<p><strong>ಕೋಲಾರ</strong>: ಜೆಡಿಎಸ್ ಶಾಸಕ ಕೆ.ಶ್ರೀನಿವಾಸಗೌಡರು ಕಾಂಗ್ರೆಸ್ ಸೇರುವ ಮಾತು ಬಲವಾಗಿ ಕೇಳಿಬರುತ್ತಿರುವ ಬೆನ್ನಲ್ಲೇ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಬುಧವಾರ ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.</p>.<p>ಶ್ರೀನಿವಾಸಗೌಡರು ಜೆಡಿಎಸ್ ತೊರೆಯುವ ಬಗ್ಗೆ ಕ್ಷೇತ್ರದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಚರ್ಚೆಯಾಗುತ್ತಿದೆ. ಈ ನಡುವೆ ಕೆ.ಸಿ ವ್ಯಾಲಿ ಯೋಜನೆ ವಿಚಾರವಾಗಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಯನ್ನು ಶ್ರೀನಿವಾಸಗೌಡರು ಸಾರ್ವಜನಿಕವಾಗಿ ಟೀಕಿಸಿದ್ದರು.</p>.<p>ಶ್ರೀನಿವಾಸಗೌಡರ ಈ ನಡೆಯಿಂದ ಕೆರಳಿದ್ದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಪಕ್ಷವು ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಿದೆ ಎಂದು ಇತ್ತೀಚೆಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರು. ಈ ಎಲ್ಲಾ ಬೆಳವಣಿಗೆಗಳ ನಡುವೆ ಶ್ರೀನಿವಾಸಗೌಡರು ವರಿಷ್ಠರಿಗೆ ಸೆಡ್ಡು ಹೊಡೆದು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ರನ್ನು ಭೇಟಿಯಾಗಿ ಒಂದು ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿ ಪಕ್ಷ ತೊರೆಯುವ ಸಂದೇಶ ರವಾನಿಸಿದ್ದಾರೆ.</p>.<p>ಶ್ರೀನಿವಾಸಗೌಡರು ಕಳೆದ ಕೆಲ ದಿನಗಳಿಂದ ಜೆಡಿಎಸ್ನ ಸಭೆ, ಸಮಾರಂಭಗಳಿಂದ ದೂರ ಉಳಿದಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರನನ್ನು ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಸಲು ತೆರೆಮರೆಯ ಕಸರತ್ತು ನಡೆಸಿರುವ ಅವರು ಶಿವಕುಮಾರ್ರನ್ನು ಭೇಟಿಯಾಗಿರುವುದು ಹೆಚ್ಚು ಮಹತ್ವ ಪಡೆದಿದೆ.</p>.<p>ಭೇಟಿ ಸಂಬಂಧ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಶ್ರೀನಿವಾಸಗೌಡರು, ‘ವೈಯಕ್ತಿಕ ವಿಚಾರಕ್ಕೆ ಶಿವಕುಮಾರ್ರನ್ನು ಭೇಟಿಯಾಗಿದ್ದೇನೆ. ಅವರೊಂದಿಗೆ ಯಾವುದೇ ರಾಜಕೀಯ ವಿಚಾರ ಚರ್ಚಿಸಿಲ್ಲ. ಜೆಡಿಎಸ್ ತೊರೆಯುವುದಾದರೆ ಸಾರ್ವಜನಿಕವಾಗಿಯೇ ಹೇಳುತ್ತೇನೆ’ ಎಂದು ತಿಳಿಸಿದರು.</p>.<p>‘ನಾನು 4 ಬಾರಿಯೂ ಬೇರೆ ಬೇರೆ ಪಕ್ಷದಿಂದ ಗೆದ್ದು ಶಾಸಕನಾಗಿದ್ದೇನೆ. ಮಾಧ್ಯಮಗಳಿಗೆ ಸುಳ್ಳು ಹೇಳುವುದಿಲ್ಲ. ಸಮಯ ಬಂದಾಗ ಎಲ್ಲಾ ಮಾತನಾಡುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಜೆಡಿಎಸ್ ಶಾಸಕ ಕೆ.