<p><strong>ಕೋಲಾರ: </strong>‘ಕೊರೊನಾ ಸೋಂಕು ತಡೆಗೆ ರೇಷ್ಮೆಗೂಡು ಮಾರುಕಟ್ಟೆಗಳಲ್ಲಿ ರೈತರು ಹಾಗೂ ವರ್ತಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ದುರಾದೃಷ್ಟವಶಾತ್ ಒಬ್ಬರಿಗೆ ಸೋಂಕು ತಗುಲಿದರೂ ಎಲ್ಲರೂ ಸಮಸ್ಯೆ ಎದುರಿಸಬೇಕಾಗುತ್ತದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ವಿ.ದರ್ಶನ್ ಕಿವಿಮಾತು ಹೇಳಿದರು.</p>.<p>ಕೋವಿಡ್–19 ಭೀತಿ ಕಾರಣಕ್ಕೆ ಸರ್ಕಾರದ ಆದೇಶದಂತೆ ಕಳೆದೊಂದು ವಾರದಿಂದ ಬಂದ್ ಆಗಿದ್ದ ಇಲ್ಲಿನ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ಗುರುವಾರ ವಹಿವಾಟು ಪುನರಾರಂಭವಾದ ಹಿನ್ನೆಲೆಯಲ್ಲಿ ಅವರು ಮಾರುಕಟ್ಟೆಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಮಾತನಾಡಿದರು.</p>.<p>ಮಾರುಕಟ್ಟೆಯಲ್ಲಿ ವರ್ತಕರು ಹಾಗೂ ರೈತರು ಅಕ್ಕಪಕ್ಕ ಗುಂಪು ಗುಂಪಾಗಿ ನಿಂತಿದ್ದನ್ನು ಗಮನಿಸಿದ ಸಿಇಒ, ‘ಸಾಮಾಜಿಕ ಅಂತರ ಕಾಯ್ದುಕೊಂಡು ವಹಿವಾಟು ನಡೆಸಬೇಕು ಮತ್ತು ಮಾರುಕಟ್ಟೆ ಆವರಣ ಪ್ರವೇಶಿಸುವ ಪ್ರತಿಯೊಬ್ಬರು ಕಡ್ಡಾಯವಾಗಿ ಮುಖಗವಸು ಧರಿಸಬೇಕು’ ಎಂದು ಸೂಚನೆ ನೀಡಿದರು.</p>.<p>‘ಜಿಲ್ಲೆಯ ವಿವಿಧೆಡೆ ಮಾರುಕಟ್ಟೆಗೆ ವಾಹನಗಳಲ್ಲಿ ಗೂಡು ತರುತ್ತಿರುವ ರೈತರಿಗೆ ಪೊಲೀಸರು ಅಡ್ಡಿಪಡಿಸುತ್ತಿದ್ದಾರೆ. ವಹಿವಾಟಿನ ನಂತರ ರೀಲರ್ಸ್ಗಳು ಗೂಡು ಸಾಗಿಸಿಕೊಂಡು ಹೋಗುವ ವಾಹನಗಳನ್ನು ಪೊಲೀಸರು ತಡೆದು ಶೋಷಣೆ ಮಾಡುತ್ತಿದ್ದಾರೆ’ ಎಂದು ಜಿಲ್ಲೆ ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ ಸಿ.ವಿ.ನಾರಾಯಣಸ್ವಾಮಿ ದೂರಿದರು.</p>.