ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ 2 ರಾಷ್ಟ್ರೀಯ ಪಕ್ಷಗಳಿಂದ ವಂಚಿತರಾಗಿರುವ ಅಭ್ಯರ್ಥಿಗಳು ಒಂದಾಗಿ ಒಬ್ಬರು ಸ್ಪರ್ಧೆ ನಡೆಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕಳೆದ 4 ವರ್ಷಗಳಿಂದ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿ ಟಿಕೇಟ್ ವಂಚಿತರಾಗಿರುವ ಸಾಸಲು ಸತೀಶ್ ಹಾಗೂ ಬಿಜೆಪಿಯ ಕೆ.ಎಸ್.ಕಿರಣ್ಕುಮಾರ್ ನಡುವೆ ಚರ್ಚೆ ನಡೆಯುತ್ತಿದೆ ಎನ್ನಲಾಗುತ್ತಿದೆ. ಈಗಾಗಲೇ ಇಬ್ಬರು ನಾಯಕರು ತಮ್ಮ ಕಾರ್ಯಕರ್ತರ ಸಭೆಯನ್ನು ನಡೆಸಿದ್ದಾರೆ. ಇಬ್ಬರ ಸಭೆ ಒಮ್ಮತಕ್ಕೆ ಬಂದರೆ ಇಬ್ಬರ ಪರವಾಗಿ ಒಬ್ಬರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯುವುದು ಖಚಿತ ಎಂದು ತಿಳಿದು ಬಂದಿದೆ. ಇನ್ನರೆಡು ದಿನಗಳಲ್ಲಿ ಯಾರು ಅಭ್ಯರ್ಥಿ ಎಂಬುದು ಸ್ಪಷ್ಟವಾಗಲಿದೆ. ಒಟ್ಟಾರೆ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಬಂಡಾಯದ ಬಿಸಿ ಕ್ಷೇತ್ರದಲ್ಲಿ ಕಂಡುಬರುತ್ತಿದೆ.