<p><strong>ಕೋಲಾರ:</strong> ಲಾಕ್ಡೌನ್ ಹಿನ್ನೆಲೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿರುವುದು ಸ್ವಾಗತಾರ್ಹ ಎಂದು ರಾಜ್ಯ ಪ್ರದೇಶ ಅಸಂಘಟಿತ ಕಾರ್ಮಿಕ ಪರಿಷತ್ ಅಧ್ಯಕ್ಷ ಕೆ.ವಿ.ಸುರೇಶ್ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>ಅಸಂಘಟಿತ ಕಾರ್ಮಿಕರು ಕೋವಿಡ್ ಹಾಗೂ ಲಾಕ್ಡೌನ್ನಿಂದ ದುಡಿಮೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದರು. ಸರ್ಕಾರ ಅಸಂಘಟಿತ ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸಿ ಹಣಕಾಸು ನೆರವು ಘೋಷಿಸಿರುವ ಸಾಯುವ ಸ್ಥಿತಿಯಲ್ಲಿರುವವರಿಗೆ ಆಮ್ಲಜನಕ ನೀಡಿದಂತಾಗಿದೆ ಎಂದು ತಿಳಿಸಿದ್ದಾರೆ.</p>.<p>ಹಿಂದಿನ ವರ್ಷ ಲಾಕ್ಡೌನ್ ಸಂದರ್ಭದಲ್ಲಿ ಆಟೊ ಮತ್ತು ಟ್ಯಾಕ್ಸಿ ಚಾಲಕರಿಗೆ, ಕ್ಷೌರಿಕರಿಗೆ, ಧೋಬಿಗಳಿಗೆ, ಕಟ್ಟಡ ಕಾರ್ಮಿಕರಿಗೆ ಸಮಾನವಾಗಿ ತಿಂಗಳಿಗೆ ₹ 5 ಸಾವಿರ ಹಣಕಾಸು ನೆರವು ಘೋಷಿಸಲಾಗಿತ್ತು. ಆದರೆ, ಕಾರ್ಮಿಕರಿಗೆ ಪರಿಹಾರ ನೀಡಿರಲಿಲ್ಲ. ಇದೀಗ ಕೋವಿಡ್ 2ನೇ ಅಲೆ ಸುನಾಮಿ ರೀತಿ ಅಪ್ಪಳಿಸುತ್ತಿದ್ದು, ಸೋಂಕು ಶ್ರಮಿಕ ವರ್ಗಕ್ಕೆ ದೊಡ್ಡ ಪೆಟ್ಟು ಕೊಟ್ಟಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p>ಅಸಂಘಟಿತ ಕಾರ್ಮಿಕರಿಗೆ ಮೊದಲ ಲಾಕ್ಡೌನ್ ವೇಳೆ ನೀಡಿದ್ದ ಪರಿಹಾರ ಮೊತ್ತ ₹ 5 ಸಾವಿರವನ್ನು ಈ ಬಾರಿ ಕಡಿತಗೊಳಿಸಿ ₹ 3 ಸಾವಿರ ಕೊಡುವುದಾಗಿ ಸರ್ಕಾರ ಹೇಳಿದೆ. ಜತೆಗೆ ಟೈಲರ್ಗಳು, ಮೆಕ್ಯಾನಿಕ್ಗಳು, ಮನೆ ಕೆಲಸದವರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಚಿಂದಿ ಆಯುವವರು ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ತಲಾ ₹ 2 ಸಾವಿರ ಪರಿಹಾರ ಘೋಷಿಸಿರುವ ಕ್ರಮ ಸರಿಯಿದೆ ಎಂದು ಹೇಳಿದ್ದಾರೆ.</p>.<p>ಕೋವಿಡ್ ಹೆಮ್ಮಾರಿಯು ಕಾರ್ಮಿಕರ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಕೆಲಸದೊಂದಿಗೆ ಜೀವವನ್ನೇ ಕಸಿದುಕೊಳ್ಳುತ್ತಿದೆ. ಕೋವಿಡ್ನಿಂದ ಶ್ರಮಿಕ ವರ್ಗದವರ ಬದುಕು ಬರ್ಬರವಾಗಿದೆ. ಶ್ರಮಿಕ ವರ್ಗಕ್ಕೆ ₹ 10 ಸಾವಿರ ಆರ್ಥಿಕ ನೆರವು ಘೋಷಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಲಾಕ್ಡೌನ್ ಹಿನ್ನೆಲೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿರುವುದು ಸ್ವಾಗತಾರ್ಹ ಎಂದು ರಾಜ್ಯ ಪ್ರದೇಶ ಅಸಂಘಟಿತ ಕಾರ್ಮಿಕ ಪರಿಷತ್ ಅಧ್ಯಕ್ಷ ಕೆ.