ಶ್ರೀನಿವಾಸಗೌಡರು ಕಾಂಗ್ರೆಸ್ ಸೇರುವ ಮಾತು ಬಲವಾಗಿ ಕೇಳಿಬರುತ್ತಿರುವ ಬೆನ್ನಲ್ಲೇ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಬುಧವಾರ ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.</p>.<p>ಶ್ರೀನಿವಾಸಗೌಡರು ಜೆಡಿಎಸ್ ತೊರೆಯುವ ಬಗ್ಗೆ ಕ್ಷೇತ್ರದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಚರ್ಚೆಯಾಗುತ್ತಿದೆ. ಈ ನಡುವೆ ಕೆ.ಸಿ ವ್ಯಾಲಿ ಯೋಜನೆ ವಿಚಾರವಾಗಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಯನ್ನು ಶ್ರೀನಿವಾಸಗೌಡರು ಸಾರ್ವಜನಿಕವಾಗಿ ಟೀಕಿಸಿದ್ದರು.</p>.<p>ಶ್ರೀನಿವಾಸಗೌಡರ ಈ ನಡೆಯಿಂದ ಕೆರಳಿದ್ದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಪಕ್ಷವು ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಿದೆ ಎಂದು ಇತ್ತೀಚೆಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರು. ಈ ಎಲ್ಲಾ ಬೆಳವಣಿಗೆಗಳ ನಡುವೆ ಶ್ರೀನಿವಾಸಗೌಡರು ವರಿಷ್ಠರಿಗೆ ಸೆಡ್ಡು ಹೊಡೆದು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ರನ್ನು ಭೇಟಿಯಾಗಿ ಒಂದು ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿ ಪಕ್ಷ ತೊರೆಯುವ ಸಂದೇಶ ರವಾನಿಸಿದ್ದಾರೆ.</p>.<p>ಶ್ರೀನಿವಾಸಗೌಡರು ಕಳೆದ ಕೆಲ ದಿನಗಳಿಂದ ಜೆಡಿಎಸ್ನ ಸಭೆ, ಸಮಾರಂಭಗಳಿಂದ ದೂರ ಉಳಿದಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರನನ್ನು ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಸಲು ತೆರೆಮರೆಯ ಕಸರತ್ತು ನಡೆಸಿರುವ ಅವರು ಶಿವಕುಮಾರ್ರನ್ನು ಭೇಟಿಯಾಗಿರುವುದು ಹೆಚ್ಚು ಮಹತ್ವ ಪಡೆದಿದೆ.</p>.<p>ಭೇಟಿ ಸಂಬಂಧ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಶ್ರೀನಿವಾಸಗೌಡರು, ‘ವೈಯಕ್ತಿಕ ವಿಚಾರಕ್ಕೆ ಶಿವಕುಮಾರ್ರನ್ನು ಭೇಟಿಯಾಗಿದ್ದೇನೆ. ಅವರೊಂದಿಗೆ ಯಾವುದೇ ರಾಜಕೀಯ ವಿಚಾರ ಚರ್ಚಿಸಿಲ್ಲ. ಜೆಡಿಎಸ್ ತೊರೆಯುವುದಾದರೆ ಸಾರ್ವಜನಿಕವಾಗಿಯೇ ಹೇಳುತ್ತೇನೆ’ ಎಂದು ತಿಳಿಸಿದರು.</p>.<p>‘ನಾನು 4 ಬಾರಿಯೂ ಬೇರೆ ಬೇರೆ ಪಕ್ಷದಿಂದ ಗೆದ್ದು ಶಾಸಕನಾಗಿದ್ದೇನೆ. ಮಾಧ್ಯಮಗಳಿಗೆ ಸುಳ್ಳು ಹೇಳುವುದಿಲ್ಲ. ಸಮಯ ಬಂದಾಗ ಎಲ್ಲಾ ಮಾತನಾಡುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>