಎಂದು ಸ್ಮರಿಸಿದರು.</p>.<p>ಸಮಿತಿ ಅಧ್ಯಕ್ಷ ಕಾರ್ತಿಕ್ ಕೃಷ್ಣಮೂರ್ತಿ, ಕಾರ್ಯದರ್ಶಿ ಜೆ.ಎನ್.ರಾಮಕೃಷ್ಣ, ಖಜಾಂಚಿ ಮುರಳಿ ಸುಂದರ್, ಬ್ರಾಹ್ಮಣರ ಸಂಘದ ಅಧ್ಯಕ್ಷ ವಾಸುದೇವಮೂರ್ತಿ ಪಾಲ್ಗೊಂಡಿದ್ದರು. ಲೋಕಸಭಾ ಚುನಾವಣಾ ನೀತಿಸಂಹಿತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಸರಳವಾಗಿ ಶಂಕರ ಜಯಂತಿ ಆಚರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ನಗರದ ಶಂಕರ ಸೇವಾ ಸಮಿತಿಯು ಇಲ್ಲಿ ಗುರುವಾರ ಶಂಕರಾಚಾರ್ಯರ ಭವ್ಯ ರಥೋತ್ಸವ ಮತ್ತು ವೇದ ಪಾರಾಯಣ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ನಡೆಸಿತು.</p>.<p>ಶಂಕರಾಚಾರ್ಯರ ಮೂರ್ತಿಯನ್ನು ಭವ್ಯವಾಗಿ ಅಲಂಕರಿಸಿ ರಥದಲ್ಲಿ ಸಂಕೀರ್ತನೆಯೊಂದಿಗೆ ನಗರದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ತೊಟ್ಲಿ ಗ್ರಾಮದ ರಮೇಶ್ ತಂಡದ ವಾದ್ಯ ಮೇಳದೊಂದಿಗೆ ಮೆರವಣಿಗೆ ಸಾಗಿತು.</p>.<p>ಮೆರವಣಿಗೆಯು ನಗರದ ಕಾಲೇಜು ವೃತ್ತ, ಬ್ರಾಹ್ಮಣರ ಬೀದಿ, ದೊಡ್ಡಪೇಟೆ, ಕಾಳಮ್ಮ ಗುಡಿ ರಸ್ತೆ ಮೂಲಕ ಸಂಚರಿಸಿ ಶಂಕರಮಠ ಸೇರಿತು. ದಾರಿಯುದ್ದಕ್ಕೂ ಜನರು ರಥಕ್ಕೆ ಪೂಜೆ ಸಲ್ಲಿಸಿದರು. ಮಹಿಳಾ ಮಂಡಳಿ ಮತ್ತು ಸಮಿತಿ ವತಿಯಿಂದ ಸಾಮೂಹಿಕ ಶಂಕರ ಸ್ತೋತ್ರ ಗಾಯನ, ಅನ್ನದಾಸೋಹ ನಡೆಸಲಾಯಿತು.</p>.<p>ರಥೋತ್ಸವದ ನಂತರ ನಡೆದ ವೇದ ಪಾರಾಯಣದಲ್ಲಿ ಸಮಿತಿ ಮುಖಂಡರು ಮಾತನಾಡಿ, ‘ಸ್ವಾರ್ಥವಿಲ್ಲದ ಕಡೆ ಸಮೃದ್ಧಿ ಇರುತ್ತದೆ. ಶಾಲೆಯ ಪಠ್ಯದಲ್ಲಿ ಶಂಕರಾಚಾರ್ಯರ ತತ್ವ ಅಳವಡಿಸಿದರೆ ಜಾತೀಯತೆ ಹೋಗಿ ಸಮ ಸಮಾಜ ನಿರ್ಮಾಣವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಶಂಕರಾಚಾರ್ಯರು 8ನೇ ವಯಸ್ಸಿಗೆ ನಾಲ್ಕು ವೇದಗಳ ಅಧ್ಯಯನ ಪೂರೈಸಿದರು. 12ನೇ ವರ್ಷಕ್ಕೆ ನಾಲ್ಕು ವೇದಗಳ ಭಾಷ್ಯಾ ಬರೆದರು. ವೇದಗಳನ್ನು ಸರಳ ಭಾಷೆಯಲ್ಲಿ ಜನರಿಗೆ ತಲುಪಿಸಿದರು. ದೇಶ ಪರ್ಯಟನೆ ಮಾಡಿ ಅಖಂಡ ಭಾರತದ ಕಲ್ಪನೆ ಸಾಕಾರಗೊಳಿಸಿದ ಕೀರ್ತಿ ಅವರದು’ ಎಂದು ಸ್ಮರಿಸಿದರು.</p>.<p>ಸಮಿತಿ ಅಧ್ಯಕ್ಷ ಕಾರ್ತಿಕ್ ಕೃಷ್ಣಮೂರ್ತಿ, ಕಾರ್ಯದರ್ಶಿ ಜೆ.ಎನ್.ರಾಮಕೃಷ್ಣ, ಖಜಾಂಚಿ ಮುರಳಿ ಸುಂದರ್, ಬ್ರಾಹ್ಮಣರ ಸಂಘದ ಅಧ್ಯಕ್ಷ ವಾಸುದೇವಮೂರ್ತಿ ಪಾಲ್ಗೊಂಡಿದ್ದರು. ಲೋಕಸಭಾ ಚುನಾವಣಾ ನೀತಿಸಂಹಿತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಸರಳವಾಗಿ ಶಂಕರ ಜಯಂತಿ ಆಚರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>