ವಿ.ಸುರೇಶ್ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>ಅಸಂಘಟಿತ ಕಾರ್ಮಿಕರು ಕೋವಿಡ್ ಹಾಗೂ ಲಾಕ್ಡೌನ್ನಿಂದ ದುಡಿಮೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದರು. ಸರ್ಕಾರ ಅಸಂಘಟಿತ ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸಿ ಹಣಕಾಸು ನೆರವು ಘೋಷಿಸಿರುವ ಸಾಯುವ ಸ್ಥಿತಿಯಲ್ಲಿರುವವರಿಗೆ ಆಮ್ಲಜನಕ ನೀಡಿದಂತಾಗಿದೆ ಎಂದು ತಿಳಿಸಿದ್ದಾರೆ.</p>.<p>ಹಿಂದಿನ ವರ್ಷ ಲಾಕ್ಡೌನ್ ಸಂದರ್ಭದಲ್ಲಿ ಆಟೊ ಮತ್ತು ಟ್ಯಾಕ್ಸಿ ಚಾಲಕರಿಗೆ, ಕ್ಷೌರಿಕರಿಗೆ, ಧೋಬಿಗಳಿಗೆ, ಕಟ್ಟಡ ಕಾರ್ಮಿಕರಿಗೆ ಸಮಾನವಾಗಿ ತಿಂಗಳಿಗೆ ₹ 5 ಸಾವಿರ ಹಣಕಾಸು ನೆರವು ಘೋಷಿಸಲಾಗಿತ್ತು. ಆದರೆ, ಕಾರ್ಮಿಕರಿಗೆ ಪರಿಹಾರ ನೀಡಿರಲಿಲ್ಲ. ಇದೀಗ ಕೋವಿಡ್ 2ನೇ ಅಲೆ ಸುನಾಮಿ ರೀತಿ ಅಪ್ಪಳಿಸುತ್ತಿದ್ದು, ಸೋಂಕು ಶ್ರಮಿಕ ವರ್ಗಕ್ಕೆ ದೊಡ್ಡ ಪೆಟ್ಟು ಕೊಟ್ಟಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p>ಅಸಂಘಟಿತ ಕಾರ್ಮಿಕರಿಗೆ ಮೊದಲ ಲಾಕ್ಡೌನ್ ವೇಳೆ ನೀಡಿದ್ದ ಪರಿಹಾರ ಮೊತ್ತ ₹ 5 ಸಾವಿರವನ್ನು ಈ ಬಾರಿ ಕಡಿತಗೊಳಿಸಿ ₹ 3 ಸಾವಿರ ಕೊಡುವುದಾಗಿ ಸರ್ಕಾರ ಹೇಳಿದೆ. ಜತೆಗೆ ಟೈಲರ್ಗಳು, ಮೆಕ್ಯಾನಿಕ್ಗಳು, ಮನೆ ಕೆಲಸದವರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಚಿಂದಿ ಆಯುವವರು ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ತಲಾ ₹ 2 ಸಾವಿರ ಪರಿಹಾರ ಘೋಷಿಸಿರುವ ಕ್ರಮ ಸರಿಯಿದೆ ಎಂದು ಹೇಳಿದ್ದಾರೆ.</p>.<p>ಕೋವಿಡ್ ಹೆಮ್ಮಾರಿಯು ಕಾರ್ಮಿಕರ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಕೆಲಸದೊಂದಿಗೆ ಜೀವವನ್ನೇ ಕಸಿದುಕೊಳ್ಳುತ್ತಿದೆ. ಕೋವಿಡ್ನಿಂದ ಶ್ರಮಿಕ ವರ್ಗದವರ ಬದುಕು ಬರ್ಬರವಾಗಿದೆ. ಶ್ರಮಿಕ ವರ್ಗಕ್ಕೆ ₹ 10 ಸಾವಿರ ಆರ್ಥಿಕ ನೆರವು ಘೋಷಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>