ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುತ್ತಾರೆಂಬ ವಿಚಾರ ಕುರಿತು, ನಗರದಲ್ಲಿ ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಚಾಮುಂಡೇಶ್ವರಿಯಲ್ಲಿ ಕೆಲಸ ಮಾಡದ ಅವರನ್ನು ಜನ ಸೋಲಿಸಿ ಮನೆಗೆ ಕಳಿಸಿದರು. ಬಾದಾಮಿಯಲ್ಲಿ ಏನು ಪುಣ್ಯ ಇತ್ತೋ ಆರಿಸಿ ಬಂದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ದೊಡ್ಡ ನಾಯಕರಾದವರಿಗೆ ಇಂತಹ ಗತಿ ಬರಬಾರದಿತ್ತು’ ಎಂದರು.