ಶ್ರೀನಿವಾಸಗೌಡರು ಕಳೆದ ಕೆಲ ದಿನಗಳಿಂದ ಜೆಡಿಎಸ್ನ ಸಭೆ, ಸಮಾರಂಭಗಳಿಂದ ದೂರ ಉಳಿದಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರನನ್ನು ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಸಲು ತೆರೆಮರೆಯ ಕಸರತ್ತು ನಡೆಸಿರುವ ಅವರು ಶಿವಕುಮಾರ್ರನ್ನು ಭೇಟಿಯಾಗಿರುವುದು ಹೆಚ್ಚು ಮಹತ್ವ ಪಡೆದಿದೆ.