<p>‘ರೇಷ್ಮೆಗೂಡು ಸಾಗಣೆ ವಾಹನಗಳನ್ನು ತಡೆಯದಂತೆ ಪೊಲೀಸರಿಗೆ ಸೂಚನೆ ನೀಡಬೇಕು. ರೇಷ್ಮೆ ಬೆಳೆಗಾರರು ಮತ್ತು ರೀಲರ್ಸ್ಗಳ ವಾಹನಗಳ ಸಂಚಾರಕ್ಕೆ ಪೊಲೀಸ್ ಇಲಾಖೆಯಿಂದ ಪಾಸ್ ವಿತರಣೆ ಮಾಡಬೇಕು. ರೇಷ್ಮೆ ಬೆಳೆಗಾರರಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ಸಮಸ್ಯೆ ತಪ್ಪಿದೆ: ‘ರೇಷ್ಮೆಗೂಡು ಮಾರುಕಟ್ಟೆಯಲ್ಲಿ ವಹಿವಾಟು ಪುನರಾರಂಭವಾಗಿರುವುದರಿಂದ ರೈತರು ರೀಲರ್ಸ್ಗಳ ಮನೆಗೆ ಗೂಡು ತೆಗೆದುಕೊಂಡು ಹೋಗುವ ಸಮಸ್ಯೆ ತಪ್ಪಿದೆ. ಇದರಿಂದ ರೀಲರ್ಸ್ಗಳಿಗೂ ಅನುಕೂಲವಾಗಿದೆ’ ಎಂದು ಕರ್ನಾಟಕ ರಾಜ್ಯ ನೂಲು ಬಿಚ್ಚಾಣಿಕೆದಾರರ ಸಂಘದ ಉಪಾಧ್ಯಕ್ಷ ಸಾಬೀರ್ ಪಾಷಾ ಹೇಳಿದರು.</p>.<p>‘ರೀಲರ್ಸ್ಗಳು ಬೈಕ್ಗಳಲ್ಲಿ ಮಾರುಕಟ್ಟೆಗೆ ಬರುವಾಗ ಮತ್ತು ಮಾರುಕಟ್ಟೆಯಿಂದ ಆಟೊಗಳಲ್ಲಿ ಗೂಡು ತೆಗೆದುಕೊಂಡು ಹೋಗುವಾಗ ಪೊಲೀಸರು ತಡೆದು ತೊಂದರೆ ಮಾಡುತ್ತಿದ್ದಾರೆ. ಜಿಲ್ಲೆಯ ರಾಮಸಂದ್ರ ಗಡಿ ಭಾಗದಲ್ಲಿ ಗೂಡು ಸಾಗಣೆ ವಾಹನಗಳ್ನು ತಡೆಯಲಾಗುತ್ತಿದೆ. ಇದರಿಂದ ಬೆಂಗಳೂರಿಗೆ ಗೂಡು ಸಾಗಿಸಲು ಸಮಸ್ಯೆಯಾಗಿದೆ’ ಎಂದು ಅಳಲು ತೋಡಿಕೊಂಡರು.</p>.<p><strong>ಪೊಲೀಸರ ಬೆದರಿಕೆ:</strong> ‘ದಿಗ್ಬಂಧನ ಆದೇಶದ ನೆಪದಲ್ಲಿ ಪೊಲೀಸರು ನೂಲು ಬಿಚ್ಚಾಣಿಕೆ ಕಾರ್ಖಾನೆಗಳನ್ನು ಪ್ರವೇಶಿಸಿ ಅಲ್ಲಿನ ಕಾರ್ಮಿಕರನ್ನು ಬೆದರಿಸುತ್ತಿದ್ದಾರೆ. ಕೆಲಸ ಸ್ಥಗಿತಗೊಳಿಸುವಂತೆ ತಾಕೀತು ಮಾಡಿ ಕಾರ್ಮಿಕರನ್ನು ಹೊರ ಕಳುಹಿಸಿ ಕಾರ್ಖಾನೆಗಳನ್ನು ಬಂದ್ ಮಾಡುತ್ತಿದ್ದಾರೆ. ಪೊಲೀಸರು ಈ ರೀತಿ ವರ್ತಿಸಿದರೆ ನಾವು ಬದುಕುವುದು ಹೇಗೆ?’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ದೂರಿಗೆ ಸ್ಪಂದಿಸಿದ ಸಿಇಒ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ. ‘ರೇಷ್ಮೆ ಬೆಳೆಗಾರರು ಮತ್ತು ರೀಲರ್ಸ್ಗಳ ವಾಹನಗಳನ್ನು ತಡೆಯಬೇಡಿ. ಜತೆಗೆ ಅವರ ವಾಹನಗಳಿಗೆ ಪಾಸ್ ವ್ಯವಸ್ಥೆ ಕಲ್ಪಿಸಿ’ ಎಂದು ಸೂಚಿಸಿದರು.