<p><strong>ಕೋಲಾರ:</strong> ಇಲಾಖೆಯಿಂದ ತಾಲೂಕಿನಲ್ಲಿ ಮುಂಗಾರು ಹಂಗಾಮಿನ ಬಿತ್ತನೆಗೆ ದೃಢೀಕೃತ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಿ ಸಹಾಯಧನದಲ್ಲಿ ರೈತರಿಗೆ ವಿತರಣೆ ಮಾಡಲಾಗುತ್ತಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಎಸ್.ನಾಗರಾಜ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ತಾಲ್ಲೂಕಿನಲ್ಲಿ ರಾಗಿ ಪ್ರಮುಖ ಬೆಳೆಯಾಗಿದ್ದು, ಸುಮಾರು 14,580 ಹೆಕ್ಟರ್ನಲ್ಲಿ ಬಿತ್ತನೆಯಾಗಲಿದೆ. ದೀರ್ಘಾವಧಿ ತಳಿಯಾದ ಎಂ.ಆರ್-1/6 ಬಿತ್ತನೆ ಬೀಜವನ್ನು 24 ಕ್ವಿಂಟಾಲ್ನಷ್ಟು ದಾಸ್ತಾನು ಮಾಡಿ ರೈತರಿಗೆ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.</p>.<p>850 ಹೆಕ್ಟೇರ್ನಲ್ಲಿ ತೊಗರಿ ಬೆಳೆ ಬಿತ್ತನೆಯಾಗಬೇಕಿದ್ದು, ಬಿಆರ್ಜಿ-1 ಮತ್ತು ಬಿಆರ್ಜಿ -5 ತಳಿಯ 14 ಕ್ವಿಂಟಾಲ್ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. ತಾಲ್ಲೂಕಿನ ಹುತ್ತೂರು ಹೋಬಳಿಯಲ್ಲಿ ಪ್ರಮುಖವಾಗಿ ನೆಲಗಡಲೆ ಬೆಳೆಯುತ್ತಿದ್ದು, ಸುಮಾರು 200 ಹೆಕ್ಟೇರ್ನಲ್ಲಿ ಬಿತ್ತನೆಯಾಗಬೇಕಾಗಿದೆ. ಟಿ-6 ತಳಿಯ 44.3 ಕ್ವಿಂಟಾಲ್ ಬಿತ್ತನೆ ಬೀಜ ವಿತರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.</p>.<p>550 ಹೆಕ್ಟೇರ್ನಲ್ಲಿ ಅಲಸಂದೆ ಬೆಳೆ ಬಿತ್ತನೆಯಾಗಬೇಕಿದ್ದು, ಸೆ-152 ತಳಿಯ 2.4 ಕ್ವಿಂಟಾಲ್ ಬೀಜವನ್ನು ರೈತರಿಗೆ ವಿತರಿಸಲಾಗುತ್ತದೆ. ಒಟ್ಟಾರೆ ತಾಲ್ಲೂಕಿನಲ್ಲಿ 18,370 ಹೆಕ್ಟೇರ್ ಬಿತ್ತನೆ ಗುರಿಯಿದೆ. ರೈತರು ಮುಂದಿನ ಹಂಗಾಮಿಗೆ ತಾವೇ ಬೆಳೆದ ಬೆಳೆಯಿಂದ ಉತ್ತಮ ಬೀಜ ಆರಿಸಿಕೊಂಡು ಬೆಳೆಯಬೇಕು. ಪ್ರತಿ 3 ವರ್ಷಕ್ಕೊಮ್ಮೆ ಬಿತ್ತನೆ ಬೀಜವನ್ನು ರೈತ ಸಂಪರ್ಕ ಕೇಂದ್ರಗಳಿಂದ ಪಡೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.</p>.<p>ತಾಲ್ಲೂಕಿನಲ್ಲಿ ರಸಗೊಬ್ಬರಗಳ ದಾಸ್ತಾನು ಸಾಕಷ್ಟಿದೆ. ರೈತರು ನೇರವಾಗಿ ನಿಗದಿತ ದರಕ್ಕೆ ರಸಗೊಬ್ಬರ ಖರೀದಿಸಬೇಕು ಮತ್ತು ರಶೀದಿ ಪಡೆಯಬೇಕು. ಹೆಚ್ಚಿನ ದರ ಕೇಳಿದರೆ ರೈತ ಸಂಪರ್ಕ ಕೃಷಿ ಅಧಿಕಾರಿ ಅಥವಾ ಸಹಾಯಕ ಕೃಷಿ ನಿರ್ದೇಶಕರಿಗೆ ದೂರು ನೀಡಬಹುದು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಇಲಾಖೆಯಿಂದ ತಾಲೂಕಿನಲ್ಲಿ ಮುಂಗಾರು ಹಂಗಾಮಿನ ಬಿತ್ತನೆಗೆ ದೃಢೀಕೃತ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಿ ಸಹಾಯಧನದಲ್ಲಿ ರೈತರಿಗೆ ವಿತರಣೆ ಮಾಡಲಾಗುತ್ತಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಎಸ್.