<p>ಕೆಜಿಎಫ್: ಜಿಲ್ಲಾ ಪೊಲೀಸ್ ಕಚೇರಿಯನ್ನು ನಗರದಿಂದ ಬೇರೆಡೆಗೆ ಸ್ಥಳಾಂತರ ಮಾಡುವ ಸಂಬಂಧ ಹಲವಾರು ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗುತ್ತಿದ್ದರೂ, ಪೊಲೀಸ್ ಇಲಾಖೆ ಇದುವರೆವಿಗೂ ಈ ಬಗ್ಗೆ ಚಕಾರ ಎತ್ತದಿರುವುದರಿಂದ ಸ್ಥಳಾಂತರ ಖಚಿತ ಎಂಬ ಭಾವನೆ ಮೂಡಿದೆ.</p>.<p>ಸ್ವಾತಂತ್ರ್ಯಪೂರ್ವದಲ್ಲಿ ಚಿನ್ನದ ಗಣಿಯಲ್ಲಿ ಆಗುತ್ತಿದ್ದ ಕಳ್ಳತನ ತಡೆಗಟ್ಟಲು ವ್ಯವಸ್ಥಿತ ರೀತಿಯಲ್ಲಿ ಪೊಲೀಸ್ ಪಡೆ ರಚಿಸಿದ್ದರು. ಅದಕ್ಕೆ ಸೂಪರಿಟೆಂಡೆಂಟ್ ಆಫ್ ಪೊಲೀಸ್ ಹುದ್ದೆ ಸೃಷ್ಟಿಸಿದ್ದರು. ಸ್ವಾತಂತ್ರ್ಯ ನಂತರ ಕೂಡ ಅದೇ ಹುದ್ದೆ ರಾಜ್ಯ ಸರ್ಕಾರದ ಅಧೀನದಲ್ಲಿ ಮುಂದುವರಿಯಿತು.</p>.<p>ಹಲವು ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಶಾಸಕಿ ಎಂ. ರೂಪಕಲಾ ಈ ಬಗ್ಗೆ ಸ್ಪಷ್ಟೀಕರಣ ನೀಡಿ, ಇಂತಹ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ. ಮಾಜಿ ಶಾಸಕ ಎಸ್. ರಾಜೇಂದ್ರನ್ ಪ್ರತಿಭಟನೆ ಕೈಗೊಳ್ಳು ವುದಾಗಿ ಎಚ್ಚರಿಕೆ ನೀಡಿದ್ದಾರೆ.</p>.<p>7ರಂದು ಬಂದ್</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಕಚೇರಿಯನ್ನು ಬೇರೆಡೆಗೆ ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿದೆ. ಕೂಡಲೇ ಪ್ರಕ್ರಿಯೆಯನ್ನು ಕೂಡಲೇ ಕೈಬಿಡದೆ ಇದ್ದರೆ ಆಗಸ್ಟ್ 7ರಂದು ಕೆಜಿಎಫ್ ಬಂದ್ ಆಚರಣೆ ಮಾಡುವುದಾಗಿ ಘೋಷಿಸಿದ್ದಾರೆ. ಬೆಳಿಗ್ಗೆ 6 ರಿಂದ ಸಂಜೆ 5ವರೆವಿಗೂ ಬಂದ್ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಜಿಎಫ್: ಜಿಲ್ಲಾ ಪೊಲೀಸ್ ಕಚೇರಿಯನ್ನು ನಗರದಿಂದ ಬೇರೆಡೆಗೆ ಸ್ಥಳಾಂತರ ಮಾಡುವ ಸಂಬಂಧ ಹಲವಾರು ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗುತ್ತಿದ್ದರೂ, ಪೊಲೀಸ್ ಇಲಾಖೆ ಇದುವರೆವಿಗೂ ಈ ಬಗ್ಗೆ ಚಕಾರ ಎತ್ತದಿರುವುದರಿಂದ ಸ್ಥಳಾಂತರ ಖಚಿತ ಎಂಬ ಭಾವನೆ ಮೂಡಿದೆ.</p>.<p>ಸ್ವಾತಂತ್ರ್ಯಪೂರ್ವದಲ್ಲಿ ಚಿನ್ನದ ಗಣಿಯಲ್ಲಿ ಆಗುತ್ತಿದ್ದ ಕಳ್ಳತನ ತಡೆಗಟ್ಟಲು ವ್ಯವಸ್ಥಿತ ರೀತಿಯಲ್ಲಿ ಪೊಲೀಸ್ ಪಡೆ ರಚಿಸಿದ್ದರು. ಅದಕ್ಕೆ ಸೂಪರಿಟೆಂಡೆಂಟ್ ಆಫ್ ಪೊಲೀಸ್ ಹುದ್ದೆ ಸೃಷ್ಟಿಸಿದ್ದರು. ಸ್ವಾತಂತ್ರ್ಯ ನಂತರ ಕೂಡ ಅದೇ ಹುದ್ದೆ ರಾಜ್ಯ ಸರ್ಕಾರದ ಅಧೀನದಲ್ಲಿ ಮುಂದುವರಿಯಿತು.</p>.<p>ಹಲವು ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಶಾಸಕಿ ಎಂ. ರೂಪಕಲಾ ಈ ಬಗ್ಗೆ ಸ್ಪಷ್ಟೀಕರಣ ನೀಡಿ, ಇಂತಹ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ. ಮಾಜಿ ಶಾಸಕ ಎಸ್. ರಾಜೇಂದ್ರನ್ ಪ್ರತಿಭಟನೆ ಕೈಗೊಳ್ಳು ವುದಾಗಿ ಎಚ್ಚರಿಕೆ ನೀಡಿದ್ದಾರೆ.</p>.<p>7ರಂದು ಬಂದ್</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಕಚೇರಿಯನ್ನು ಬೇರೆಡೆಗೆ ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿದೆ. ಕೂಡಲೇ ಪ್ರಕ್ರಿಯೆಯನ್ನು ಕೂಡಲೇ ಕೈಬಿಡದೆ ಇದ್ದರೆ ಆಗಸ್ಟ್ 7ರಂದು ಕೆಜಿಎಫ್ ಬಂದ್ ಆಚರಣೆ ಮಾಡುವುದಾಗಿ ಘೋಷಿಸಿದ್ದಾರೆ. ಬೆಳಿಗ್ಗೆ 6 ರಿಂದ ಸಂಜೆ 5ವರೆವಿಗೂ ಬಂದ್ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>