</p>.<p>‘ಬೈಕ್ ಮತ್ತು ಆಟೊಗಳಲ್ಲಿ ರೇಷ್ಮೆಗೂಡು ಸಾಗಿಸುವ ರೀಲರ್ಸ್ಗಳಿಗೆ ರೇಷ್ಮೆ ಇಲಾಖೆಯಿಂದ ಗುರುತಿನ ಚೀಟಿ ವಿತರಿಸಬೇಕು. ಗೂಡು ಮಾರುಕಟ್ಟೆಯಲ್ಲಿ ಹೆಚ್ಚಿನ ಜನರು ಒಂದೆಡೆ ಗುಂಪುಗೂಡದಂತೆ ನೋಡಿಕೊಳ್ಳಬೇಕು. ನೂಲು ಬಿಚ್ಚಾಣಿಕೆ ಕೇಂದ್ರಗಳಲ್ಲಿ ಶೇ 50ರಷ್ಟು ಕಾರ್ಮಿಕರನ್ನು ಮಾತ್ರ ಕೆಲಸಕ್ಕೆ ನಿಯೋಜಿಸಬೇಕು’ ಎಂದು ಸಲಹೆ ನೀಡಿದರು.</p>.<p>ಮಾರುಕಟ್ಟೆ ಪ್ರವೇಶ ಭಾಗದಲ್ಲಿ ರೈತರು, ಅಧಿಕಾರಿಗಳು ಹಾಗೂ ವರ್ತಕರಿಗೆ ಕೈ ಸ್ವಚ್ಛಗೊಳಿಸಿಕೊಳ್ಳಲು ಸ್ಯಾನಿಟೈಸರ್ ಇಟ್ಟಿರುವುದನ್ನು ಸಿಇಒ ಪರಿಶೀಲಿಸಿದರು. ರೇಷ್ಮೆ ಇಲಾಖೆ ಉಪ ನಿರ್ದೇಶಕ ಎಂ.ಕೆ.ಪ್ರಭಾಕರ್, ಸಹಾಯಕ ನಿರ್ದೇಶಕ ಮಂಜುನಾಥ್, ಗೂಡು ಮಾರುಕಟ್ಟೆ ಸಹಾಯಕ ನಿರ್ದೇಶಕಿ ರೆಡ್ಡಿಲಕ್ಷ್ಮಿ, ರೈತರು, ರೀಲರ್ಸ್ಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಕೊರೊನಾ ಸೋಂಕು ತಡೆಗೆ ರೇಷ್ಮೆಗೂಡು ಮಾರುಕಟ್ಟೆಗಳಲ್ಲಿ ರೈತರು ಹಾಗೂ ವರ್ತಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ದುರಾದೃಷ್ಟವಶಾತ್ ಒಬ್ಬರಿಗೆ ಸೋಂಕು ತಗುಲಿದರೂ ಎಲ್ಲರೂ ಸಮಸ್ಯೆ ಎದುರಿಸಬೇಕಾಗುತ್ತದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ವಿ.ದರ್ಶನ್ ಕಿವಿಮಾತು ಹೇಳಿದರು.</p>.<p>ಕೋವಿಡ್–19 ಭೀತಿ ಕಾರಣಕ್ಕೆ ಸರ್ಕಾರದ ಆದೇಶದಂತೆ ಕಳೆದೊಂದು ವಾರದಿಂದ ಬಂದ್ ಆಗಿದ್ದ ಇಲ್ಲಿನ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ಗುರುವಾರ ವಹಿವಾಟು ಪುನರಾರಂಭವಾದ ಹಿನ್ನೆಲೆಯಲ್ಲಿ ಅವರು ಮಾರುಕಟ್ಟೆಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಮಾತನಾಡಿದರು.</p>.