<p><strong>ಕೋಲಾರ:</strong> ‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸಲಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಾವು ತೀರ್ಮಾನ ಮಾಡುವುದಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ’ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಹಾಗೂ ಸಚಿವರ ಬದಲಾವಣೆ ಬಗ್ಗೆ ಮಾತನಾಡುವುದು ಅಪ್ರಸ್ತುತ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ’ ಎಂದರು.</p>.<p>ಮುಖ್ಯಮಂತ್ರಿ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಾಗ ಸಚಿವ ಸತೀಶ್ ಜಾರಕಿಹೊಳಿ ಹೆಸರೂ ಕೇಳಿ ಬರುತ್ತದೆ ಎಂಬ ಪ್ರಶ್ನೆಗೆ, ‘ಅವರು ಕೂಡ ಪಕ್ಷದ ನಿಷ್ಠಾವಂತ ಮುಖಂಡ. ಅವರು ಸಹ ಎಲ್ಲಾ ರೀತಿಯಲ್ಲೂ ಅರ್ಹರಿದ್ದಾರೆ. ಚಿತ್ರದುರ್ಗದಲ್ಲಿ ಎಲ್ಲಾ ಸಮುದಾಯದವರನ್ನು ಸೇರಿಸಿ ಕಾರ್ಯಕ್ರಮ ರೂಪಿಸಿದ್ದರು’ ಎಂದರು.</p>.<p>‘ಕೆ.ಎಚ್. ಮುನಿಯಪ್ಪ ಮುಖ್ಯಮಂತ್ರಿ ಆದರೆ ಸಂತೋಷ’ ಎಂಬ ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ನಾನು ಮುಖ್ಯಮಂತ್ರಿ ಆಗಲು ಸಿದ್ಧ ಎಂದು ಹೇಳಲು ಅವಕಾಶವಿಲ್ಲ. ನನಗೆ ಮುಖ್ಯಮಂತ್ರಿ ಆಗುವ ಆಸೆಯೂ ಇಲ್ಲ’ ಎಂದರು.</p>.<p>ಪರಮೇಶ್ವರ ಅತ್ಯಂತ ಹಿರಿಯ ನಾಯಕ. ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷರಾಗಿ ಅತ್ಯುತ್ತಮ ಆಡಳಿತ ನೀಡಿದವರು. ಈಗಲೂ ಅವರು ಸಚಿವರಾಗಿಯೇ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.</p>.<p>ರಾಜ್ಯ ಆರ್ಯವೈಷ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ರಾಮಪ್ರಸಾದ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಲಕ್ಷ್ಮಿನಾರಾಯಣ, ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಮುಖಂಡರಾದ ಕೆ.ಜಯದೇವ್, ಯಲ್ಲಪ್ಪ, ಪ್ರಸಾದ್ ಬಾಬು, ನವೀನ್ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸಲಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಾವು ತೀರ್ಮಾನ ಮಾಡುವುದಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ’ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಹಾಗೂ ಸಚಿವರ ಬದಲಾವಣೆ ಬಗ್ಗೆ ಮಾತನಾಡುವುದು ಅಪ್ರಸ್ತುತ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ’ ಎಂದರು.</p>.<p>ಮುಖ್ಯಮಂತ್ರಿ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಾಗ ಸಚಿವ ಸತೀಶ್ ಜಾರಕಿಹೊಳಿ ಹೆಸರೂ ಕೇಳಿ ಬರುತ್ತದೆ ಎಂಬ ಪ್ರಶ್ನೆಗೆ, ‘ಅವರು ಕೂಡ ಪಕ್ಷದ ನಿಷ್ಠಾವಂತ ಮುಖಂಡ. ಅವರು ಸಹ ಎಲ್ಲಾ ರೀತಿಯಲ್ಲೂ ಅರ್ಹರಿದ್ದಾರೆ. ಚಿತ್ರದುರ್ಗದಲ್ಲಿ ಎಲ್ಲಾ ಸಮುದಾಯದವರನ್ನು ಸೇರಿಸಿ ಕಾರ್ಯಕ್ರಮ ರೂಪಿಸಿದ್ದರು’ ಎಂದರು.</p>.<p>‘ಕೆ.ಎಚ್. ಮುನಿಯಪ್ಪ ಮುಖ್ಯಮಂತ್ರಿ ಆದರೆ ಸಂತೋಷ’ ಎಂಬ ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ನಾನು ಮುಖ್ಯಮಂತ್ರಿ ಆಗಲು ಸಿದ್ಧ ಎಂದು ಹೇಳಲು ಅವಕಾಶವಿಲ್ಲ. ನನಗೆ ಮುಖ್ಯಮಂತ್ರಿ ಆಗುವ ಆಸೆಯೂ ಇಲ್ಲ’ ಎಂದರು.</p>.<p>ಪರಮೇಶ್ವರ ಅತ್ಯಂತ ಹಿರಿಯ ನಾಯಕ. ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷರಾಗಿ ಅತ್ಯುತ್ತಮ ಆಡಳಿತ ನೀಡಿದವರು. ಈಗಲೂ ಅವರು ಸಚಿವರಾಗಿಯೇ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.</p>.<p>ರಾಜ್ಯ ಆರ್ಯವೈಷ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ರಾಮಪ್ರಸಾದ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಲಕ್ಷ್ಮಿನಾರಾಯಣ, ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಮುಖಂಡರಾದ ಕೆ.ಜಯದೇವ್, ಯಲ್ಲಪ್ಪ, ಪ್ರಸಾದ್ ಬಾಬು, ನವೀನ್ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>