ಗುರುವಾರ ಇಲ್ಲಿ ಆಯೋಜಿಸಿದ್ದ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಕುರುಬ ಸಮಾಜಕ್ಕೆ ಅವಮಾನವಾಗಬಾರದೆಂದು ಸಿದ್ದರಾಮಯ್ಯ ಅವರಿಗೆ ಕಿವಿಮಾತು ಹೇಳುತ್ತಿದ್ದೇನೆ. ಸೋಲಿಸಲೆಂದೇ, ಹಾಳು ಮಾಡಲೆಂದು ಅವರನ್ನು ಇಲ್ಲಿಗೆ ಕರೆ ತರಲು ಸಂಚು ಹಾಕುತ್ತಿದ್ದಾರೆ. ಮುಸ್ಲಿಂ ಹೊರತುಪಡಿಸಿ ಕ್ಷೇತ್ರದ 220 ಹಳ್ಳಿಯಲ್ಲಿ ಪ್ರತಿ ಮತದಾರ ನನಗೆ ಗೊತ್ತು’ ಎಂದರು.