ವೀರಶೈವ ಧರ್ಮದ ಕಾಯಕ ಮತ್ತು ದಾಸೋಹ ತತ್ವಗಳಿಂದ ಪ್ರೇರಣೆಗೊಂಡು ಸಕಲ ಜೀವಾತ್ಮರಿಗೆ ಲೇಸು ಬಯಸುವುದನ್ನೇ ತಮ್ಮ ಜೀವನದ ಗುರಿಯಾಗಿಟ್ಟುಕೊಂಡಿದ್ದರು. 1942ರಲ್ಲಿ ಉಚಿತ ಪ್ರಸಾದ ನಿಲಯ, 1954ರಲ್ಲಿ ಜೆಎಸ್ಎಸ್ ಮಹಾವಿದ್ಯಾಪೀಠ ಸ್ಥಾಪಿಸಿದರು. ಆರೋಗ್ಯ ಸೇವೆಗಾಗಿ ಆಸ್ಪತ್ರೆ ತೆರೆದು ಸಮಾಜದ ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಶ್ರೀಗಳ ಫಲದಿಂದ ಇಂದು ಜೆಎಸ್ಎಸ್ ಶಿಕ್ಷಣ ಸಂಸ್ಥೆಯು ಲಕ್ಷಾಂತರ ವಿದ್ಯಾರ್ಥಿಗಳು, ಸಾವಿರಾರು ನೌಕರರರಿಗೆ ದಾರಿದೀಪವಾಗಿದೆ ಎಂದು
ತಿಳಿಸಿದರು.