<p><strong>ಶ್ರೀನಿವಾಸಪುರ:</strong> ಪಟ್ಟಣದ ಎಪಿಎಂಸಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಬುಧವಾರ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಸ್.ಸಿ.ರಮೇಶ್, ಉಪಾಧ್ಯಕ್ಷರಾಗಿ ಜಿ.ಕೆ.ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಈ ಹಿಂದೆ ಅಧ್ಯಕ್ಷರಾಗಿದ್ದ ಎನ್.ರಾಜೇಂದ್ರ ಪ್ರಸಾದ್ ಹಾಗೂ ಉಪಾಧ್ಯಕ್ಷ ಪೆದ್ದರೆಡ್ಡಿ ಅವರ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲಾಯಿತು.</p>.<p>13 ಸದಸ್ಯರು ಹಾಗೂ ಮೂರು ಮಂದಿ ನಾಮನಿರ್ದೇಶಿತ ಸದಸ್ಯರು ಹಾಜರಿದ್ದರು. ಅಧ್ಯಕ್ಷ ಸ್ಥಾನಕ್ಕೆ ಎಸ್.ಸಿ.ರಮೇಶ್, ಟಿ.ವಿ.ನಾರಾಯಣಸ್ವಾಮಿ, ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸಿದ್ದರು. ಆದರೆ ಟಿ.ವಿ.ನಾರಾಯಣಸ್ವಾಮಿ, ನಾರಾಯಣಸ್ವಾಮಿ ನಾಮಪತ್ರ ಹಿಂಪಡೆದ ಕಾರಣ ಎಸ್.ಸಿ.ರಮೇಶ್ ಅವಿರೋಧವಾಗಿ ಆಯ್ಕೆಯಾದರು.</p>.<p>ಉಪಾಧ್ಯಕ್ಷರ ಸ್ಥಾನಕ್ಕೆ ಪೆದ್ದರೆಡ್ಡಿ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಎಪಿಎಂಸಿ ಕಾರ್ಯ ದರ್ಶಿ ಎಂ.ವೇಣುಗೋಪಾಲ್ ಇದ್ದರು.</p>.<p>ಕಾಂಗ್ರೆಸ್ ಮಖಂಡರಾದ ಸಂಜಯ್ರೆಡ್ಡಿ, ಎನ್.ರಾಜೇಂದ್ರ ಪ್ರಸಾದ್ ದಿಂಬಾಲ ಅಶೋಕ್, ಮಂಜುನಾಥರೆಡ್ಡಿ, ರೋಣೂರು ಚಂದ್ರಶೇಖರ್, ಕೆ.ಕೆ.ಮಂಜು, ಅಯ್ಯಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ:</strong> ಪಟ್ಟಣದ ಎಪಿಎಂಸಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಬುಧವಾರ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಸ್.ಸಿ.ರಮೇಶ್, ಉಪಾಧ್ಯಕ್ಷರಾಗಿ ಜಿ.ಕೆ.ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಈ ಹಿಂದೆ ಅಧ್ಯಕ್ಷರಾಗಿದ್ದ ಎನ್.ರಾಜೇಂದ್ರ ಪ್ರಸಾದ್ ಹಾಗೂ ಉಪಾಧ್ಯಕ್ಷ ಪೆದ್ದರೆಡ್ಡಿ ಅವರ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲಾಯಿತು.</p>.<p>13 ಸದಸ್ಯರು ಹಾಗೂ ಮೂರು ಮಂದಿ ನಾಮನಿರ್ದೇಶಿತ ಸದಸ್ಯರು ಹಾಜರಿದ್ದರು. ಅಧ್ಯಕ್ಷ ಸ್ಥಾನಕ್ಕೆ ಎಸ್.ಸಿ.ರಮೇಶ್, ಟಿ.ವಿ.ನಾರಾಯಣಸ್ವಾಮಿ, ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸಿದ್ದರು. ಆದರೆ ಟಿ.ವಿ.ನಾರಾಯಣಸ್ವಾಮಿ, ನಾರಾಯಣಸ್ವಾಮಿ ನಾಮಪತ್ರ ಹಿಂಪಡೆದ ಕಾರಣ ಎಸ್.ಸಿ.ರಮೇಶ್ ಅವಿರೋಧವಾಗಿ ಆಯ್ಕೆಯಾದರು.</p>.<p>ಉಪಾಧ್ಯಕ್ಷರ ಸ್ಥಾನಕ್ಕೆ ಪೆದ್ದರೆಡ್ಡಿ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಎಪಿಎಂಸಿ ಕಾರ್ಯ ದರ್ಶಿ ಎಂ.ವೇಣುಗೋಪಾಲ್ ಇದ್ದರು.</p>.<p>ಕಾಂಗ್ರೆಸ್ ಮಖಂಡರಾದ ಸಂಜಯ್ರೆಡ್ಡಿ, ಎನ್.ರಾಜೇಂದ್ರ ಪ್ರಸಾದ್ ದಿಂಬಾಲ ಅಶೋಕ್, ಮಂಜುನಾಥರೆಡ್ಡಿ, ರೋಣೂರು ಚಂದ್ರಶೇಖರ್, ಕೆ.ಕೆ.ಮಂಜು, ಅಯ್ಯಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>