ನಗರದ ಶಾಂತಿನಗರ, ಚೌಡೇಶ್ವರಿನಗರ ಹಾಗೂ ರಹಮತ್ ನಗರ ಬಡಾವಣೆಗಳಲ್ಲಿರುವ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ರಾತ್ರಿ ಇಡೀ ನಿವಾಸಿಗಳು ನೀರನ್ನು ಹೊರಹಾಕುವ ಕಾರ್ಯದಲ್ಲಿ ತೊಡಗಿದ್ದರು. ಕಂಪ್ಯೂಟರ್ ರಿಪೇರಿ ಮಳಿಗೆಗೆ ನೀರು ನುಗ್ಗಿ ನಷ್ಟ ಉಂಟಾಗಿದೆ.ಎಲೆಕ್ಟ್ರಾನಿಕ್ ಉಪಕರಣಗಳು, ದಿನಸಿ ಪದಾರ್ಥಗಳು ನೀರಿನಲ್ಲಿ ನಾಶವಾಗಿವೆ. ರೈಲ್ವೆ ಮೇಲ್ಸೇತುವೆ ಬಳಿ ನೀರು ನಿಂತಿದ್ದು, ವಾಹನ ಸವಾರರು ಪರದಾಡಿದರು. ರಸ್ತೆ ಗುಂಡಿಗಳಲ್ಲೂ ನೀರು ತುಂಬಿಕೊಂಡಿದೆ.