ಮಾಲೂರು: ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದಿಂದ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳನ್ನು ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿ. ಮುನೇಗೌಡ ಮಾತನಾಡಿ, ನೌಕರರು ಕೆಲಸದ ಒತ್ತಡದ ನಡುವೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ವ್ಯಾಯಾಮ ಮಾಡಬೇಕು. ಯೋಗ, ನಡಿಗೆಯ ಅಭ್ಯಾಸ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕ್ರೀಡೆಗಳು ಬದುಕಿನ ಅವಿಭಾಜ್ಯ ಅಂಗವಾಗಿವೆ. ಈ ನಿಟ್ಟಿನಲ್ಲಿ ಸಂಘದಿಂದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಜಯಗಳಿಸಿರುವ ಕ್ರೀಡಾಪಟುಗಳು ರಾಜ್ಯಮಟ್ಟದಲ್ಲಿಯೂ ಗೆಲ್ಲಬೇಕು ಎಂದು ಶುಭ ಕೋರಿದರು.
ಉಪ ಪ್ರಾಂಶುಪಾಲ ರಾಮಕೃಷ್ಣ, ಬಿಆರ್ಸಿ ಸಮನ್ವಯಾಧಿಕಾರಿ ನಂಜುಂಡಗೌಡ, ತಿಮ್ಮರಾಯಪ್ಪ, ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಟಿ. ಸುರೇಶ್, ಹಿರಿಯ ಉಪಾಧ್ಯಕ್ಷರಾದ ಆನಂದಕುಮಾರ್, ಗಂಗಾರಾಮ್, ಶಿವಣ್ಣ, ಪ್ರದೀಪ್, ಮಹೇಂದ್ರ ಹಾಜರಿದ್ದರು