ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ಯಾಮ್‌ಪ್ರಸಾದ್‌ ಮುಖರ್ಜಿ ಜಯಂತಿ ಆಚರಣೆ

Last Updated 7 ಜುಲೈ 2021, 14:01 IST
ಅಕ್ಷರ ಗಾತ್ರ

ಕೋಲಾರ: ‘ಭಾರತೀಯ ಜನಸಂಘದ ಸಂಸ್ಥಾಪಕ ಶ್ಯಾಮ್‌ಪ್ರಸಾದ್‌ ಮುಖರ್ಜಿ ಅವರು ವೃತ್ತಿಯಲ್ಲಿ ವಕೀಲರಾಗಿ ಸಮಾಜ ಸುಧಾರಣೆಗೆ ದಾರಿದೀಪವಾಗಿದ್ದರು’ ಎಂದು ಬಿಜೆಪಿ ಕಾನೂನು ಪ್ರಕೋಷ್ಠ ರಾಜ್ಯ ಕಾರ್ಯದರ್ಶಿ ಎಸ್.ಕೇಶವಪ್ರಸಾದ್ ಅಭಿಪ್ರಾಯಪಟ್ಟರು.

ಬಿಜೆಪಿ ಕಾನೂನು ಪ್ರಕೋಷ್ಠವು ಇಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶ್ಯಾಮ್‌ಪ್ರಸಾದ್‌ ಮುಖರ್ಜಿ ಜಯಂತಿಯಲ್ಲಿ ಮಾತನಾಡಿ, ‘ಮುಖರ್ಜಿ ಅವರು ಸ್ವಾತಂತ್ರ್ಯೋತ್ತರದಲ್ಲಿ ಹಿಂದೂಗಳ ಮೇಲಿನ ಶೋಷಣೆ ವಿರುದ್ಧ ಧ್ವನಿ ಎತ್ತಿದರು’ ಎಂದರು.

‘ಮುಖರ್ಜಿ ಅವರ ಪ್ರತಿ ಕಾರ್ಯದಲ್ಲೂ ದೇಶಾಭಿಮಾನ ಎದ್ದು ಕಾಣುತ್ತಿತ್ತು. ದುಷ್ಟ ಶಕ್ತಿಗಳಿಂದ ದೇಶ ವಿಭಜಿಸುವ ಹುನ್ನಾರ ನಡೆದಾಗ ಪ್ರತಿ ಹಂತದಲ್ಲೂ ಪ್ರಬಲವಾಗಿ ವಿರೋಧಿಸುತ್ತಾ ಬಂದರು. ದೇಶದ ಏಕತೆ ಅಖಂಡತೆಗೆ ಅವರಿಗಿದ್ದ ಪ್ರೇಮ, ಕಾಳಜಿಯು ಪ್ರತಿ ಭಾರತೀಯನಿಗೆ ಅವರ ಮೇಲೆ ಅಪಾರ ಗೌರವ ಮೂಡಿಸುತ್ತದೆ’ ಎಂದು ತಿಳಿಸಿದರು.

ಬಿಜೆಪಿ ಕಾನೂನು ಪ್ರಕೋಷ್ಠ ರಾಜ್ಯ ಸಹ ಸಂಚಾಲಕ ಯೋಗನಾಥ್, ರಾಜ್ಯ ಸಮಿತಿ ಸದಸ್ಯ ಶ್ರೀನಿವಾಸ್, ಜಿಲ್ಲಾ ಸಂಚಾಲಕ ವೆಂಕಟರೆಡ್ಡಿ, ಸಹ ಸಂಚಾಲಕ ನಾಗೇಂದ್ರ, ಜಿಲ್ಲಾ ಸರ್ಕಾರಿ ಅಭಿಯೋಜಕ ನಾರಾಯಣಸ್ವಾಮಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT