ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯಗೆ ಕೋಲಾರದಲ್ಲಿ ಸೋಲಿನ ವಿದಾಯ: ಜೆಡಿಎಸ್ ಎಂಎಲ್‌ಸಿ ಇಂಚರ ಗೋವಿಂದರಾಜು

Last Updated 23 ಜುಲೈ 2022, 10:32 IST
ಅಕ್ಷರ ಗಾತ್ರ

ಕೋಲಾರ: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಸಿದ್ದರಾಮಯ್ಯ ಅವರನ್ನು ಸೋಲಿಸಿ, ವಿದಾಯ ಹೇಳಿ ಕಳುಹಿಸುತ್ತೇವೆ’ ಎಂದು ವಿಧಾನ ಪರಿಷತ್‌ ಸದಸ್ಯ ಜೆಡಿಎಸ್‌ನ ಇಂಚರ ಗೋವಿಂದರಾಜು ಹೇಳಿದರು.

‘75ನೇ ಜನ್ಮದಿನದ ನೆಪದಲ್ಲಿ ದಾವಣಗೆರೆಯಲ್ಲಿ ಆಯೋಜಿರುವುದು ಸಿದ್ದರಾಮಯ್ಯ ಅವರ ರಾಜಕೀಯ ಜೀವನಕ್ಕೆ ವಿದಾಯ ಹೇಳುವ ಸಮಾರಂಭ ಎಂಬುದಾಗಿ ಈಗ ಚರ್ಚೆ ನಡೆಯುತ್ತಿದೆ. ಕೋಲಾರಕ್ಕೆ ಬಂದರೆ ಅವರನ್ನು ಇಲ್ಲಿನ ಜನ ಸೋಲಿಸಿ ಬೀಳ್ಕೊಡುಗೆ ನೀಡಿ ಕಳುಹಿಸುತ್ತಾರೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಜೆಡಿಎಸ್‌ನಿಂದ ಹೊರಗೆ ಹೋಗಿ ಕಾಂಗ್ರೆಸ್‌ ಜೊತೆ ಗುರುತಿಸಿಕೊಂಡಿರುವ ಶಾಸಕ ಕೆ.ಶ್ರೀನಿವಾಸಗೌಡ ಗಂಡಸೇ ಆಗಿದ್ದರೆ ಮುಂದಿನ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಗೆದ್ದು ತೋರಿಸಲಿ’ ಎಂದು ಸವಾಲು ಹಾಕಿದ ಅವರು, ‘ಮತ್ತೆ ಗೆದ್ದರೆ ಅವರ ಮನೆಯ ವಾಚ್‌ಮ್ಯಾನ್‌ ಆಗಿ ಕೆಲಸ ಮಾಡುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT