<p><strong>ಬಂಗಾರಪೇಟೆ:</strong> ಮುಸ್ಲಿಂ ಸಮುದಾಯದ ಪವಿತ್ರ ಹಬ್ಬಗಳಲ್ಲಿ ಒಂದಾದ ಶಬ್-ಎ-ಬರಾತ್ ಹಿನ್ನೆಲೆ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ಅವರು ಮಂಗಳವಾರ ರಾತ್ರಿ ಖುದ್ದಾಗಿ ರಸ್ತೆಗಿಳಿದು ವಿಶೇಷ ಗಸ್ತು ನಡೆಸುವ ಮೂಲಕ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.</p>.<p>ಶಬ್-ಎ-ಬರಾತ್ ಎಂದರೆ ಕ್ಷಮೆಯ ರಾತ್ರಿ. ಈ ದಿನದಂದು ಮುಸ್ಲಿಂ ಸಮುದಾಯದವರು ರಾತ್ರಿ ಪ್ರಾರ್ಥನೆ ಸಲ್ಲಿಸಿ, ಸಮಾಧಿಗಳಿಗೆ ಭೇಟಿ ನೀಡಿ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುವುದು ರೂಢಿ. ಈ ಸಂದರ್ಭದಲ್ಲಿ ನೂರಾರು ಜನರು ಸಮಾಧಿಗಳ ಬಳಿ ಸೇರುವುದರಿಂದ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದರು.</p>.<p>ನಗರದಲ್ಲಿ ಈ ಹಿಂದೆ ನಡೆದಿದ್ದ ಈದ್ ಮಿಲಾದ್ ವೇಳೆ ಪ್ಯಾಲೆಸ್ಟೀನ್ ಧ್ವಜ ಹಾರಾಡಿಸಿ ಪುಂಡಾಟಿಕೆ. ಉರುಸ್ ಸಮಯದಲ್ಲಿ ಯುವಕರ ಮೇಲೆ ನಡೆದ ದೌರ್ಜನ್ಯ ಹಾಗೂ ಇತ್ತೀಚಿನ ಹಿಂದೂ ಸಮಾಜೋತ್ಸವ ಹಿನ್ನೆಲೆ ಬಂಗಾರಪೇಟೆ ನಗರವನ್ನು ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಲಾಗಿತ್ತು. ಹಾಗಾಗಿ ಎಸ್ಪಿ ಅವರು ಗಸ್ತು ನಡೆಸಿದರು.</p>.<p>ನಗರದ ಎಸ್ಎನ್ ರೆಸಾರ್ಟ್, ಬೂದಿಕೋಟೆ ರಸ್ತೆ ಮತ್ತು ಸೂಲಿಕುಂಟೆ ರಸ್ತೆಗಳಲ್ಲಿ ವಿಶೇಷ ಚೆಕ್ ಪೋಸ್ಟ್ಗಳನ್ನು ನಿರ್ಮಿಸಿ ಪ್ರತಿ ವಾಹನವನ್ನು ತಪಾಸಣೆ ಮಾಡಲಾಯಿತು.</p>.<p>ಕರ್ತವ್ಯನಿರತ ಸಿಬ್ಬಂದಿಗೆ ಸದಾ ಜಾಗರೂಕರಾಗಿರುವಂತೆ ಸೂಚಿಸಿದ್ದು, ಕಿಡಿಗೇಡಿಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದರು. ಪೊಲೀಸ್ ಇಲಾಖೆಯ ಬಿಗಿ ಕ್ರಮದಿಂದಾಗಿ ಶಬ್-ಎ-ಬರಾತ್ ಕಾರ್ಯಕ್ರಮಗಳು ಯಾವುದೇ ಅಡೆತಡೆಯಿಲ್ಲದೆ ಶ್ರದ್ಧಾಭಕ್ತಿಯಿಂದ ನೆರವೇರಿತು.</p>.<p>ಗಸ್ತು ಕಾರ್ಯದಲ್ಲಿ ಡಿವೈಎಸ್ಪಿ ಲಕ್ಷ್ಮಯ್ಯ, ಪೊಲೀಸ್ ಇನ್ಸ್ಪೆಕ್ಟರ್ ದಯಾನಂದ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ಮುಸ್ಲಿಂ ಸಮುದಾಯದ ಪವಿತ್ರ ಹಬ್ಬಗಳಲ್ಲಿ ಒಂದಾದ ಶಬ್-ಎ-ಬರಾತ್ ಹಿನ್ನೆಲೆ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ಅವರು ಮಂಗಳವಾರ ರಾತ್ರಿ ಖುದ್ದಾಗಿ ರಸ್ತೆಗಿಳಿದು ವಿಶೇಷ ಗಸ್ತು ನಡೆಸುವ ಮೂಲಕ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.</p>.<p>ಶಬ್-ಎ-ಬರಾತ್ ಎಂದರೆ ಕ್ಷಮೆಯ ರಾತ್ರಿ. ಈ ದಿನದಂದು ಮುಸ್ಲಿಂ ಸಮುದಾಯದವರು ರಾತ್ರಿ ಪ್ರಾರ್ಥನೆ ಸಲ್ಲಿಸಿ, ಸಮಾಧಿಗಳಿಗೆ ಭೇಟಿ ನೀಡಿ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುವುದು ರೂಢಿ. ಈ ಸಂದರ್ಭದಲ್ಲಿ ನೂರಾರು ಜನರು ಸಮಾಧಿಗಳ ಬಳಿ ಸೇರುವುದರಿಂದ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದರು.</p>.<p>ನಗರದಲ್ಲಿ ಈ ಹಿಂದೆ ನಡೆದಿದ್ದ ಈದ್ ಮಿಲಾದ್ ವೇಳೆ ಪ್ಯಾಲೆಸ್ಟೀನ್ ಧ್ವಜ ಹಾರಾಡಿಸಿ ಪುಂಡಾಟಿಕೆ. ಉರುಸ್ ಸಮಯದಲ್ಲಿ ಯುವಕರ ಮೇಲೆ ನಡೆದ ದೌರ್ಜನ್ಯ ಹಾಗೂ ಇತ್ತೀಚಿನ ಹಿಂದೂ ಸಮಾಜೋತ್ಸವ ಹಿನ್ನೆಲೆ ಬಂಗಾರಪೇಟೆ ನಗರವನ್ನು ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಲಾಗಿತ್ತು. ಹಾಗಾಗಿ ಎಸ್ಪಿ ಅವರು ಗಸ್ತು ನಡೆಸಿದರು.</p>.<p>ನಗರದ ಎಸ್ಎನ್ ರೆಸಾರ್ಟ್, ಬೂದಿಕೋಟೆ ರಸ್ತೆ ಮತ್ತು ಸೂಲಿಕುಂಟೆ ರಸ್ತೆಗಳಲ್ಲಿ ವಿಶೇಷ ಚೆಕ್ ಪೋಸ್ಟ್ಗಳನ್ನು ನಿರ್ಮಿಸಿ ಪ್ರತಿ ವಾಹನವನ್ನು ತಪಾಸಣೆ ಮಾಡಲಾಯಿತು.</p>.<p>ಕರ್ತವ್ಯನಿರತ ಸಿಬ್ಬಂದಿಗೆ ಸದಾ ಜಾಗರೂಕರಾಗಿರುವಂತೆ ಸೂಚಿಸಿದ್ದು, ಕಿಡಿಗೇಡಿಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದರು. ಪೊಲೀಸ್ ಇಲಾಖೆಯ ಬಿಗಿ ಕ್ರಮದಿಂದಾಗಿ ಶಬ್-ಎ-ಬರಾತ್ ಕಾರ್ಯಕ್ರಮಗಳು ಯಾವುದೇ ಅಡೆತಡೆಯಿಲ್ಲದೆ ಶ್ರದ್ಧಾಭಕ್ತಿಯಿಂದ ನೆರವೇರಿತು.</p>.<p>ಗಸ್ತು ಕಾರ್ಯದಲ್ಲಿ ಡಿವೈಎಸ್ಪಿ ಲಕ್ಷ್ಮಯ್ಯ, ಪೊಲೀಸ್ ಇನ್ಸ್ಪೆಕ್ಟರ್ ದಯಾನಂದ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>