ನಾಗರಾಜ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ತಾಲ್ಲೂಕಿನಲ್ಲಿ ರಾಗಿ ಪ್ರಮುಖ ಬೆಳೆಯಾಗಿದ್ದು, ಸುಮಾರು 14,580 ಹೆಕ್ಟರ್ನಲ್ಲಿ ಬಿತ್ತನೆಯಾಗಲಿದೆ. ದೀರ್ಘಾವಧಿ ತಳಿಯಾದ ಎಂ.ಆರ್-1/6 ಬಿತ್ತನೆ ಬೀಜವನ್ನು 24 ಕ್ವಿಂಟಾಲ್ನಷ್ಟು ದಾಸ್ತಾನು ಮಾಡಿ ರೈತರಿಗೆ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.</p>.<p>850 ಹೆಕ್ಟೇರ್ನಲ್ಲಿ ತೊಗರಿ ಬೆಳೆ ಬಿತ್ತನೆಯಾಗಬೇಕಿದ್ದು, ಬಿಆರ್ಜಿ-1 ಮತ್ತು ಬಿಆರ್ಜಿ -5 ತಳಿಯ 14 ಕ್ವಿಂಟಾಲ್ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. ತಾಲ್ಲೂಕಿನ ಹುತ್ತೂರು ಹೋಬಳಿಯಲ್ಲಿ ಪ್ರಮುಖವಾಗಿ ನೆಲಗಡಲೆ ಬೆಳೆಯುತ್ತಿದ್ದು, ಸುಮಾರು 200 ಹೆಕ್ಟೇರ್ನಲ್ಲಿ ಬಿತ್ತನೆಯಾಗಬೇಕಾಗಿದೆ. ಟಿ-6 ತಳಿಯ 44.3 ಕ್ವಿಂಟಾಲ್ ಬಿತ್ತನೆ ಬೀಜ ವಿತರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.</p>.<p>550 ಹೆಕ್ಟೇರ್ನಲ್ಲಿ ಅಲಸಂದೆ ಬೆಳೆ ಬಿತ್ತನೆಯಾಗಬೇಕಿದ್ದು, ಸೆ-152 ತಳಿಯ 2.4 ಕ್ವಿಂಟಾಲ್ ಬೀಜವನ್ನು ರೈತರಿಗೆ ವಿತರಿಸಲಾಗುತ್ತದೆ. ಒಟ್ಟಾರೆ ತಾಲ್ಲೂಕಿನಲ್ಲಿ 18,370 ಹೆಕ್ಟೇರ್ ಬಿತ್ತನೆ ಗುರಿಯಿದೆ. ರೈತರು ಮುಂದಿನ ಹಂಗಾಮಿಗೆ ತಾವೇ ಬೆಳೆದ ಬೆಳೆಯಿಂದ ಉತ್ತಮ ಬೀಜ ಆರಿಸಿಕೊಂಡು ಬೆಳೆಯಬೇಕು. ಪ್ರತಿ 3 ವರ್ಷಕ್ಕೊಮ್ಮೆ ಬಿತ್ತನೆ ಬೀಜವನ್ನು ರೈತ ಸಂಪರ್ಕ ಕೇಂದ್ರಗಳಿಂದ ಪಡೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.</p>.<p>ತಾಲ್ಲೂಕಿನಲ್ಲಿ ರಸಗೊಬ್ಬರಗಳ ದಾಸ್ತಾನು ಸಾಕಷ್ಟಿದೆ. ರೈತರು ನೇರವಾಗಿ ನಿಗದಿತ ದರಕ್ಕೆ ರಸಗೊಬ್ಬರ ಖರೀದಿಸಬೇಕು ಮತ್ತು ರಶೀದಿ ಪಡೆಯಬೇಕು. ಹೆಚ್ಚಿನ ದರ ಕೇಳಿದರೆ ರೈತ ಸಂಪರ್ಕ ಕೃಷಿ ಅಧಿಕಾರಿ ಅಥವಾ ಸಹಾಯಕ ಕೃಷಿ ನಿರ್ದೇಶಕರಿಗೆ ದೂರು ನೀಡಬಹುದು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>