<p>ಮಾರುಕಟ್ಟೆಯಲ್ಲಿ ವರ್ತಕರು ಹಾಗೂ ರೈತರು ಅಕ್ಕಪಕ್ಕ ಗುಂಪು ಗುಂಪಾಗಿ ನಿಂತಿದ್ದನ್ನು ಗಮನಿಸಿದ ಸಿಇಒ, ‘ಸಾಮಾಜಿಕ ಅಂತರ ಕಾಯ್ದುಕೊಂಡು ವಹಿವಾಟು ನಡೆಸಬೇಕು ಮತ್ತು ಮಾರುಕಟ್ಟೆ ಆವರಣ ಪ್ರವೇಶಿಸುವ ಪ್ರತಿಯೊಬ್ಬರು ಕಡ್ಡಾಯವಾಗಿ ಮುಖಗವಸು ಧರಿಸಬೇಕು’ ಎಂದು ಸೂಚನೆ ನೀಡಿದರು.</p>.<p>‘ಜಿಲ್ಲೆಯ ವಿವಿಧೆಡೆ ಮಾರುಕಟ್ಟೆಗೆ ವಾಹನಗಳಲ್ಲಿ ಗೂಡು ತರುತ್ತಿರುವ ರೈತರಿಗೆ ಪೊಲೀಸರು ಅಡ್ಡಿಪಡಿಸುತ್ತಿದ್ದಾರೆ. ವಹಿವಾಟಿನ ನಂತರ ರೀಲರ್ಸ್ಗಳು ಗೂಡು ಸಾಗಿಸಿಕೊಂಡು ಹೋಗುವ ವಾಹನಗಳನ್ನು ಪೊಲೀಸರು ತಡೆದು ಶೋಷಣೆ ಮಾಡುತ್ತಿದ್ದಾರೆ’ ಎಂದು ಜಿಲ್ಲೆ ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ ಸಿ.ವಿ.ನಾರಾಯಣಸ್ವಾಮಿ ದೂರಿದರು.</p>.<p>‘ರೇಷ್ಮೆಗೂಡು ಸಾಗಣೆ ವಾಹನಗಳನ್ನು ತಡೆಯದಂತೆ ಪೊಲೀಸರಿಗೆ ಸೂಚನೆ ನೀಡಬೇಕು. ರೇಷ್ಮೆ ಬೆಳೆಗಾರರು ಮತ್ತು ರೀಲರ್ಸ್ಗಳ ವಾಹನಗಳ ಸಂಚಾರಕ್ಕೆ ಪೊಲೀಸ್ ಇಲಾಖೆಯಿಂದ ಪಾಸ್ ವಿತರಣೆ ಮಾಡಬೇಕು. ರೇಷ್ಮೆ ಬೆಳೆಗಾರರಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ಸಮಸ್ಯೆ ತಪ್ಪಿದೆ: ‘ರೇಷ್ಮೆಗೂಡು ಮಾರುಕಟ್ಟೆಯಲ್ಲಿ ವಹಿವಾಟು ಪುನರಾರಂಭವಾಗಿರುವುದರಿಂದ ರೈತರು ರೀಲರ್ಸ್ಗಳ ಮನೆಗೆ ಗೂಡು ತೆಗೆದುಕೊಂಡು ಹೋಗುವ ಸಮಸ್ಯೆ ತಪ್ಪಿದೆ. ಇದರಿಂದ ರೀಲರ್ಸ್ಗಳಿಗೂ ಅನುಕೂಲವಾಗಿದೆ’ ಎಂದು ಕರ್ನಾಟಕ ರಾಜ್ಯ ನೂಲು ಬಿಚ್ಚಾಣಿಕೆದಾರರ ಸಂಘದ ಉಪಾಧ್ಯಕ್ಷ ಸಾಬೀರ್ ಪಾಷಾ ಹೇಳಿದರು.</p>.<p>‘ರೀಲರ್ಸ್ಗಳು ಬೈಕ್ಗಳಲ್ಲಿ ಮಾರುಕಟ್ಟೆಗೆ ಬರುವಾಗ ಮತ್ತು ಮಾರುಕಟ್ಟೆಯಿಂದ ಆಟೊಗಳಲ್ಲಿ ಗೂಡು ತೆಗೆದುಕೊಂಡು ಹೋಗುವಾಗ ಪೊಲೀಸರು ತಡೆದು ತೊಂದರೆ ಮಾಡುತ್ತಿದ್ದಾರೆ. ಜಿಲ್ಲೆಯ ರಾಮಸಂದ್ರ ಗಡಿ ಭಾಗದಲ್ಲಿ ಗೂಡು ಸಾಗಣೆ ವಾಹನಗಳ್ನು ತಡೆಯಲಾಗುತ್ತಿದೆ. ಇದರಿಂದ ಬೆಂಗಳೂರಿಗೆ ಗೂಡು ಸಾಗಿಸಲು ಸಮಸ್ಯೆಯಾಗಿದೆ’ ಎಂದು ಅಳಲು ತೋಡಿಕೊಂಡರು.