ಕೋಲಾರ: ಮುಂಬರುವ ಚುನಾವಣೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜಿಲ್ಲೆಗೆ ಭೇಟಿ ನೀಡಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು.
ಮಾಲಾರ್ಪಣೆ ಮಾಡಿ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಜೈಘೋಷ ಹಾಕಿದರು.
ಸಿದ್ದರಾಮಯ್ಯ ಅವರಿಗೆ ಸ್ವಾಗತ ಕೋರುವುದರಲ್ಲೂ ಶಾಸಕ ಕೆ.ಆರ್.ರಮೇಶ್ ಕುಮಾರ್ ಬಣ ಹಾಗೂ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಬಣದ ನಡುವೆ ಪೈಪೋಟಿ ಏರ್ಪಟ್ಟಿದ್ದು ಕಂಡುಬಂತು.
ಮೊದಲು ಸಿದ್ದರಾಮಯ್ಯ ಕೋಲಾರ ನಗರದ ಶಕ್ತಿ ದೇವತೆ ಕೋಲಾರಮ್ಮ ದೇಗುಲಕ್ಕೆ ತೆರಳಿದರು.
ಶಾಸಕರಾದ ಕೆ.ಆರ್.ರಮೇಶ್ ಕುಮಾರ್, ಕೃಷ್ಣ ಬೈರೇಗೌಡ, ಕೆ.ವೈ.ನಂಜೇಗೌಡ, ಎಸ್.ಎನ್.ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್, ನಸೀರ್ ಅಹ್ಮದ್ ಜೊತೆಗಿದ್ದಾರೆ.