<p><strong>ಕೋಲಾರ:</strong> ‘ರಾಜಕೀಯದಲ್ಲಿ ಪೈಪೋಟಿ, ಚುನಾವಣೆ ಇರಲಿ, ಆದರೆ ಸಹಕಾರಿ ರಂಗಗಳಲ್ಲಿ ಎಲ್ಲರೂ ಒಂದಾಗಿ, ಪಾರದರ್ಶಕವಾಗಿ ಸೊಸೈಟಿಯನ್ನು ಮುನ್ನಡೆಸುವ ಮೂಲಕ ಒಮ್ಮತದ ತೀರ್ಮಾನಕ್ಕೆ ಒತ್ತು ನೀಡಬೇಕು’ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂಡದಗೌಡ ಸಲಹೆ ನಿಡಿದರು.</p>.<p>ತಾಲ್ಲೂಕಿನ ಮದ್ದೇರಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಗೆ ಆಯ್ಕೆಯಾಗಿರುವ ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕರನ್ನು ಇತ್ತೀಚಿಗೆ ಅಭಿನಂದಿಸಿ ಮಾತನಾಡಿ, ‘ಎಸ್ಎಫ್ಸಿಎಸ್ಗಳು ಡಿಸಿಸಿ ಬ್ಯಾಂಕಿನ ಅವಿಭಾಜ್ಯ ಅಂಗವಾಗಿದ್ದು, ಇಲ್ಲಿ ಯಾವುದೇ ಅವ್ಯವಹಾರಗಳಿಗೆ ಅವಕಾಶ ನೀಡಬಾರದು’ ಎಂದರು.</p>.<p>‘ಕೇವಲ ಸಾಲ ನೀಡಿ, ವಸೂಲಿಗೆ ಮಾತ್ರ ಸೀಮಿತವಾಗದೇ ಠೇವಣಿ ಸಂಗ್ರಹಕ್ಕೂ ಒತ್ತು ನೀಡಬೇಕು. ಇದರಿಂದ ಸಹಕಾರಿ ವ್ಯವಸ್ಥೆಯನ್ನು ಬಲಗೊಳಿಸಲು ಸಹಕಾರಿಯಾಗುತ್ತದೆ. ಪಕ್ಷಾತೀತ, ಜಾತ್ಯಾತೀತ ವ್ಯವಸ್ಥೆಗೆ ಪುರಸ್ಕಾರ ಸಿಗಬೇಕು. ಅಧಿಕಾರಕ್ಕಾಗಿ ಪೈಪೋಟಿ, ಚುನಾವಣೆ ನಡೆದರೆ ವ್ಯವಸ್ಥೆ ದುರ್ಬಲಗೊಳ್ಳಲು ಕಾರಣವಾಗುತ್ತದೆ’ಎಂದು ಹೇಳಿದರು.</p>.<p>ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎಲ್.ಅನಿಲ್ಕುಮಾರ್ ಮಾತನಾಡಿ, ‘ಆರ್ಥಿಕವಾಗಿ ದುರ್ಬಲಗೊಂಡು ನಿಷ್ಕ್ರಯಗೊಂಡಿದ್ದ ಸೊಸೈಟಿಗಳಿಗೆ ಈಗ ಮರು ಜೀವ ಬಂದಿದೆ. ಡಿಸಿಸಿ ಬ್ಯಾಂಕ್ ಬಲಗೊಂಡು ಎಲ್ಲಾ ಆರ್ಥಿಕ ನೆರವು ನೀಡುವ ಶಕ್ತಿ ಪಡೆದುಕೊಂಡಿದ್ದು, ಇದನ್ನು ಸದ್ವಿನಿಯೋಗಿಸಿಕೊಳ್ಳ’ ಎಂದು ಸಲಹೆ ನೀಡಿದರು.</p>.<p>ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಸೋಮಣ್ಣ, ಕೆ.ವಿ.ದಯಾನಂದ್, ಎಸ್ಎಫ್ಸಿಎಸ್ ಅಧ್ಯಕ್ಷ ಎಂ.ಆರ್.ಶ್ರೀನಿವಾಸಗೌಡ, ಮಾಜಿ ಅಧ್ಯಕ್ಷ ಎಸ್.ರಾಮೇಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ರಮೇಶ್, ನಿರ್ದೇಶಕರಾದ ವಿ.ಕೃಷ್ಣಪ್ಪ, ಎಂ.ಮಲ್ಲೇಗೌಡ, ಎನ್.ವೆಂಕಟರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ರಾಜಕೀಯದಲ್ಲಿ ಪೈಪೋಟಿ, ಚುನಾವಣೆ ಇರಲಿ, ಆದರೆ ಸಹಕಾರಿ ರಂಗಗಳಲ್ಲಿ ಎಲ್ಲರೂ ಒಂದಾಗಿ, ಪಾರದರ್ಶಕವಾಗಿ ಸೊಸೈಟಿಯನ್ನು ಮುನ್ನಡೆಸುವ ಮೂಲಕ ಒಮ್ಮತದ ತೀರ್ಮಾನಕ್ಕೆ ಒತ್ತು ನೀಡಬೇಕು’ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂಡದಗೌಡ ಸಲಹೆ ನಿಡಿದರು.</p>.<p>ತಾಲ್ಲೂಕಿನ ಮದ್ದೇರಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಗೆ ಆಯ್ಕೆಯಾಗಿರುವ ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕರನ್ನು ಇತ್ತೀಚಿಗೆ ಅಭಿನಂದಿಸಿ ಮಾತನಾಡಿ, ‘ಎಸ್ಎಫ್ಸಿಎಸ್ಗಳು ಡಿಸಿಸಿ ಬ್ಯಾಂಕಿನ ಅವಿಭಾಜ್ಯ ಅಂಗವಾಗಿದ್ದು, ಇಲ್ಲಿ ಯಾವುದೇ ಅವ್ಯವಹಾರಗಳಿಗೆ ಅವಕಾಶ ನೀಡಬಾರದು’ ಎಂದರು.</p>.<p>‘ಕೇವಲ ಸಾಲ ನೀಡಿ, ವಸೂಲಿಗೆ ಮಾತ್ರ ಸೀಮಿತವಾಗದೇ ಠೇವಣಿ ಸಂಗ್ರಹಕ್ಕೂ ಒತ್ತು ನೀಡಬೇಕು. ಇದರಿಂದ ಸಹಕಾರಿ ವ್ಯವಸ್ಥೆಯನ್ನು ಬಲಗೊಳಿಸಲು ಸಹಕಾರಿಯಾಗುತ್ತದೆ. ಪಕ್ಷಾತೀತ, ಜಾತ್ಯಾತೀತ ವ್ಯವಸ್ಥೆಗೆ ಪುರಸ್ಕಾರ ಸಿಗಬೇಕು. ಅಧಿಕಾರಕ್ಕಾಗಿ ಪೈಪೋಟಿ, ಚುನಾವಣೆ ನಡೆದರೆ ವ್ಯವಸ್ಥೆ ದುರ್ಬಲಗೊಳ್ಳಲು ಕಾರಣವಾಗುತ್ತದೆ’ಎಂದು ಹೇಳಿದರು.</p>.<p>ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎಲ್.ಅನಿಲ್ಕುಮಾರ್ ಮಾತನಾಡಿ, ‘ಆರ್ಥಿಕವಾಗಿ ದುರ್ಬಲಗೊಂಡು ನಿಷ್ಕ್ರಯಗೊಂಡಿದ್ದ ಸೊಸೈಟಿಗಳಿಗೆ ಈಗ ಮರು ಜೀವ ಬಂದಿದೆ. ಡಿಸಿಸಿ ಬ್ಯಾಂಕ್ ಬಲಗೊಂಡು ಎಲ್ಲಾ ಆರ್ಥಿಕ ನೆರವು ನೀಡುವ ಶಕ್ತಿ ಪಡೆದುಕೊಂಡಿದ್ದು, ಇದನ್ನು ಸದ್ವಿನಿಯೋಗಿಸಿಕೊಳ್ಳ’ ಎಂದು ಸಲಹೆ ನೀಡಿದರು.</p>.<p>ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಸೋಮಣ್ಣ, ಕೆ.ವಿ.ದಯಾನಂದ್, ಎಸ್ಎಫ್ಸಿಎಸ್ ಅಧ್ಯಕ್ಷ ಎಂ.ಆರ್.ಶ್ರೀನಿವಾಸಗೌಡ, ಮಾಜಿ ಅಧ್ಯಕ್ಷ ಎಸ್.ರಾಮೇಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ರಮೇಶ್, ನಿರ್ದೇಶಕರಾದ ವಿ.ಕೃಷ್ಣಪ್ಪ, ಎಂ.ಮಲ್ಲೇಗೌಡ, ಎನ್.ವೆಂಕಟರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>