</p>.<p><strong>ಪೊಲೀಸರ ಬೆದರಿಕೆ:</strong> ‘ದಿಗ್ಬಂಧನ ಆದೇಶದ ನೆಪದಲ್ಲಿ ಪೊಲೀಸರು ನೂಲು ಬಿಚ್ಚಾಣಿಕೆ ಕಾರ್ಖಾನೆಗಳನ್ನು ಪ್ರವೇಶಿಸಿ ಅಲ್ಲಿನ ಕಾರ್ಮಿಕರನ್ನು ಬೆದರಿಸುತ್ತಿದ್ದಾರೆ. ಕೆಲಸ ಸ್ಥಗಿತಗೊಳಿಸುವಂತೆ ತಾಕೀತು ಮಾಡಿ ಕಾರ್ಮಿಕರನ್ನು ಹೊರ ಕಳುಹಿಸಿ ಕಾರ್ಖಾನೆಗಳನ್ನು ಬಂದ್ ಮಾಡುತ್ತಿದ್ದಾರೆ. ಪೊಲೀಸರು ಈ ರೀತಿ ವರ್ತಿಸಿದರೆ ನಾವು ಬದುಕುವುದು ಹೇಗೆ?’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ದೂರಿಗೆ ಸ್ಪಂದಿಸಿದ ಸಿಇಒ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ. ‘ರೇಷ್ಮೆ ಬೆಳೆಗಾರರು ಮತ್ತು ರೀಲರ್ಸ್ಗಳ ವಾಹನಗಳನ್ನು ತಡೆಯಬೇಡಿ. ಜತೆಗೆ ಅವರ ವಾಹನಗಳಿಗೆ ಪಾಸ್ ವ್ಯವಸ್ಥೆ ಕಲ್ಪಿಸಿ’ ಎಂದು ಸೂಚಿಸಿದರು.</p>.<p>‘ಬೈಕ್ ಮತ್ತು ಆಟೊಗಳಲ್ಲಿ ರೇಷ್ಮೆಗೂಡು ಸಾಗಿಸುವ ರೀಲರ್ಸ್ಗಳಿಗೆ ರೇಷ್ಮೆ ಇಲಾಖೆಯಿಂದ ಗುರುತಿನ ಚೀಟಿ ವಿತರಿಸಬೇಕು. ಗೂಡು ಮಾರುಕಟ್ಟೆಯಲ್ಲಿ ಹೆಚ್ಚಿನ ಜನರು ಒಂದೆಡೆ ಗುಂಪುಗೂಡದಂತೆ ನೋಡಿಕೊಳ್ಳಬೇಕು. ನೂಲು ಬಿಚ್ಚಾಣಿಕೆ ಕೇಂದ್ರಗಳಲ್ಲಿ ಶೇ 50ರಷ್ಟು ಕಾರ್ಮಿಕರನ್ನು ಮಾತ್ರ ಕೆಲಸಕ್ಕೆ ನಿಯೋಜಿಸಬೇಕು’ ಎಂದು ಸಲಹೆ ನೀಡಿದರು.</p>.<p>ಮಾರುಕಟ್ಟೆ ಪ್ರವೇಶ ಭಾಗದಲ್ಲಿ ರೈತರು, ಅಧಿಕಾರಿಗಳು ಹಾಗೂ ವರ್ತಕರಿಗೆ ಕೈ ಸ್ವಚ್ಛಗೊಳಿಸಿಕೊಳ್ಳಲು ಸ್ಯಾನಿಟೈಸರ್ ಇಟ್ಟಿರುವುದನ್ನು ಸಿಇಒ ಪರಿಶೀಲಿಸಿದರು. ರೇಷ್ಮೆ ಇಲಾಖೆ ಉಪ ನಿರ್ದೇಶಕ ಎಂ.ಕೆ.ಪ್ರಭಾಕರ್, ಸಹಾಯಕ ನಿರ್ದೇಶಕ ಮಂಜುನಾಥ್, ಗೂಡು ಮಾರುಕಟ್ಟೆ ಸಹಾಯಕ ನಿರ್ದೇಶಕಿ ರೆಡ್ಡಿಲಕ್ಷ್ಮಿ, ರೈತರು, ರೀಲರ್ಸ್ಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>